<p><strong>ಚಿಕ್ಕಬಳ್ಳಾಪುರ:</strong> ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಾತ್ರ ಸೀಮಿತವಾಗಿದ್ದ ಪರಿಹಾರ ಬೋಧನೆಯನ್ನು ತಾಲ್ಲೂಕಿನ ಹತ್ತು ಪ್ರೌಢಶಾಲೆಗಳಿಗೂ ವಿಸ್ತರಿಸಲಾಗುವುದು. ತಜ್ಞ ಶಿಕ್ಷಕರ ಮೂಲಕ ವಿಶೇಷ ಮಕ್ಕಳಿಗೆ ಅಗತ್ಯ ಶಿಕ್ಷಣ ನೀಡ ಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ತಿಳಿಸಿದರು.<br /> <br /> ತಾಲ್ಲೂಕಿನ ನಂದಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, `ಪರಿಹಾರ ಬೋಧನೆ ಇಂದಿನ ಅಗತ್ಯವಾಗಿದ್ದು, ಉತ್ತಮ ಕಲಿಕೆ ಮತ್ತು ಶಿಕ್ಷಣಕ್ಕೆ ಸಹಕಾರಿಯಾಗಿದೆ~ ಎಂದರು.<br /> <br /> `ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿರುವ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣವನ್ನು ಉತ್ತಮಪಡಿಸಲು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಪ್ರವಾಸ ಕಾರ್ಯಕ್ರಮ, ತರಬೇತಿ ಶಿಬಿರ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. <br /> <br /> ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸಲು ಎಲ್ಲ ಹಂತಗಳಲ್ಲೂ ಸಹಕಾರ ನೀಡುವುದಾಗಿ ಹೇಳಿರುವ ಶಿಕ್ಷಣ ಪ್ರತಿಷ್ಠಾನದ ನೆರವಿನೊಂದಿಗೆ ಪ್ರೌಢಶಾಲೆಗಳಲ್ಲಿ ಪರಿಹಾರ ಬೋಧನೆ ಆರಂಭಿಸಲಾಗುವುದು~ ಎಂದರು.<br /> `ತಜ್ಞ ಮತ್ತು ಅನುಭವಿ ಶಿಕ್ಷಕರು ವಿಶೇಷ ಮಕ್ಕಳಿಗೆ ತಾಳ್ಮೆ ಮತ್ತು ಸಹನೆಯಿಂದ ಪಾಠ ಮಾಡುತ್ತಾರೆ. <br /> <br /> ಪರಿಹಾರ ಬೋಧನೆ ಮೂಲಕ ವಿಶೇಷ ಮಕ್ಕನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಶ್ರಮಿಸಲಾಗುವುದು. ಅವರಲ್ಲೂ ಶಿಕ್ಷಣದ ಕುರಿತು ಆಸಕ್ತಿ ಮೂಡಿಸಲಾಗುವುದು~ ಎಂದು ಅವರು ತಿಳಿಸಿದರು.<br /> ಮೊನ್ಸಾಂಟೊ ಇಂಡಿಯಾ ಸಂಸ್ಥೆಯ ಸಾರ್ವಜನಿಕ ವ್ಯವಹಾರಗಳ ವಿಭಾಗದ ನಿರ್ದೇಶಕಿ ವಸುಧಾ ಝಾ, ~ಮೊನ್ಸಾಂಟೊ ಸಂಸ್ಥೆಯು ಶಿಕ್ಷಣ ಪ್ರತಿಷ್ಠಾನದ ಮೂಲಕ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲು ಪ್ರಯತ್ನಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಸೌಕರ್ಯಗಳನ್ನು ಪೂರೈಸಿ, ಅನುಕೂಲತೆಗಳನ್ನು ಕಲ್ಪಿಸುತ್ತಿದೆ~ ಎಂದರು.<br /> <br /> ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದ ಮಕ್ಕಳು ಕೋಲಾಟ ಮತ್ತು ನೃತ್ಯ ಪ್ರದರ್ಶಿಸಿದರು. <br /> ಶಿಕ್ಷಣ ಪ್ರತಿಷ್ಠಾನದ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅನೀಶ್ಕುಮಾರ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಾಲರತ್ನಮ್ಮ, ಶಿಕ್ಷಕರಾದ ಎಂ.ಹನುಮಂತಪ್ಪ, ಮಂಜುನಾಥ್, ಕುಪ್ಪಳ್ಳಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ಶೋಷಣೆ ತಪ್ಪಿಸಿ</strong><br /> <strong>ಕೋಲಾರ:</strong> ಪರೀಕ್ಷಾ ಮಂಡಳಿಯಿಂದ ಮೌಲ್ಯಮಾಪಕರಿಗೆ ಆಗುತ್ತಿರುವ ಶೋಷಣೆ ತಪ್ಪಿಸಬೇಕೆಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಾತ್ರ ಸೀಮಿತವಾಗಿದ್ದ ಪರಿಹಾರ ಬೋಧನೆಯನ್ನು ತಾಲ್ಲೂಕಿನ ಹತ್ತು ಪ್ರೌಢಶಾಲೆಗಳಿಗೂ ವಿಸ್ತರಿಸಲಾಗುವುದು. ತಜ್ಞ ಶಿಕ್ಷಕರ ಮೂಲಕ ವಿಶೇಷ ಮಕ್ಕಳಿಗೆ ಅಗತ್ಯ ಶಿಕ್ಷಣ ನೀಡ ಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ತಿಳಿಸಿದರು.<br /> <br /> ತಾಲ್ಲೂಕಿನ ನಂದಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, `ಪರಿಹಾರ ಬೋಧನೆ ಇಂದಿನ ಅಗತ್ಯವಾಗಿದ್ದು, ಉತ್ತಮ ಕಲಿಕೆ ಮತ್ತು ಶಿಕ್ಷಣಕ್ಕೆ ಸಹಕಾರಿಯಾಗಿದೆ~ ಎಂದರು.<br /> <br /> `ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿರುವ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣವನ್ನು ಉತ್ತಮಪಡಿಸಲು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಪ್ರವಾಸ ಕಾರ್ಯಕ್ರಮ, ತರಬೇತಿ ಶಿಬಿರ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. <br /> <br /> ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸಲು ಎಲ್ಲ ಹಂತಗಳಲ್ಲೂ ಸಹಕಾರ ನೀಡುವುದಾಗಿ ಹೇಳಿರುವ ಶಿಕ್ಷಣ ಪ್ರತಿಷ್ಠಾನದ ನೆರವಿನೊಂದಿಗೆ ಪ್ರೌಢಶಾಲೆಗಳಲ್ಲಿ ಪರಿಹಾರ ಬೋಧನೆ ಆರಂಭಿಸಲಾಗುವುದು~ ಎಂದರು.<br /> `ತಜ್ಞ ಮತ್ತು ಅನುಭವಿ ಶಿಕ್ಷಕರು ವಿಶೇಷ ಮಕ್ಕಳಿಗೆ ತಾಳ್ಮೆ ಮತ್ತು ಸಹನೆಯಿಂದ ಪಾಠ ಮಾಡುತ್ತಾರೆ. <br /> <br /> ಪರಿಹಾರ ಬೋಧನೆ ಮೂಲಕ ವಿಶೇಷ ಮಕ್ಕನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಶ್ರಮಿಸಲಾಗುವುದು. ಅವರಲ್ಲೂ ಶಿಕ್ಷಣದ ಕುರಿತು ಆಸಕ್ತಿ ಮೂಡಿಸಲಾಗುವುದು~ ಎಂದು ಅವರು ತಿಳಿಸಿದರು.<br /> ಮೊನ್ಸಾಂಟೊ ಇಂಡಿಯಾ ಸಂಸ್ಥೆಯ ಸಾರ್ವಜನಿಕ ವ್ಯವಹಾರಗಳ ವಿಭಾಗದ ನಿರ್ದೇಶಕಿ ವಸುಧಾ ಝಾ, ~ಮೊನ್ಸಾಂಟೊ ಸಂಸ್ಥೆಯು ಶಿಕ್ಷಣ ಪ್ರತಿಷ್ಠಾನದ ಮೂಲಕ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲು ಪ್ರಯತ್ನಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಸೌಕರ್ಯಗಳನ್ನು ಪೂರೈಸಿ, ಅನುಕೂಲತೆಗಳನ್ನು ಕಲ್ಪಿಸುತ್ತಿದೆ~ ಎಂದರು.<br /> <br /> ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದ ಮಕ್ಕಳು ಕೋಲಾಟ ಮತ್ತು ನೃತ್ಯ ಪ್ರದರ್ಶಿಸಿದರು. <br /> ಶಿಕ್ಷಣ ಪ್ರತಿಷ್ಠಾನದ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅನೀಶ್ಕುಮಾರ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಾಲರತ್ನಮ್ಮ, ಶಿಕ್ಷಕರಾದ ಎಂ.ಹನುಮಂತಪ್ಪ, ಮಂಜುನಾಥ್, ಕುಪ್ಪಳ್ಳಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ಶೋಷಣೆ ತಪ್ಪಿಸಿ</strong><br /> <strong>ಕೋಲಾರ:</strong> ಪರೀಕ್ಷಾ ಮಂಡಳಿಯಿಂದ ಮೌಲ್ಯಮಾಪಕರಿಗೆ ಆಗುತ್ತಿರುವ ಶೋಷಣೆ ತಪ್ಪಿಸಬೇಕೆಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>