<p><strong>ಔರಾದ್: </strong> ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸ್ ನಿಲ್ದಾಣ ವರೆಗೆ ಅಲ್ಲಲ್ಲಿ ಫುಟ್ಪಾತ್ ಕಾಮಗಾರಿ ಹಾಗೆ ಉಳಿದಿರುವುದು ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು ಸಾರ್ವಜನಿಕರನ್ನು ಕರೆಳಿಸಿದೆ.<br /> <br /> ಶನಿವಾರ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಿರ್ಮಿತಿ ಕೇಂದ್ರದವರು ಫುಟಪಾತ್ ಕಾಮಗಾರಿ ಬೇಗನೆ ಪೂರ್ಣಗೊಳಿಸದೆ ನೆನೆಗುದಿಗೆ ಹಾಕುತ್ತಿದ್ದಾರೆ ಎಂದು ಪಟ್ಟಣ ಪಂಚಾಯ್ತಿ ಕೆಲ ಸದಸ್ಯರು ಶಾಸಕರ ಎದರು ಅಸಮಾಧಾನ ವ್ಯಕ್ತಪಡಿಸಿದರು. ಮುಂದೆ ಪಟ್ಟಣ ಪಂಚಾಯ್ತಿ ಚುನಾವಣೆ ಬರುತ್ತಿವೆ. ಈ ರೀತಿ ಕಾಮಗಾರಿ ನೆನೆಗುದಿಗೆ ಬಿದ್ದರೆ ನಾವು ಜನರಿಗೆ ಏನು ಉತ್ತರ ಕೊಡಬೇಕು ಎಂದು ಸದಸ್ಯರೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.<br /> <br /> ಈಗ ದೀಪಾವಳಿ ಹಬ್ಬ ಇರುವುದರಿಂದ ವ್ಯಾಪಾರಿಗಳು ಬಾಡಿಗೆ ಅಂಗಡಿ ಪಡೆಯುತ್ತಾದರೆ. ಫುಟಪಾತ್ ಕಾಮಗಾರಿ ಮುಗಿದರೆ ಒಂದು ಹಂತಕ್ಕೆ ಬಂದು ವ್ಯಾಪಾರ ವಹಿವಾಟಕ್ಕೂ ಅನುಕೂಲವಾಗುತ್ತದೆ. ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಚವ್ಹಾಣ್ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗೆ ಸೂಚನೆ ನೀಡಿದ್ದೇವೆ. ಕಾಮಗಾರಿ ವಿಳಂಬ ಹಾಗೂ ಅದರಿಂದ ಜನರಿಗೆ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗುವುದು ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಹ್ಮದ್ ಯೂಸುಫ್ ತಿಳಿಸಿದ್ದಾರೆ.<br /> <br /> <strong>ಅಂಗಡಿ ಟೆಂಡರ್:</strong> ಪಟ್ಟಣದ ಗಣೇಶ ಮಾರುಕಟ್ಟೆಯಲ್ಲಿ ಒಟ್ಟು 17 ಹೊಸ ಅಂಗಡಿ ನಿರ್ಮಿಸಲಾಗಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಪೂರ್ಣಗೊಳಿಸಿ ವ್ಯಾಪಾರಿಗಳಿಗೆ ಹರಾಜು ಮಾಡಲಾಗುವುದು. ಇತರೆ ಅಂಗಡಿಗಳ ಕೆಲಸ ಶುರುವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong> ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸ್ ನಿಲ್ದಾಣ ವರೆಗೆ ಅಲ್ಲಲ್ಲಿ ಫುಟ್ಪಾತ್ ಕಾಮಗಾರಿ ಹಾಗೆ ಉಳಿದಿರುವುದು ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು ಸಾರ್ವಜನಿಕರನ್ನು ಕರೆಳಿಸಿದೆ.<br /> <br /> ಶನಿವಾರ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಿರ್ಮಿತಿ ಕೇಂದ್ರದವರು ಫುಟಪಾತ್ ಕಾಮಗಾರಿ ಬೇಗನೆ ಪೂರ್ಣಗೊಳಿಸದೆ ನೆನೆಗುದಿಗೆ ಹಾಕುತ್ತಿದ್ದಾರೆ ಎಂದು ಪಟ್ಟಣ ಪಂಚಾಯ್ತಿ ಕೆಲ ಸದಸ್ಯರು ಶಾಸಕರ ಎದರು ಅಸಮಾಧಾನ ವ್ಯಕ್ತಪಡಿಸಿದರು. ಮುಂದೆ ಪಟ್ಟಣ ಪಂಚಾಯ್ತಿ ಚುನಾವಣೆ ಬರುತ್ತಿವೆ. ಈ ರೀತಿ ಕಾಮಗಾರಿ ನೆನೆಗುದಿಗೆ ಬಿದ್ದರೆ ನಾವು ಜನರಿಗೆ ಏನು ಉತ್ತರ ಕೊಡಬೇಕು ಎಂದು ಸದಸ್ಯರೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.<br /> <br /> ಈಗ ದೀಪಾವಳಿ ಹಬ್ಬ ಇರುವುದರಿಂದ ವ್ಯಾಪಾರಿಗಳು ಬಾಡಿಗೆ ಅಂಗಡಿ ಪಡೆಯುತ್ತಾದರೆ. ಫುಟಪಾತ್ ಕಾಮಗಾರಿ ಮುಗಿದರೆ ಒಂದು ಹಂತಕ್ಕೆ ಬಂದು ವ್ಯಾಪಾರ ವಹಿವಾಟಕ್ಕೂ ಅನುಕೂಲವಾಗುತ್ತದೆ. ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಚವ್ಹಾಣ್ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗೆ ಸೂಚನೆ ನೀಡಿದ್ದೇವೆ. ಕಾಮಗಾರಿ ವಿಳಂಬ ಹಾಗೂ ಅದರಿಂದ ಜನರಿಗೆ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗುವುದು ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಹ್ಮದ್ ಯೂಸುಫ್ ತಿಳಿಸಿದ್ದಾರೆ.<br /> <br /> <strong>ಅಂಗಡಿ ಟೆಂಡರ್:</strong> ಪಟ್ಟಣದ ಗಣೇಶ ಮಾರುಕಟ್ಟೆಯಲ್ಲಿ ಒಟ್ಟು 17 ಹೊಸ ಅಂಗಡಿ ನಿರ್ಮಿಸಲಾಗಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಪೂರ್ಣಗೊಳಿಸಿ ವ್ಯಾಪಾರಿಗಳಿಗೆ ಹರಾಜು ಮಾಡಲಾಗುವುದು. ಇತರೆ ಅಂಗಡಿಗಳ ಕೆಲಸ ಶುರುವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>