ಪ್ರೇರಕರ ಸೇವೆ ಕಾಯಂಗೆ ಒತ್ತಾಯ
ಬೆಂಗಳೂರು: ಗ್ರಾ.ಪಂ.ಗಳಲ್ಲಿ ಪ್ರೇರಕರಾಗಿ ಕೆಲಸ ನಿರ್ವಹಿಸುತ್ತಿರುವವರ ಸೇವೆಯನ್ನು ಕಾಯಂಗೊಳಿಸಿ, ಗೌರವಧನ ಹೆಚ್ಚಿಸಬೇಕು ಎಂದು ರಾಜ್ಯ ಸಾಕ್ಷರತಾ ಪ್ರೇರಕರ ಒಕ್ಕೂಟದ ವಿ.ವೆಂಕಟೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1991-92ರಿಂದಲೂ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದರೂ, ಉದ್ಯೋಗದ ಭದ್ರತೆ ಇಲ್ಲ. ಗ್ರಾ.ಪಂ. ನೌಕರರಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.