<p><strong>ಬೆಂಗಳೂರು:</strong> ‘ಪ್ಲಾಸ್ಟಿಕ್ ತ್ಯಾಜ್ಯದಿಂದಾಗುವ ದುಷ್ಪರಿಣಾಮಗಳು ಮತ್ತು ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲ ಕ್ಷೇತ್ರದ ಗಣ್ಯರು ಕೈ ಜೋಡಿಸಬೇಕು’ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಅಭಿಪ್ರಾಯಪಟ್ಟರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಸ್ಥಾಪನಾ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಮಾಲಿನ್ಯ ನಿಯಂತ್ರಣ: ಪ್ಲಾಸ್ಟಿಕ್ ಬಳಕೆ ತಡೆಗಟ್ಟುವಿಕೆ’ ಕುರಿತು ಅವರು ಮುಖ್ಯ ಭಾಷಣ ಮಾಡಿದರು.</p>.<p>‘ಬೆಂಗಳೂರಿನಲ್ಲಿ ಪ್ರತಿ ದಿನ 3500 ಟನ್, ರಾಜ್ಯದಲ್ಲಿ 1.25 ಲಕ್ಷ ಟನ್ ಘನ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ಈ ಕಸದಲ್ಲಿ ಶೇಕಡಾ 10ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ತುಂಬಿರುತ್ತದೆ. <br /> ‘ಹಾನಿಕಾರಕ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದು ಹೇಳಿದ ಅವರು, ‘ನಿವೃತ್ತ ಕೃಷಿ ವಿಜ್ಞಾನಿಗಳು ತಾವಿರುವ ಕಡೆಯೇ ಮಾಲಿನ್ಯ ಮತ್ತು ಪ್ಲಾಸ್ಟಿಕ್ನಿಂದಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಲು ಯತ್ನಿಸಬೇಕು’ ಎಂದು ಹೇಳಿದರು.</p>.<p>‘ಬೆಲ್ಜಿಯಂ ದೇಶದಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯ (ಇ-ವೇಸ್ಟ್) ವಸ್ತುಗಳಿಂದ ಚಿನ್ನ ಉತ್ಪಾದಿಸಲಾಗುತ್ತಿದೆ. ಅಲ್ಲಿನ ಒಂದು ಕಾರ್ಖಾನೆ ಇ- ತ್ಯಾಜ್ಯದಿಂದ ವರ್ಷಕ್ಕೆ 20 ಟನ್ ಚಿನ್ನ ಉತ್ಪಾದಿಸುತ್ತಿದೆ. ಭಾರತದಲ್ಲೂ ಇ- ತ್ಯಾಜ್ಯದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುತ್ತಿದೆ. ಅವುಗಳ ಸೂಕ್ತ ವಿಲೇವಾರಿಗೆ ಕ್ರಮ ಕಂಡುಕೊಳ್ಳಬೇಕಾಗಿದೆ’ ಎಂದರು.</p>.<p>ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಮಾತನಾಡಿ, ‘ಯಾವುದೇ ಒಂದು ದೇಶ ಮಹಾನ್ ಎಂದು ಕರೆಸಿಕೊಳ್ಳಬೇಕಾದರೆ ಅದರ ಜನರೂ ಗುಣ ಸಂಪನ್ನರಾಗಿರಬೇಕು. ಭೌಗೋಳಿಕ ವಿಸ್ತೀರ್ಣದಿಂದಾಗಲಿ ಜನಸಂಖ್ಯೆಯಿಂದಾಗಲಿ ದೇಶದ ದೊಡ್ಡಸ್ತಿಕೆ ನಿರ್ಧಾರವಾಗದು. ಕೃಷಿ ವಿಜ್ಞಾನಿಗಳನ್ನು ಸನ್ಮಾನಿಸುತ್ತಿರುವುದು ಸ್ತುತ್ಯರ್ಹ’ ಎಂದರು. </p>.<p>ಸಂಸ್ಥೆಗೆ ಸಲ್ಲಿಸಿರುವ ಸೇವೆಗಾಗಿ ವಿಶ್ವ ಬ್ಯಾಂಕ್ನ ಮಾಜಿ ಸಲಹೆಗಾರ ಡಾ.ಟಿ.ವಿ.ಸಂಪತ್ ಹಾಗೂ ಇಪ್ಪತ್ತಕ್ಕೂ ಹೆಚ್ಚು ಮಂದಿ ಹಿರಿಯ ಕೃಷಿ ತಂತ್ರಜ್ಞರನ್ನು ಸನ್ಮಾನಿಸಲಾಯಿತು.<br /> ಸಂಸ್ಥೆಯ ಅಧ್ಯಕ್ಷ ಕೆ.ವಿ.ಸರ್ವೇಶ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪನಾ ದಿನಾಚರಣೆ ಕುರಿತು ಡಾ.ವಿ.ವೀರಭದ್ರಯ್ಯ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಜೆ.ದೇವೇಂದ್ರಪ್ಪ ಸ್ವಾಗತಿಸಿದರು. ಕೆ.ಕೃಷ್ಣಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪ್ಲಾಸ್ಟಿಕ್ ತ್ಯಾಜ್ಯದಿಂದಾಗುವ ದುಷ್ಪರಿಣಾಮಗಳು ಮತ್ತು ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲ ಕ್ಷೇತ್ರದ ಗಣ್ಯರು ಕೈ ಜೋಡಿಸಬೇಕು’ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಅಭಿಪ್ರಾಯಪಟ್ಟರು.</p>.<p>ಕೃಷಿ ತಂತ್ರಜ್ಞರ ಸಂಸ್ಥೆಯ ಸ್ಥಾಪನಾ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಮಾಲಿನ್ಯ ನಿಯಂತ್ರಣ: ಪ್ಲಾಸ್ಟಿಕ್ ಬಳಕೆ ತಡೆಗಟ್ಟುವಿಕೆ’ ಕುರಿತು ಅವರು ಮುಖ್ಯ ಭಾಷಣ ಮಾಡಿದರು.</p>.<p>‘ಬೆಂಗಳೂರಿನಲ್ಲಿ ಪ್ರತಿ ದಿನ 3500 ಟನ್, ರಾಜ್ಯದಲ್ಲಿ 1.25 ಲಕ್ಷ ಟನ್ ಘನ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ಈ ಕಸದಲ್ಲಿ ಶೇಕಡಾ 10ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ತುಂಬಿರುತ್ತದೆ. <br /> ‘ಹಾನಿಕಾರಕ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದು ಹೇಳಿದ ಅವರು, ‘ನಿವೃತ್ತ ಕೃಷಿ ವಿಜ್ಞಾನಿಗಳು ತಾವಿರುವ ಕಡೆಯೇ ಮಾಲಿನ್ಯ ಮತ್ತು ಪ್ಲಾಸ್ಟಿಕ್ನಿಂದಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಲು ಯತ್ನಿಸಬೇಕು’ ಎಂದು ಹೇಳಿದರು.</p>.<p>‘ಬೆಲ್ಜಿಯಂ ದೇಶದಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯ (ಇ-ವೇಸ್ಟ್) ವಸ್ತುಗಳಿಂದ ಚಿನ್ನ ಉತ್ಪಾದಿಸಲಾಗುತ್ತಿದೆ. ಅಲ್ಲಿನ ಒಂದು ಕಾರ್ಖಾನೆ ಇ- ತ್ಯಾಜ್ಯದಿಂದ ವರ್ಷಕ್ಕೆ 20 ಟನ್ ಚಿನ್ನ ಉತ್ಪಾದಿಸುತ್ತಿದೆ. ಭಾರತದಲ್ಲೂ ಇ- ತ್ಯಾಜ್ಯದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುತ್ತಿದೆ. ಅವುಗಳ ಸೂಕ್ತ ವಿಲೇವಾರಿಗೆ ಕ್ರಮ ಕಂಡುಕೊಳ್ಳಬೇಕಾಗಿದೆ’ ಎಂದರು.</p>.<p>ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಮಾತನಾಡಿ, ‘ಯಾವುದೇ ಒಂದು ದೇಶ ಮಹಾನ್ ಎಂದು ಕರೆಸಿಕೊಳ್ಳಬೇಕಾದರೆ ಅದರ ಜನರೂ ಗುಣ ಸಂಪನ್ನರಾಗಿರಬೇಕು. ಭೌಗೋಳಿಕ ವಿಸ್ತೀರ್ಣದಿಂದಾಗಲಿ ಜನಸಂಖ್ಯೆಯಿಂದಾಗಲಿ ದೇಶದ ದೊಡ್ಡಸ್ತಿಕೆ ನಿರ್ಧಾರವಾಗದು. ಕೃಷಿ ವಿಜ್ಞಾನಿಗಳನ್ನು ಸನ್ಮಾನಿಸುತ್ತಿರುವುದು ಸ್ತುತ್ಯರ್ಹ’ ಎಂದರು. </p>.<p>ಸಂಸ್ಥೆಗೆ ಸಲ್ಲಿಸಿರುವ ಸೇವೆಗಾಗಿ ವಿಶ್ವ ಬ್ಯಾಂಕ್ನ ಮಾಜಿ ಸಲಹೆಗಾರ ಡಾ.ಟಿ.ವಿ.ಸಂಪತ್ ಹಾಗೂ ಇಪ್ಪತ್ತಕ್ಕೂ ಹೆಚ್ಚು ಮಂದಿ ಹಿರಿಯ ಕೃಷಿ ತಂತ್ರಜ್ಞರನ್ನು ಸನ್ಮಾನಿಸಲಾಯಿತು.<br /> ಸಂಸ್ಥೆಯ ಅಧ್ಯಕ್ಷ ಕೆ.ವಿ.ಸರ್ವೇಶ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪನಾ ದಿನಾಚರಣೆ ಕುರಿತು ಡಾ.ವಿ.ವೀರಭದ್ರಯ್ಯ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಜೆ.ದೇವೇಂದ್ರಪ್ಪ ಸ್ವಾಗತಿಸಿದರು. ಕೆ.ಕೃಷ್ಣಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>