<p><strong>ಬೆಂಗಳೂರು:</strong> ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಷೂ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.<br /> <br /> ತಮಿಳುನಾಡಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಷೂ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಮಕ್ಕಳಿಗೂ ಷೂ ನೀಡಬೇಕು ಎಂಬ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಆರ್ಥಿಕ ಪರಿಸ್ಥಿತಿ ಆಧರಿಸಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಯೋಜನೆಗೆ ಎಷ್ಟು ಹಣ ವೆಚ್ಚವಾಗಲಿದೆ ಎಂಬ ಮಾಹಿತಿ ಸದ್ಯ ಲಭ್ಯವಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ ಎಂದರು.<br /> <br /> ಶಾಲಾ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಸಿದ್ದರಾಮಯ್ಯ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವಾಗಿನಿಂದ ಹಾಲು ಕೊಡಬೇಕು ಎಂಬುದು ಇನ್ನು ನಿರ್ಧಾರವಾಗಿಲ್ಲ. ಈ ಯೋಜನೆ ಜಾರಿಗೆ 600 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಸಂಪನ್ಮೂಲಗಳ ಲಭ್ಯತೆ ನೋಡಿ ಕೊಂಡು ಅನುಷ್ಠಾನದ ಸ್ವರೂಪವನ್ನು ನಿರ್ಧರಿಸಲಾಗುವುದು ಎಂದರು.<br /> <br /> ಪ್ರತಿನಿತ್ಯ ಹಾಲು ನೀಡುವ ಬಗ್ಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವ ಸಲ್ಲಿಸಿದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಪ್ರತಿನಿತ್ಯ ಹಾಲು ಕೊಡಬೇಕಾ ಅಥವಾ ದಿನ ಬಿಟ್ಟು ದಿನ ಹಾಲು ಕೊಡಬೇಕಾ ಎಂಬ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿ ಸಲಿದ್ದಾರೆ ಎಂದು ತಿಳಿಸಿದರು.<br /> <br /> `ಕರ್ನಾಟಕ ಪಬ್ಲಿಕ್ ಶಾಲೆ' ಪ್ರಾರಂಭಿಸುವ ಬಗ್ಗೆ ಪ್ರಸ್ತಾಪ ಆಗಿದೆ ಅಷ್ಟೆ. ಇದರ ಸಾಧಕ - ಬಾಧಕಗಳ ಬಗ್ಗೆ ಚರ್ಚೆಯಾಗಬೇಕು. ಕೆಲವೆಡೆ ಮಕ್ಕಳೇ ಇಲ್ಲ. ಆದರೆ, ಶಿಕ್ಷಕರು ಇದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಕಡಿಮೆ ಆಗುತ್ತಿರುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಅಭಿಪ್ರಾಯ ಇದೆ ಎಂದರು.<br /> <br /> ಪಠ್ಯಪುಸ್ತಕ ಮತ್ತು ಸಮವಸ್ತ್ರ ಪೂರೈಕೆಯಲ್ಲಿ ಆಗಿರುವ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ. ಈ ತಿಂಗಳ ಅಂತ್ಯದ ಒಳಗೆ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಪೂರೈಸಲಾಗುವುದು. ಮುಂದಿನ ವರ್ಷ ಈ ರೀತಿ ಆಗದಂತೆ ನೋಡಿಕೊಳ್ಳಲಾ ಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಷೂ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.<br /> <br /> ತಮಿಳುನಾಡಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಷೂ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಮಕ್ಕಳಿಗೂ ಷೂ ನೀಡಬೇಕು ಎಂಬ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಆರ್ಥಿಕ ಪರಿಸ್ಥಿತಿ ಆಧರಿಸಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಯೋಜನೆಗೆ ಎಷ್ಟು ಹಣ ವೆಚ್ಚವಾಗಲಿದೆ ಎಂಬ ಮಾಹಿತಿ ಸದ್ಯ ಲಭ್ಯವಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ ಎಂದರು.<br /> <br /> ಶಾಲಾ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಸಿದ್ದರಾಮಯ್ಯ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವಾಗಿನಿಂದ ಹಾಲು ಕೊಡಬೇಕು ಎಂಬುದು ಇನ್ನು ನಿರ್ಧಾರವಾಗಿಲ್ಲ. ಈ ಯೋಜನೆ ಜಾರಿಗೆ 600 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಸಂಪನ್ಮೂಲಗಳ ಲಭ್ಯತೆ ನೋಡಿ ಕೊಂಡು ಅನುಷ್ಠಾನದ ಸ್ವರೂಪವನ್ನು ನಿರ್ಧರಿಸಲಾಗುವುದು ಎಂದರು.<br /> <br /> ಪ್ರತಿನಿತ್ಯ ಹಾಲು ನೀಡುವ ಬಗ್ಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವ ಸಲ್ಲಿಸಿದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಪ್ರತಿನಿತ್ಯ ಹಾಲು ಕೊಡಬೇಕಾ ಅಥವಾ ದಿನ ಬಿಟ್ಟು ದಿನ ಹಾಲು ಕೊಡಬೇಕಾ ಎಂಬ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿ ಸಲಿದ್ದಾರೆ ಎಂದು ತಿಳಿಸಿದರು.<br /> <br /> `ಕರ್ನಾಟಕ ಪಬ್ಲಿಕ್ ಶಾಲೆ' ಪ್ರಾರಂಭಿಸುವ ಬಗ್ಗೆ ಪ್ರಸ್ತಾಪ ಆಗಿದೆ ಅಷ್ಟೆ. ಇದರ ಸಾಧಕ - ಬಾಧಕಗಳ ಬಗ್ಗೆ ಚರ್ಚೆಯಾಗಬೇಕು. ಕೆಲವೆಡೆ ಮಕ್ಕಳೇ ಇಲ್ಲ. ಆದರೆ, ಶಿಕ್ಷಕರು ಇದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಕಡಿಮೆ ಆಗುತ್ತಿರುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಅಭಿಪ್ರಾಯ ಇದೆ ಎಂದರು.<br /> <br /> ಪಠ್ಯಪುಸ್ತಕ ಮತ್ತು ಸಮವಸ್ತ್ರ ಪೂರೈಕೆಯಲ್ಲಿ ಆಗಿರುವ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ. ಈ ತಿಂಗಳ ಅಂತ್ಯದ ಒಳಗೆ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಪೂರೈಸಲಾಗುವುದು. ಮುಂದಿನ ವರ್ಷ ಈ ರೀತಿ ಆಗದಂತೆ ನೋಡಿಕೊಳ್ಳಲಾ ಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>