<p><strong>ನವದೆಹಲಿ (ಪಿಟಿಐ):</strong> ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಯುಪಿಎ ಸರ್ಕಾರಕ್ಕೆ ಯಾವುದೇ ರೀತಿಯ `ಧಕ್ಕೆ~ಯಾಗದು ಎಂದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿನ ತಪ್ಪು ನಿರ್ಧಾರ ಹಾಗೂ ಸಂಘಟನೆಯ ಕೊರತೆಯಿಂದಾಗಿ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ನಿರಾಶಾದಾಯಕ ಫಲಿತಾಂಶ ಬಂದಿದೆ ಎಂದು ಹೇಳಿದರು. <br /> <br /> ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಸಹ ಪಕ್ಷದ ಕಳಪೆ ಫಲಿತಾಂಶಕ್ಕೆ ಕಾರಣವಾಗಿದ್ದು, ಮುಂಬರುವ ಗುಜರಾತ್, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಪಕ್ಷ ಭರದ ಸಿದ್ದತೆ ನಡೆಸಬೇಕು ಎಂದು ತಿಳಿಸಿದರು.<br /> <br /> `ಗೆಲ್ಲಲ್ಲಿ, ಇಲ್ಲವೇ ಸೋಲಲಿ ಪ್ರತಿ ಚುನಾವಣೆ ನಮಗೊಂದು ಪಾಠ~ ಎಂದ ಸೋನಿಯಾ ಅವರು, ~ಕಳಪೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳ ಮುಖಂಡರ ಸಭೆ ಕರೆದು ಸೋಲಿನ ಕಾರಣದ ವಿಶ್ಲೇಷಣೆ ಮಾಡಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಯುಪಿಎ ಸರ್ಕಾರಕ್ಕೆ ಯಾವುದೇ ರೀತಿಯ `ಧಕ್ಕೆ~ಯಾಗದು ಎಂದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿನ ತಪ್ಪು ನಿರ್ಧಾರ ಹಾಗೂ ಸಂಘಟನೆಯ ಕೊರತೆಯಿಂದಾಗಿ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ನಿರಾಶಾದಾಯಕ ಫಲಿತಾಂಶ ಬಂದಿದೆ ಎಂದು ಹೇಳಿದರು. <br /> <br /> ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಸಹ ಪಕ್ಷದ ಕಳಪೆ ಫಲಿತಾಂಶಕ್ಕೆ ಕಾರಣವಾಗಿದ್ದು, ಮುಂಬರುವ ಗುಜರಾತ್, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಪಕ್ಷ ಭರದ ಸಿದ್ದತೆ ನಡೆಸಬೇಕು ಎಂದು ತಿಳಿಸಿದರು.<br /> <br /> `ಗೆಲ್ಲಲ್ಲಿ, ಇಲ್ಲವೇ ಸೋಲಲಿ ಪ್ರತಿ ಚುನಾವಣೆ ನಮಗೊಂದು ಪಾಠ~ ಎಂದ ಸೋನಿಯಾ ಅವರು, ~ಕಳಪೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳ ಮುಖಂಡರ ಸಭೆ ಕರೆದು ಸೋಲಿನ ಕಾರಣದ ವಿಶ್ಲೇಷಣೆ ಮಾಡಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>