<p><strong>ಚಿಕ್ಕಮಗಳೂರು:</strong> ರಾಷ್ಟ್ರದಲ್ಲಿ ಇನ್ನು ಪ್ರಾದೇಶಿಕ ಪಕ್ಷಗಳಿಗೆ ಮಾತ್ರ ಭವಿಷ್ಯ. ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿ ಸುತ್ತಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಇದನ್ನು ಮತದಾರರು ಸಾಬೀತು ಪಡಿಸಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು. <br /> <br /> ನಗರದಲ್ಲಿ ಗುರುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಜನಹಿತ ಕಾಪಾಡಲು ಸಂಪೂರ್ಣ ವಿಫಲವಾಗಿವೆ ಎಂದು ಕಿಡಿಕಾರಿದರು.<br /> <br /> ಈ ಉಪ ಚುನಾವಣೆಯಲ್ಲಿ ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಚರ್ಚಿಸಲು ಇಷ್ಟಪಡುವುದಿಲ್ಲ. ಆದರೆ, ಕಾಂಗ್ರೆಸಿಗರು ತಮ್ಮ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಅವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ಯೋಗ್ಯತೆ ಇದೆ? ಗಾಂಧಿ ಹೆಸರು ಹೇಳುವ ಇವರು ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ.<br /> <br /> ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದ ನಡೆಯುತ್ತಿದೆ. ರಾಜ್ಯದಲ್ಲಿಯೂ ಒಂದೆರಡು ಜಾತಿಯ ಕೈಯಲ್ಲಿ ಅಧಿಕಾರ ಕೇಂದ್ರಿತವಾಗಿದೆ. ಮತದಾರರು ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.<br /> <br /> ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಗುಲ್ಬರ್ಗ ಉಪ ಚುನಾವಣೆಯಲ್ಲಿ ಆದಂತೆ ಈ ಬಾರಿ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ನೀಡಲಿದ್ದಾರೆ. ಯುವಕರು, ಮುಸ್ಲಿಮರು ಪ್ರವಾಹದ ರೀತಿಯಲ್ಲಿ ಸ್ಪಪ್ರೇರಣೆಯಿಂದ ಸೇರಿದ್ದಾರೆ ಎಂದರು.<br /> <br /> ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದಾಗಲು ಮುಸ್ಲಿಂ ಸಮುದಾಯದ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ. ಸಿ.ಎಂ.ಇಬ್ರಾಹಿಂಗೆ ರಾಜಕೀಯ ಜೀವನ ನೀಡಿದ್ದೇ ದೇವೇಗೌಡರು. ಆದರೆ, ಇಂದು ಅದೆಲ್ಲವನ್ನೂ ಮರೆತು ಟೀಕಿಸುವ ಮೂಲಕ ಉಪಕಾರ ಮರೆತು ವರ್ತಿಸುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹಮ್ಮದ್ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಸವನಗೌಡ ಪಾಟೀಲ ಯತ್ನಾಳ್, ಜೆಡಿಎಸ್ ರಾಜ್ಯ ಘಟಕ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ, ಸಂಸದ ಚೆಲುವರಾಯಸ್ವಾಮಿ, ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ, ಪಕ್ಷದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ, ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಎಚ್. ದೇವರಾಜ್ ಇನ್ನಿತರರು ಇದ್ದರು. <br /> ಪಕ್ಷದ ಶಕ್ತಿ ಪ್ರದರ್ಶನ: ಕಾರ್ಯಕ್ರಮಕ್ಕೂ ಮೊದಲು ಎಚ್.ಡಿ.ಕುಮಾರಸ್ವಾಮಿ ನಗರದ ಎಂ.ಜಿ.ರಸ್ತೆ, ಐ.ಜಿ. ರಸ್ತೆ, ರತ್ನಗಿರಿ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರ ಮತಯಾಚಿಸಿದರು. <br /> <br /> ಪಕ್ಷದ ಶಕ್ತಿ ಪ್ರದರ್ಶನಕ್ಕಾಗಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು. ಎಂ.ಜಿ.ರಸ್ತೆ ಮತ್ತು ಐ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಿಕ್ಕಿರಿದು ಸೇರಿದ್ದ ಕಾರ್ಯಕರ್ತರಿಂದಾಗಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಾಷ್ಟ್ರದಲ್ಲಿ ಇನ್ನು ಪ್ರಾದೇಶಿಕ ಪಕ್ಷಗಳಿಗೆ ಮಾತ್ರ ಭವಿಷ್ಯ. ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿ ಸುತ್ತಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಇದನ್ನು ಮತದಾರರು ಸಾಬೀತು ಪಡಿಸಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು. <br /> <br /> ನಗರದಲ್ಲಿ ಗುರುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಜನಹಿತ ಕಾಪಾಡಲು ಸಂಪೂರ್ಣ ವಿಫಲವಾಗಿವೆ ಎಂದು ಕಿಡಿಕಾರಿದರು.<br /> <br /> ಈ ಉಪ ಚುನಾವಣೆಯಲ್ಲಿ ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಚರ್ಚಿಸಲು ಇಷ್ಟಪಡುವುದಿಲ್ಲ. ಆದರೆ, ಕಾಂಗ್ರೆಸಿಗರು ತಮ್ಮ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಅವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ಯೋಗ್ಯತೆ ಇದೆ? ಗಾಂಧಿ ಹೆಸರು ಹೇಳುವ ಇವರು ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ.<br /> <br /> ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದ ನಡೆಯುತ್ತಿದೆ. ರಾಜ್ಯದಲ್ಲಿಯೂ ಒಂದೆರಡು ಜಾತಿಯ ಕೈಯಲ್ಲಿ ಅಧಿಕಾರ ಕೇಂದ್ರಿತವಾಗಿದೆ. ಮತದಾರರು ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.<br /> <br /> ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಗುಲ್ಬರ್ಗ ಉಪ ಚುನಾವಣೆಯಲ್ಲಿ ಆದಂತೆ ಈ ಬಾರಿ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ನೀಡಲಿದ್ದಾರೆ. ಯುವಕರು, ಮುಸ್ಲಿಮರು ಪ್ರವಾಹದ ರೀತಿಯಲ್ಲಿ ಸ್ಪಪ್ರೇರಣೆಯಿಂದ ಸೇರಿದ್ದಾರೆ ಎಂದರು.<br /> <br /> ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದಾಗಲು ಮುಸ್ಲಿಂ ಸಮುದಾಯದ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ. ಸಿ.ಎಂ.ಇಬ್ರಾಹಿಂಗೆ ರಾಜಕೀಯ ಜೀವನ ನೀಡಿದ್ದೇ ದೇವೇಗೌಡರು. ಆದರೆ, ಇಂದು ಅದೆಲ್ಲವನ್ನೂ ಮರೆತು ಟೀಕಿಸುವ ಮೂಲಕ ಉಪಕಾರ ಮರೆತು ವರ್ತಿಸುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹಮ್ಮದ್ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಸವನಗೌಡ ಪಾಟೀಲ ಯತ್ನಾಳ್, ಜೆಡಿಎಸ್ ರಾಜ್ಯ ಘಟಕ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ, ಸಂಸದ ಚೆಲುವರಾಯಸ್ವಾಮಿ, ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ, ಪಕ್ಷದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ, ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಎಚ್. ದೇವರಾಜ್ ಇನ್ನಿತರರು ಇದ್ದರು. <br /> ಪಕ್ಷದ ಶಕ್ತಿ ಪ್ರದರ್ಶನ: ಕಾರ್ಯಕ್ರಮಕ್ಕೂ ಮೊದಲು ಎಚ್.ಡಿ.ಕುಮಾರಸ್ವಾಮಿ ನಗರದ ಎಂ.ಜಿ.ರಸ್ತೆ, ಐ.ಜಿ. ರಸ್ತೆ, ರತ್ನಗಿರಿ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರ ಮತಯಾಚಿಸಿದರು. <br /> <br /> ಪಕ್ಷದ ಶಕ್ತಿ ಪ್ರದರ್ಶನಕ್ಕಾಗಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು. ಎಂ.ಜಿ.ರಸ್ತೆ ಮತ್ತು ಐ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಿಕ್ಕಿರಿದು ಸೇರಿದ್ದ ಕಾರ್ಯಕರ್ತರಿಂದಾಗಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>