<p>ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಸಲುವಾಗಿ ತಾಲ್ಲೂಕಿನ ಇರಕಲ್ಲಗಡ ಗ್ರಾಮದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.<br /> <br /> ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಸತತ ಅಧ್ಯಯನ, ಓದಿದ್ದನ್ನು ಬರೆಯುವುದು ಹಾಗೂ ಗುಂಪು ಚರ್ಚೆಗಳ ಮೂಲಕ ಪುನರಾವರ್ತನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಭವಿಷ್ಯದ ಬದುಕು ಉತ್ತಮಗೊಳ್ಳಬೇಕು ಎಂದು ಈಗಿನ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದೂ ಅವರು ಹೇಳಿದರು.<br /> <br /> ಕಾಲೇಜಿನ ಪ್ರಾಚಾರ್ಯ ಎ.ಜಿ.ಶರಣಪ್ಪ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಸೋಮಶೇಖರ ಹರ್ತಿ, ಹಿರಿಯ ಶಿಕ್ಷಕ ಯಲ್ಲಪ್ಪ ಬಂಡಿ, ಸಹ ಶಿಕ್ಷಕರಾದ ಸುನಿಲ್ ಹಾಗೂ ಪವಿತ್ರ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.<br /> <br /> ಶರಣಪ್ಪ ಕುಂಬಾರ ಅವರು ಇಂಗ್ಲಿಷ್ ವಿಷಯ ಅಧ್ಯಯನ ಹಾಗೂ ಪರೀಕ್ಷೆಯಲ್ಲಿ ಉತ್ತರ ಬರೆಯುವ ಕೌಶಲ ಕುರಿತು ಮಾಹಿತಿ ನೀಡಿದರು. ಅದೇ ರೀತಿ ವಿಜ್ಞಾನ ಕುರಿತು ರಾಜೇಶ ಅಂಗಡಿ, ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಬಿಡಿಸುವ ಬಗ್ಗೆ ಅನ್ನಪೂರ್ಣ ಅವರು ತರಬೇತಿ ನೀಡಿದರು.<br /> <br /> ಪ್ರೌಢಶಾಲಾ ವಿಭಾಗದ ವೀರಯ್ಯ ಸಜ್ಜದಮಠ ನಿರೂಪಣೆ ಮಾಡಿದರು ಹಾಗೂ ರಾಜೇಂದ್ರ ಬಡಿಗೇರ ವಂದನಾರ್ಪಣೆ ನೆರವೇರಿಸಿದರು. ಇರಕಲ್ಲಗಡ ಪ್ರೌಢಶಾಲೆ ಹಾಗೂ ಲೇಬಗೇರಿ ಪ್ರೌಢಶಾಲೆಯ ಒಟ್ಟು 200 ಜನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಸಲುವಾಗಿ ತಾಲ್ಲೂಕಿನ ಇರಕಲ್ಲಗಡ ಗ್ರಾಮದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.<br /> <br /> ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಸತತ ಅಧ್ಯಯನ, ಓದಿದ್ದನ್ನು ಬರೆಯುವುದು ಹಾಗೂ ಗುಂಪು ಚರ್ಚೆಗಳ ಮೂಲಕ ಪುನರಾವರ್ತನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಭವಿಷ್ಯದ ಬದುಕು ಉತ್ತಮಗೊಳ್ಳಬೇಕು ಎಂದು ಈಗಿನ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದೂ ಅವರು ಹೇಳಿದರು.<br /> <br /> ಕಾಲೇಜಿನ ಪ್ರಾಚಾರ್ಯ ಎ.ಜಿ.ಶರಣಪ್ಪ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಸೋಮಶೇಖರ ಹರ್ತಿ, ಹಿರಿಯ ಶಿಕ್ಷಕ ಯಲ್ಲಪ್ಪ ಬಂಡಿ, ಸಹ ಶಿಕ್ಷಕರಾದ ಸುನಿಲ್ ಹಾಗೂ ಪವಿತ್ರ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.<br /> <br /> ಶರಣಪ್ಪ ಕುಂಬಾರ ಅವರು ಇಂಗ್ಲಿಷ್ ವಿಷಯ ಅಧ್ಯಯನ ಹಾಗೂ ಪರೀಕ್ಷೆಯಲ್ಲಿ ಉತ್ತರ ಬರೆಯುವ ಕೌಶಲ ಕುರಿತು ಮಾಹಿತಿ ನೀಡಿದರು. ಅದೇ ರೀತಿ ವಿಜ್ಞಾನ ಕುರಿತು ರಾಜೇಶ ಅಂಗಡಿ, ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಬಿಡಿಸುವ ಬಗ್ಗೆ ಅನ್ನಪೂರ್ಣ ಅವರು ತರಬೇತಿ ನೀಡಿದರು.<br /> <br /> ಪ್ರೌಢಶಾಲಾ ವಿಭಾಗದ ವೀರಯ್ಯ ಸಜ್ಜದಮಠ ನಿರೂಪಣೆ ಮಾಡಿದರು ಹಾಗೂ ರಾಜೇಂದ್ರ ಬಡಿಗೇರ ವಂದನಾರ್ಪಣೆ ನೆರವೇರಿಸಿದರು. ಇರಕಲ್ಲಗಡ ಪ್ರೌಢಶಾಲೆ ಹಾಗೂ ಲೇಬಗೇರಿ ಪ್ರೌಢಶಾಲೆಯ ಒಟ್ಟು 200 ಜನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>