<p><strong>ನವದೆಹಲಿ (ಪಿಟಿಐ): </strong> ಪ್ರಾಮಾಣಿಕತೆ ಮತ್ತು ವೃತ್ತಿಪರತೆಯಿಂದ ಸೇವೆ ಸಲ್ಲಿಸುತ್ತಿರುವ ಏರ್ ಇಂಡಿಯಾ ಭದ್ರತಾ ವಿಭಾಗದ ನೌಕರ ಸುಭಾಷ್ಚಂದ್ರ ಅವರಿಗೆ ಸೇವಾ ಹಿರಿತನ ಇಲ್ಲದಿದ್ದರೂ ಅಧಿಕಾರಿ ಹುದ್ದೆಗೆ ಬಡ್ತಿ ನೀಡಲಾಗಿದೆ.<br /> <br /> ಪ್ರಯಾಣಿಕರು ವಿಮಾನದಲ್ಲಿ ಅಥವಾ ವಿಮಾನ ನಿಲ್ದಾಣದಲ್ಲಿ ಬಿಟ್ಟುಹೋಗಿದ್ದ ಹಣ, ಬೆಲೆ ಬಾಳುವ ವಸ್ತುಗಳನ್ನು ವಾಪಸ್ ಮಾಡುವ ಮೂಲಕ ಸುಭಾಷ್ಚಂದ್ರ ಅವರು ಏರ್ ಇಂಡಿಯಾ ಸಂಸ್ಥೆಗೆ ಒಳ್ಳೆಯ ಹೆಸರು ತಂದಿದ್ದಾರೆ.<br /> <br /> ಒಮ್ಮೆ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಐದು ಲಕ್ಷ ವಿದೇಶಿ ಕರೆನ್ಸಿಯನ್ನು ಮತ್ತು ಚಿನ್ನದ ಆಭರಣವನ್ನು ವಾಪಸ್ ಮಾಡಿದ್ದಾರೆ. ಇವರ ಪ್ರಾಮಾಣಿಕತೆಯನ್ನು ಮೆಚ್ಚಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶ್ವನಿ ಲೋಹಾನಿ ಅವರು ಸೇವಾ ಹಿರಿತನ ಇಲ್ಲದಿದ್ದರೂ ಅಧಿಕಾರಿ ಹುದ್ದೆಗೆ ಬಡ್ತಿ ನೀಡಿದ್ದಾರೆ.<br /> <br /> ಸ್ವಾತಂತ್ರ್ಯ ದಿನಾಚರಣೆಯಂದು ಭದ್ರತಾ ವಿಭಾಗದ ನಿರ್ದೇಶಕ ಐಪಿಎಸ್ ಅಧಿಕಾರಿ ಅಲೋಕ್ ಸಿಂಗ್ ಅವರು ಸುಭಾಷ್ಚಂದ್ರ ಅವರಿಗೆ ಅಧಿಕಾರಿ ಹುದ್ದೆಯ ಬಡ್ತಿ ಆದೇಶವನ್ನು ನೀಡಿದರು.<br /> <br /> ವಿಜ್ಞಾನ ಪದವೀಧರರಾಗಿರುವ ಸುಭಾಷ್ಚಂದ್ರ ಅವರು ವಿಮಾನ ಯಾನಕ್ಕೆ ಸಂಬಂಧಿಸಿದ ಅನೇಕ ಭದ್ರತಾ ಕೋರ್ಸ್ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong> ಪ್ರಾಮಾಣಿಕತೆ ಮತ್ತು ವೃತ್ತಿಪರತೆಯಿಂದ ಸೇವೆ ಸಲ್ಲಿಸುತ್ತಿರುವ ಏರ್ ಇಂಡಿಯಾ ಭದ್ರತಾ ವಿಭಾಗದ ನೌಕರ ಸುಭಾಷ್ಚಂದ್ರ ಅವರಿಗೆ ಸೇವಾ ಹಿರಿತನ ಇಲ್ಲದಿದ್ದರೂ ಅಧಿಕಾರಿ ಹುದ್ದೆಗೆ ಬಡ್ತಿ ನೀಡಲಾಗಿದೆ.<br /> <br /> ಪ್ರಯಾಣಿಕರು ವಿಮಾನದಲ್ಲಿ ಅಥವಾ ವಿಮಾನ ನಿಲ್ದಾಣದಲ್ಲಿ ಬಿಟ್ಟುಹೋಗಿದ್ದ ಹಣ, ಬೆಲೆ ಬಾಳುವ ವಸ್ತುಗಳನ್ನು ವಾಪಸ್ ಮಾಡುವ ಮೂಲಕ ಸುಭಾಷ್ಚಂದ್ರ ಅವರು ಏರ್ ಇಂಡಿಯಾ ಸಂಸ್ಥೆಗೆ ಒಳ್ಳೆಯ ಹೆಸರು ತಂದಿದ್ದಾರೆ.<br /> <br /> ಒಮ್ಮೆ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಐದು ಲಕ್ಷ ವಿದೇಶಿ ಕರೆನ್ಸಿಯನ್ನು ಮತ್ತು ಚಿನ್ನದ ಆಭರಣವನ್ನು ವಾಪಸ್ ಮಾಡಿದ್ದಾರೆ. ಇವರ ಪ್ರಾಮಾಣಿಕತೆಯನ್ನು ಮೆಚ್ಚಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶ್ವನಿ ಲೋಹಾನಿ ಅವರು ಸೇವಾ ಹಿರಿತನ ಇಲ್ಲದಿದ್ದರೂ ಅಧಿಕಾರಿ ಹುದ್ದೆಗೆ ಬಡ್ತಿ ನೀಡಿದ್ದಾರೆ.<br /> <br /> ಸ್ವಾತಂತ್ರ್ಯ ದಿನಾಚರಣೆಯಂದು ಭದ್ರತಾ ವಿಭಾಗದ ನಿರ್ದೇಶಕ ಐಪಿಎಸ್ ಅಧಿಕಾರಿ ಅಲೋಕ್ ಸಿಂಗ್ ಅವರು ಸುಭಾಷ್ಚಂದ್ರ ಅವರಿಗೆ ಅಧಿಕಾರಿ ಹುದ್ದೆಯ ಬಡ್ತಿ ಆದೇಶವನ್ನು ನೀಡಿದರು.<br /> <br /> ವಿಜ್ಞಾನ ಪದವೀಧರರಾಗಿರುವ ಸುಭಾಷ್ಚಂದ್ರ ಅವರು ವಿಮಾನ ಯಾನಕ್ಕೆ ಸಂಬಂಧಿಸಿದ ಅನೇಕ ಭದ್ರತಾ ಕೋರ್ಸ್ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>