<p><strong>ಹೊಸಕೋಟೆ:</strong> ನಂದಗುಡಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿನ ಅಕ್ರಮ ಫಿಲ್ಟರ್ ಮರಳು ತಯಾರಿಕಾ ಘಟಕಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು.<br /> <br /> ಪೊಲೀಸರ ನೆರವಿನೊಂದಿಗೆ ಮೂರು ತಂಡಗಳಲ್ಲಿ ಕೊರಠಿ, ಬೈಲನರಸಾಪುರ, ಹೆತ್ತಕ್ಕಿ, ಮಾರ್ಚಾಂಡಹಳ್ಳಿ, ವಡ್ಡಹಳ್ಳಿ, ಸಿದ್ಧನಹಳ್ಳಿ, ಕೆ.ಶೆಟ್ಟಿಹಳ್ಳಿ, ನೆಲವಾಗಿಲು, ಹೆಡಕನಹಳ್ಳಿ, ಕೊಂಡ್ರಹಳ್ಳಿ, ಅಗಸರಹಳ್ಳಿ, ಸತ್ತಿಗಾನಹಳ್ಳಿ, ಓಬಳಹಳ್ಳಿ ಮತ್ತು ದೊಡ್ಡರಾಮನಹಳ್ಳಿಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಕಾರ್ಯಾಚರಣೆ ನಡೆಯಿತು. <br /> <br /> ಈ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಅಕ್ರಮ ಮರಳು ತಯಾರಿಕಾ ವಡ್ಡುಗಳನ್ನು ನಾಶಪಡಿಸಲಾಯಿತು. 10ಕ್ಕೂ ಹೆಚ್ಚು ಡೀಸೆಲ್ ಎಂಜಿನ್ನಂತಹ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಯಿತು.<br /> <br /> ತಹಶೀಲ್ದಾರ್ ಬಿ.ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ರಾಮಕೃಷ್ಣ, ಲೋಕೋಪಯೋಗಿ ಇಲಾಖೆ ಅಧಿಕಾರಿ ಗುರುರಾಜ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ನಂದಗುಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ನಂದಗುಡಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿನ ಅಕ್ರಮ ಫಿಲ್ಟರ್ ಮರಳು ತಯಾರಿಕಾ ಘಟಕಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು.<br /> <br /> ಪೊಲೀಸರ ನೆರವಿನೊಂದಿಗೆ ಮೂರು ತಂಡಗಳಲ್ಲಿ ಕೊರಠಿ, ಬೈಲನರಸಾಪುರ, ಹೆತ್ತಕ್ಕಿ, ಮಾರ್ಚಾಂಡಹಳ್ಳಿ, ವಡ್ಡಹಳ್ಳಿ, ಸಿದ್ಧನಹಳ್ಳಿ, ಕೆ.ಶೆಟ್ಟಿಹಳ್ಳಿ, ನೆಲವಾಗಿಲು, ಹೆಡಕನಹಳ್ಳಿ, ಕೊಂಡ್ರಹಳ್ಳಿ, ಅಗಸರಹಳ್ಳಿ, ಸತ್ತಿಗಾನಹಳ್ಳಿ, ಓಬಳಹಳ್ಳಿ ಮತ್ತು ದೊಡ್ಡರಾಮನಹಳ್ಳಿಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಕಾರ್ಯಾಚರಣೆ ನಡೆಯಿತು. <br /> <br /> ಈ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಅಕ್ರಮ ಮರಳು ತಯಾರಿಕಾ ವಡ್ಡುಗಳನ್ನು ನಾಶಪಡಿಸಲಾಯಿತು. 10ಕ್ಕೂ ಹೆಚ್ಚು ಡೀಸೆಲ್ ಎಂಜಿನ್ನಂತಹ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಯಿತು.<br /> <br /> ತಹಶೀಲ್ದಾರ್ ಬಿ.ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ರಾಮಕೃಷ್ಣ, ಲೋಕೋಪಯೋಗಿ ಇಲಾಖೆ ಅಧಿಕಾರಿ ಗುರುರಾಜ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ನಂದಗುಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>