<p><strong>ಬೆಂಗಳೂರು:</strong> ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಸೇರಿದವರೇ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಾಗಿದ್ದು, ಅವರೆಲ್ಲ ಪ್ರಗತಿಪರ ನಿಲುವಿನ ಪ್ರಾಧ್ಯಾಪಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರಶೇಖರ್ ಆರೋಪಿಸಿದರು.<br /> <br /> ಕುವೆಂಪು ವಿ.ವಿ.ಯ ಪ್ರೊ.ರಾಜೇಂದ್ರ ಚೆನ್ನಿ ಹಾಗೂ ಹಂಪಿ ವಿ.ವಿ.ಯ ಪ್ರೊ.ಟಿ.ಆರ್. ಚಂದ್ರಶೇಖರ್ ಅವರಿಗೆ ಅಲ್ಲಿನ ಕೆಲವು ಸಿಂಡಿಕೇಟ್ ಸದಸ್ಯರು ಕಿರುಕುಳ ನೀಡುತ್ತಿದ್ದಾರೆ. ಈ ವಿಷಯವನ್ನು ರಾಜ್ಯಪಾಲರ ಗಮನಕ್ಕೂ ತರಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕಿರುಕುಳ ನೀಡುತ್ತಿರುವ ಸಿಂಡಿಕೇಟ್ ಸದಸ್ಯರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ ಪ್ರಕಾರ ಸಿಂಡಿಕೇಟ್ ಸದಸ್ಯರಾಗುವವರು ಶಿಕ್ಷಣ ತಜ್ಞರಾಗಿರಬೇಕು ಇಲ್ಲವೇ ಆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.ಆದರೆ ಬಿಜೆಪಿ ಸರ್ಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದೆ ಎಂದು ದೂರಿದರು.<br /> ತುಮಕೂರು ವಿ.ವಿ ಘಟಿಕೋತ್ಸವ ಸಮಾರಂಭವನ್ನು ತುಮಕೂರಿನಲ್ಲಿ ಏರ್ಪಡಿಸದೆ ರಾಜಭವನದ ಗಾಜಿನ ಮನೆಯಲ್ಲಿ ನಡೆಸಿರುವುದು ಸರಿಯಲ್ಲ ಎಂದರು.<br /> <br /> ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ಹಾಗೂ ಕುಲಸಚಿವರ ನಡುವೆ ಸಮನ್ವಯ ಇಲ್ಲದಿರುವುದರಿಂದ ವಿ.ವಿ.ಯ ಅಭಿವೃದ್ಧಿಗೆ ತೊಡಕಾಗಿದೆ. ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಸೇರಿದವರೇ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಾಗಿದ್ದು, ಅವರೆಲ್ಲ ಪ್ರಗತಿಪರ ನಿಲುವಿನ ಪ್ರಾಧ್ಯಾಪಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರಶೇಖರ್ ಆರೋಪಿಸಿದರು.<br /> <br /> ಕುವೆಂಪು ವಿ.ವಿ.ಯ ಪ್ರೊ.ರಾಜೇಂದ್ರ ಚೆನ್ನಿ ಹಾಗೂ ಹಂಪಿ ವಿ.ವಿ.ಯ ಪ್ರೊ.ಟಿ.ಆರ್. ಚಂದ್ರಶೇಖರ್ ಅವರಿಗೆ ಅಲ್ಲಿನ ಕೆಲವು ಸಿಂಡಿಕೇಟ್ ಸದಸ್ಯರು ಕಿರುಕುಳ ನೀಡುತ್ತಿದ್ದಾರೆ. ಈ ವಿಷಯವನ್ನು ರಾಜ್ಯಪಾಲರ ಗಮನಕ್ಕೂ ತರಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಕಿರುಕುಳ ನೀಡುತ್ತಿರುವ ಸಿಂಡಿಕೇಟ್ ಸದಸ್ಯರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ ಪ್ರಕಾರ ಸಿಂಡಿಕೇಟ್ ಸದಸ್ಯರಾಗುವವರು ಶಿಕ್ಷಣ ತಜ್ಞರಾಗಿರಬೇಕು ಇಲ್ಲವೇ ಆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.ಆದರೆ ಬಿಜೆಪಿ ಸರ್ಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದೆ ಎಂದು ದೂರಿದರು.<br /> ತುಮಕೂರು ವಿ.ವಿ ಘಟಿಕೋತ್ಸವ ಸಮಾರಂಭವನ್ನು ತುಮಕೂರಿನಲ್ಲಿ ಏರ್ಪಡಿಸದೆ ರಾಜಭವನದ ಗಾಜಿನ ಮನೆಯಲ್ಲಿ ನಡೆಸಿರುವುದು ಸರಿಯಲ್ಲ ಎಂದರು.<br /> <br /> ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ಹಾಗೂ ಕುಲಸಚಿವರ ನಡುವೆ ಸಮನ್ವಯ ಇಲ್ಲದಿರುವುದರಿಂದ ವಿ.ವಿ.ಯ ಅಭಿವೃದ್ಧಿಗೆ ತೊಡಕಾಗಿದೆ. ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>