<p>ಬೆಂಗಳೂರು: ಮೈಸೂರು ರಸ್ತೆ ಸಮೀಪದ ಬಾಪೂಜಿನಗರದಲ್ಲಿ ಯುವಕನೊಬ್ಬ ತನ್ನ ಪಕ್ಕದ ಮನೆಯ ಯುವತಿಯ ಮುಖವನ್ನು ಬ್ಲೇಡ್ನಿಂದ ಕೊಯ್ದು ಹಲ್ಲೆ ನಡೆಸಿರುವ ಶುಕ್ರವಾರ ನಡೆದಿದೆ.<br /> <br /> ಬಾಪೂಜಿನಗರ ಏಳನೇ ಅಡ್ಡರಸ್ತೆ ನಿವಾಸಿ ಗಣೇಶ್ (25) ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.<br /> <br /> ಖಾಸಗಿ ಕಂಪೆನಿ ಉದ್ಯೋಗಿಯಾದ ಗಣೇಶ್, ತನ್ನ ಪಕ್ಕದ ಮನೆಯಲ್ಲಿ ವಾಸವಿರುವ ರೂಪಾ ಎಂಬ ಯುವತಿಯನ್ನು ಸುಮಾರ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದ. ಆದರೆ, ಯುವತಿ ಆತನನ್ನು ಪ್ರೀತಿ ಮಾಡಲು ನಿರಾಕರಿಸಿದ್ದರು. ಈ ನಡುವೆ ರೂಪಾ ಕುಟುಂಬ ಸದಸ್ಯರು ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದರಿಂದ ಕೋಪಗೊಂಡಿದ್ದ ಗಣೇಶ್, ರಾತ್ರಿ ಮನೆಯ ಮುಂದೆ ನಿಂತಿದ್ದ ರೂಪಾ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೇ, ಅವರ ಕೈ, ಕುತ್ತಿಗೆ ಮತ್ತು ಮುಖವನ್ನು ಬ್ಲೇಡ್ನಿಂದ ಕೊಯ್ದಿದ್ದಾನೆ. ಈ ವೇಳೆ ರೂಪಾ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಅವರ ಚೀರಾಟ ಕೇಳಿದ ಸ್ಥಳೀಯರು ಗಣೇಶ್ನನ್ನು ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ರೂಪಾ ಮತ್ತು ಆರೋಪಿ ಗಣೇಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ಗುಣಮುಖನಾದ ನಂತರ ಬಂಧಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮೈಸೂರು ರಸ್ತೆ ಸಮೀಪದ ಬಾಪೂಜಿನಗರದಲ್ಲಿ ಯುವಕನೊಬ್ಬ ತನ್ನ ಪಕ್ಕದ ಮನೆಯ ಯುವತಿಯ ಮುಖವನ್ನು ಬ್ಲೇಡ್ನಿಂದ ಕೊಯ್ದು ಹಲ್ಲೆ ನಡೆಸಿರುವ ಶುಕ್ರವಾರ ನಡೆದಿದೆ.<br /> <br /> ಬಾಪೂಜಿನಗರ ಏಳನೇ ಅಡ್ಡರಸ್ತೆ ನಿವಾಸಿ ಗಣೇಶ್ (25) ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.<br /> <br /> ಖಾಸಗಿ ಕಂಪೆನಿ ಉದ್ಯೋಗಿಯಾದ ಗಣೇಶ್, ತನ್ನ ಪಕ್ಕದ ಮನೆಯಲ್ಲಿ ವಾಸವಿರುವ ರೂಪಾ ಎಂಬ ಯುವತಿಯನ್ನು ಸುಮಾರ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದ. ಆದರೆ, ಯುವತಿ ಆತನನ್ನು ಪ್ರೀತಿ ಮಾಡಲು ನಿರಾಕರಿಸಿದ್ದರು. ಈ ನಡುವೆ ರೂಪಾ ಕುಟುಂಬ ಸದಸ್ಯರು ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದರಿಂದ ಕೋಪಗೊಂಡಿದ್ದ ಗಣೇಶ್, ರಾತ್ರಿ ಮನೆಯ ಮುಂದೆ ನಿಂತಿದ್ದ ರೂಪಾ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೇ, ಅವರ ಕೈ, ಕುತ್ತಿಗೆ ಮತ್ತು ಮುಖವನ್ನು ಬ್ಲೇಡ್ನಿಂದ ಕೊಯ್ದಿದ್ದಾನೆ. ಈ ವೇಳೆ ರೂಪಾ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಅವರ ಚೀರಾಟ ಕೇಳಿದ ಸ್ಥಳೀಯರು ಗಣೇಶ್ನನ್ನು ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ರೂಪಾ ಮತ್ತು ಆರೋಪಿ ಗಣೇಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ಗುಣಮುಖನಾದ ನಂತರ ಬಂಧಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>