<p><strong>ಬೆಳಗಾವಿ: </strong>ಬಹುಮಹಡಿ ಕಟ್ಟಡಗಳ ನೆಲಮಾಳಿಗೆ ಹಾಗೂ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವ ಕುರಿತು ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ, ಪಾಲಿಕೆ ಆಡಳಿತಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.<br /> <br /> `ಫುಟ್ಪಾತ್ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ವಾಹನ ನಿಲುಗಡೆಗೆ ಮೀಸಲಾಗಿದ್ದ ಜಾಗವನ್ನು ಅತಿಕ್ರಮಿಸಿರುವುದರ ಬಗೆಗೆ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳುತ್ತೇನೆ. ಆ ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ತೆರವು ಮಾಡಲಾಗುವುದು~ ಎಂದು ಮಂಗಳವಾರ ಸುದ್ದಿಗಾರರಿಗೆ ಅವರು ತಿಳಿಸಿದರು.<br /> <br /> `ತೆರಿಗೆ ವಸೂಲಿಯನ್ನೂ ಚುರುಕುಗೊಳಿಸಲಾಗಿದೆ. ಅತಿ ಹೆಚ್ಚು ಬಾಕಿ ಉಳಿಸಿಕೊಂಡಿರುವ 50 ಮಂದಿಯ ಪಟ್ಟಿಯನ್ನು ಸಿದ್ಧಗೊಳಿಸಲಾಗುತ್ತಿದ್ದು, ಆ ಪಟ್ಟಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು~ ಎಂದು ಅವರು ಹೇಳಿದರು.<br /> <br /> `ಅಕ್ರಮ ಕಟ್ಟಡಗಳ ಬಗೆಗೂ ಸರ್ವೆ ನಡೆದಿದೆ. ಪಾಲಿಕೆ ಜಾಗದ ಲೀಸ್ ಮುಗಿದಿದ್ದರೂ ಅವರನ್ನು ಮುಂದುವರೆಸಿರುವ ಜಾಗಗಳ ಬಗೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಬಗೆಗೂ ಕ್ರಮಕೈಗೊಳ್ಳಲಾಗುವುದು~ ಎಂದು ತಿಳಿಸಿದರು.<br /> <br /> `ಪಾಲಿಕೆಯ ಬಜೆಟ್ ತಯಾರಿಕೆ ಕೆಲಸ ಭರದಿಂದ ಸಾಗಿದೆ. ಕೆಲವು ತೆರಿಗೆಯ ಹೆಚ್ಚಳ ಕುರಿತು ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಾಲಿಕೆ ಅಧಿಕಾರಿಗಳು ಬಜೆಟ್ ತಯಾರಿಕೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ~ ಎಂದು ಅವರು ಹೇಳಿದರು.<br /> <br /> `ಶೇ 22.75 ಹಾಗೂ ಶೇ 7.25ರ ಅನುದಾನದಡಿ ಫಲಾನುಭವಿಗಳ ಆಯ್ಕೆಗೆ ಜನಧ್ವನಿ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆ ಕಾರ್ಯಕ್ರಮದ ಮೂಲಕ 200 ಫಲಾನುಭವಿಗಳಿಗೆ 28.19 ಲಕ್ಷ ರೂಪಾಯಿ ನೀಡಲಾಗಿದೆ~ ಎಂದರು.<br /> <br /> `ಫಲಾನುಭವಿಗಳಿಂದ ಅರ್ಜಿ ತೆಗೆದುಕೊಂಡು, ಹದಿನೈದು ದಿನಗಳಲ್ಲಿ ಅವುಗಳನ್ನು ಪರಿಶೀಲಿಸಿ ಅವರಿಗೆ ನೇರವಾಗಿ ಚೆಕ್ ಬಿಡುಗಡೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಬರುವವರು ಪ್ರಯೋಜನ ಪಡೆದುಕೊಳ್ಳಬೇಕು~ ಎಂದು ಅವರು ಮನವಿ ಮಾಡಿದರು.ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ, ಎಂಜಿನಿಯರ್ ಲಕ್ಷ್ಮಿ ಸುಳಗೇಕರ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಬಹುಮಹಡಿ ಕಟ್ಟಡಗಳ ನೆಲಮಾಳಿಗೆ ಹಾಗೂ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವ ಕುರಿತು ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ, ಪಾಲಿಕೆ ಆಡಳಿತಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.<br /> <br /> `ಫುಟ್ಪಾತ್ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ವಾಹನ ನಿಲುಗಡೆಗೆ ಮೀಸಲಾಗಿದ್ದ ಜಾಗವನ್ನು ಅತಿಕ್ರಮಿಸಿರುವುದರ ಬಗೆಗೆ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳುತ್ತೇನೆ. ಆ ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ತೆರವು ಮಾಡಲಾಗುವುದು~ ಎಂದು ಮಂಗಳವಾರ ಸುದ್ದಿಗಾರರಿಗೆ ಅವರು ತಿಳಿಸಿದರು.<br /> <br /> `ತೆರಿಗೆ ವಸೂಲಿಯನ್ನೂ ಚುರುಕುಗೊಳಿಸಲಾಗಿದೆ. ಅತಿ ಹೆಚ್ಚು ಬಾಕಿ ಉಳಿಸಿಕೊಂಡಿರುವ 50 ಮಂದಿಯ ಪಟ್ಟಿಯನ್ನು ಸಿದ್ಧಗೊಳಿಸಲಾಗುತ್ತಿದ್ದು, ಆ ಪಟ್ಟಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು~ ಎಂದು ಅವರು ಹೇಳಿದರು.<br /> <br /> `ಅಕ್ರಮ ಕಟ್ಟಡಗಳ ಬಗೆಗೂ ಸರ್ವೆ ನಡೆದಿದೆ. ಪಾಲಿಕೆ ಜಾಗದ ಲೀಸ್ ಮುಗಿದಿದ್ದರೂ ಅವರನ್ನು ಮುಂದುವರೆಸಿರುವ ಜಾಗಗಳ ಬಗೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಬಗೆಗೂ ಕ್ರಮಕೈಗೊಳ್ಳಲಾಗುವುದು~ ಎಂದು ತಿಳಿಸಿದರು.<br /> <br /> `ಪಾಲಿಕೆಯ ಬಜೆಟ್ ತಯಾರಿಕೆ ಕೆಲಸ ಭರದಿಂದ ಸಾಗಿದೆ. ಕೆಲವು ತೆರಿಗೆಯ ಹೆಚ್ಚಳ ಕುರಿತು ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಾಲಿಕೆ ಅಧಿಕಾರಿಗಳು ಬಜೆಟ್ ತಯಾರಿಕೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ~ ಎಂದು ಅವರು ಹೇಳಿದರು.<br /> <br /> `ಶೇ 22.75 ಹಾಗೂ ಶೇ 7.25ರ ಅನುದಾನದಡಿ ಫಲಾನುಭವಿಗಳ ಆಯ್ಕೆಗೆ ಜನಧ್ವನಿ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆ ಕಾರ್ಯಕ್ರಮದ ಮೂಲಕ 200 ಫಲಾನುಭವಿಗಳಿಗೆ 28.19 ಲಕ್ಷ ರೂಪಾಯಿ ನೀಡಲಾಗಿದೆ~ ಎಂದರು.<br /> <br /> `ಫಲಾನುಭವಿಗಳಿಂದ ಅರ್ಜಿ ತೆಗೆದುಕೊಂಡು, ಹದಿನೈದು ದಿನಗಳಲ್ಲಿ ಅವುಗಳನ್ನು ಪರಿಶೀಲಿಸಿ ಅವರಿಗೆ ನೇರವಾಗಿ ಚೆಕ್ ಬಿಡುಗಡೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಬರುವವರು ಪ್ರಯೋಜನ ಪಡೆದುಕೊಳ್ಳಬೇಕು~ ಎಂದು ಅವರು ಮನವಿ ಮಾಡಿದರು.ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ, ಎಂಜಿನಿಯರ್ ಲಕ್ಷ್ಮಿ ಸುಳಗೇಕರ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>