<p>ಬೆಂಗಳೂರು: `ಮಂತ್ರಿಗಳು ಅಧಿಕಾರಿಗಳನ್ನು ಪ್ರೀತಿಯಿಂದ ಕಂಡಾಗ ಇಲಾಖೆಗಳಲ್ಲಿ ಪ್ರಗತಿ ಕಾಣಲು ಸಾಧ್ಯ~ ಎಂದು ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ `ಸಮಾಜ ಕಲ್ಯಾಣ ವಾರ್ತೆ~ ತ್ರೈ ಮಾಸಿಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, `ಕೇವಲ ಅಧಿಕಾರಿಗಳ ಮೇಲೆ ಕೋಪ ಮಾಡಿಕೊಳ್ಳುವುದರಿಂದ ಇಲಾಖೆಗಳಲ್ಲಿ ಯಾವುದೇ ಹೊಸ ಬದಲಾವಣೆಗಳು ಸಾಧ್ಯವಿಲ್ಲ. ಮಂತ್ರಿಗಳು ಅಧಿಕಾರಿಗಳ ಮನಃಪರಿವರ್ತನೆಯ ಮೂಲಕ ಇಲಾಖೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಮಂತ್ರಿಗಳೂ ಯೋಚಿಸಬೇಕು~ ಎಂದರು.<br /> <br /> `ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಳಿದ ಇಲಾಖೆಗಳ ಅಧಿಕಾರಿಗಳಿಗಿಂತಲೂ ಭಿನ್ನವಾದ ವ್ಯಕ್ತಿತ್ವ ಹೊಂದಬೇಕಾಗುತ್ತದೆ. ಇಲಾಖೆಯ ಹೆಸರೇ ಹೇಳುವಂತೆ ಸಮಾಜ ಕಲ್ಯಾಣದ ಕೆಲಸಕ್ಕೆ ಸೇವಾ ಮನೋಭಾವವನ್ನು ಅಧಿಕಾರಿಗಳು ರೂಢಿಸಿಕೊಳ್ಳಬೇಕು. ತಳ ಸಮುದಾಯದ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೊಂದಿ ಅಧಿಕಾರಿಗಳು ಕೆಲಸ ಮಾಡಬೇಕು~ ಎಂದು ಅವರು ಸೂಚನೆ ನೀಡಿದರು.<br /> <br /> ತ್ರೈಮಾಸಿಕ ಬಗ್ಗೆ ಮಾತನಾಡಿದ ಅವರು, `ಸಮಾಜ ಕಲ್ಯಾಣ ಇಲಾಖೆಯ ಮಾಹಿತಿಗಳನ್ನು ಒಳಗೊಂಡ ತ್ರೈಮಾಸಿಕ ಅಧಿಕಾರಿಗಳೂ ಸೇರಿದಂತೆ ಎಲ್ಲರಿಗೂ ಉಪಯುಕ್ತವಾಗಿದೆ. ಇಲಾಖೆಯ ಪ್ರಗತಿ ಹಾಗೂ ಯೋಜನೆಗಳ ಬಗ್ಗೆಯೂ ಈ ಪತ್ರಿಕೆಯಲ್ಲಿ ಪ್ರಕಟಿಸುವ ಕೆಲಸವಾಗಬೇಕು. ಸರ್ಕಾರಿ ಆದೇಶ ಹಾಗೂ ಅಧಿಸೂಚನೆಗಳನ್ನು ಪ್ರಕಟಿಸಲು ಪತ್ರಿಕೆಯನ್ನು ಬಳಸಿಕೊಳ್ಳಬೇಕು~ ಎಂದರು.<br /> <br /> ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ನವೀನ್ ರಾಜ್ ಸಿಂಹ ಮಾತನಾಡಿ, `ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಇಲಾಖೆಯ ಬೆಳವಣಿಗೆಗೆ ಅಧಿಕಾರಿಗಳು ಮುಂದಾಗಬೇಕು. ಕಂಪ್ಯೂಟರ್ನ ಸಮರ್ಥ ಬಳಕೆಯಿಂದ ಇಲಾಖೆಯಲ್ಲಿ ಪಾರದರ್ಶಕತೆ ತರಲು ಸಾಧ್ಯವಿದೆ. ಇಲಾಖೆಯ ಪ್ರಗತಿ ಹಾಗೂ ಕೌಶಲ್ಯ ವೃದ್ಧಿಗಾಗಿ ಎಲ್ಲ ಅಧಿಕಾರಿಗಳೂ ಆಧುನಿಕ ತಂತ್ರಜ್ಞಾನಗಳನ್ನು ತಮ್ಮ ಕೆಲಸಗಳಲ್ಲಿ ಅಳವಡಿಸಿಕೊಳ್ಳಬೇಕು~ ಎಂದರು.<br /> <br /> ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಎನ್. ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮಂತ್ರಿಗಳು ಅಧಿಕಾರಿಗಳನ್ನು ಪ್ರೀತಿಯಿಂದ ಕಂಡಾಗ ಇಲಾಖೆಗಳಲ್ಲಿ ಪ್ರಗತಿ ಕಾಣಲು ಸಾಧ್ಯ~ ಎಂದು ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ `ಸಮಾಜ ಕಲ್ಯಾಣ ವಾರ್ತೆ~ ತ್ರೈ ಮಾಸಿಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, `ಕೇವಲ ಅಧಿಕಾರಿಗಳ ಮೇಲೆ ಕೋಪ ಮಾಡಿಕೊಳ್ಳುವುದರಿಂದ ಇಲಾಖೆಗಳಲ್ಲಿ ಯಾವುದೇ ಹೊಸ ಬದಲಾವಣೆಗಳು ಸಾಧ್ಯವಿಲ್ಲ. ಮಂತ್ರಿಗಳು ಅಧಿಕಾರಿಗಳ ಮನಃಪರಿವರ್ತನೆಯ ಮೂಲಕ ಇಲಾಖೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಮಂತ್ರಿಗಳೂ ಯೋಚಿಸಬೇಕು~ ಎಂದರು.<br /> <br /> `ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಳಿದ ಇಲಾಖೆಗಳ ಅಧಿಕಾರಿಗಳಿಗಿಂತಲೂ ಭಿನ್ನವಾದ ವ್ಯಕ್ತಿತ್ವ ಹೊಂದಬೇಕಾಗುತ್ತದೆ. ಇಲಾಖೆಯ ಹೆಸರೇ ಹೇಳುವಂತೆ ಸಮಾಜ ಕಲ್ಯಾಣದ ಕೆಲಸಕ್ಕೆ ಸೇವಾ ಮನೋಭಾವವನ್ನು ಅಧಿಕಾರಿಗಳು ರೂಢಿಸಿಕೊಳ್ಳಬೇಕು. ತಳ ಸಮುದಾಯದ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೊಂದಿ ಅಧಿಕಾರಿಗಳು ಕೆಲಸ ಮಾಡಬೇಕು~ ಎಂದು ಅವರು ಸೂಚನೆ ನೀಡಿದರು.<br /> <br /> ತ್ರೈಮಾಸಿಕ ಬಗ್ಗೆ ಮಾತನಾಡಿದ ಅವರು, `ಸಮಾಜ ಕಲ್ಯಾಣ ಇಲಾಖೆಯ ಮಾಹಿತಿಗಳನ್ನು ಒಳಗೊಂಡ ತ್ರೈಮಾಸಿಕ ಅಧಿಕಾರಿಗಳೂ ಸೇರಿದಂತೆ ಎಲ್ಲರಿಗೂ ಉಪಯುಕ್ತವಾಗಿದೆ. ಇಲಾಖೆಯ ಪ್ರಗತಿ ಹಾಗೂ ಯೋಜನೆಗಳ ಬಗ್ಗೆಯೂ ಈ ಪತ್ರಿಕೆಯಲ್ಲಿ ಪ್ರಕಟಿಸುವ ಕೆಲಸವಾಗಬೇಕು. ಸರ್ಕಾರಿ ಆದೇಶ ಹಾಗೂ ಅಧಿಸೂಚನೆಗಳನ್ನು ಪ್ರಕಟಿಸಲು ಪತ್ರಿಕೆಯನ್ನು ಬಳಸಿಕೊಳ್ಳಬೇಕು~ ಎಂದರು.<br /> <br /> ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ನವೀನ್ ರಾಜ್ ಸಿಂಹ ಮಾತನಾಡಿ, `ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಇಲಾಖೆಯ ಬೆಳವಣಿಗೆಗೆ ಅಧಿಕಾರಿಗಳು ಮುಂದಾಗಬೇಕು. ಕಂಪ್ಯೂಟರ್ನ ಸಮರ್ಥ ಬಳಕೆಯಿಂದ ಇಲಾಖೆಯಲ್ಲಿ ಪಾರದರ್ಶಕತೆ ತರಲು ಸಾಧ್ಯವಿದೆ. ಇಲಾಖೆಯ ಪ್ರಗತಿ ಹಾಗೂ ಕೌಶಲ್ಯ ವೃದ್ಧಿಗಾಗಿ ಎಲ್ಲ ಅಧಿಕಾರಿಗಳೂ ಆಧುನಿಕ ತಂತ್ರಜ್ಞಾನಗಳನ್ನು ತಮ್ಮ ಕೆಲಸಗಳಲ್ಲಿ ಅಳವಡಿಸಿಕೊಳ್ಳಬೇಕು~ ಎಂದರು.<br /> <br /> ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಎನ್. ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>