<p>ತಿ.ನರಸೀಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಬಸವರಾಜು ಬುಧವಾರ ಭೂಮಿಪೂಜೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿಯಲ್ಲಿನ ಶೇ 22.75 ರ ಮೀಸಲು ಅನುದಾನ 33 ಲಕ್ಷ ರೂಪಾಯಿಗಳಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆ ಮಾಡಲಾಗುತ್ತಿದೆ. ಪ್ರೌಢಶಾಲೆಗೆ 8 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನ ಅಭಿವೃದ್ಧಿ ಮತ್ತು ಕಾಂಪೌಂಡ್ ನಿರ್ಮಾಣ, ಒಂದೇ ವಾರ್ಡಿನಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣದ ಕಾಮಗಾರಿಗಳನ್ನು ಮಾಡಲಾಗುವುದು ಎಂದು ತಿಳಿಸಿದರು. <br /> <br /> ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ, ಮುಖ್ಯಾಧಿಕಾರಿ ವಿ.ಟಿ.ವಿಲ್ಸನ್, ಮಾಜಿ ಅಧ್ಯಕ್ಷ ಎಸ್. ನಂಜುಂಡಸ್ವಾಮಿ, ಸದಸ್ಯರಾದ ಮಲ್ಲೇಶ್, ರೇಣುಕಾರಾಮು, ಪುಟ್ಟೀರಮ್ಮ, ಸುಶೀಲಮ್ಮ, ಶಿವರಾಜು, ಚಾಮಮ್ಮ, ಮುಖಂಡರಾದ ಕನಕರಾಜು, ಕುರುಬೂರು ನಂದೀಶ್, ಮುಖ್ಯ ಶಿಕ್ಷಕ ರವೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ.ನರಸೀಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಬಸವರಾಜು ಬುಧವಾರ ಭೂಮಿಪೂಜೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿಯಲ್ಲಿನ ಶೇ 22.75 ರ ಮೀಸಲು ಅನುದಾನ 33 ಲಕ್ಷ ರೂಪಾಯಿಗಳಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆ ಮಾಡಲಾಗುತ್ತಿದೆ. ಪ್ರೌಢಶಾಲೆಗೆ 8 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನ ಅಭಿವೃದ್ಧಿ ಮತ್ತು ಕಾಂಪೌಂಡ್ ನಿರ್ಮಾಣ, ಒಂದೇ ವಾರ್ಡಿನಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣದ ಕಾಮಗಾರಿಗಳನ್ನು ಮಾಡಲಾಗುವುದು ಎಂದು ತಿಳಿಸಿದರು. <br /> <br /> ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ, ಮುಖ್ಯಾಧಿಕಾರಿ ವಿ.ಟಿ.ವಿಲ್ಸನ್, ಮಾಜಿ ಅಧ್ಯಕ್ಷ ಎಸ್. ನಂಜುಂಡಸ್ವಾಮಿ, ಸದಸ್ಯರಾದ ಮಲ್ಲೇಶ್, ರೇಣುಕಾರಾಮು, ಪುಟ್ಟೀರಮ್ಮ, ಸುಶೀಲಮ್ಮ, ಶಿವರಾಜು, ಚಾಮಮ್ಮ, ಮುಖಂಡರಾದ ಕನಕರಾಜು, ಕುರುಬೂರು ನಂದೀಶ್, ಮುಖ್ಯ ಶಿಕ್ಷಕ ರವೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>