<p><strong>ಬೆಂಗಳೂರು:</strong> ಅಳತೆಯಲ್ಲಿ ಮೋಸ ಮಾಡಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಪೆಟ್ರೋಲ್ ಬಂಕ್ ಒಂದರ ಮೇಲೆ ಕಲ್ಲು ತೂರಾಟ ಮಾಡಿ ದಾಂಧಲೆ ನಡೆಸಿರುವ ಘಟನೆ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.<br /> <br /> ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಸುಂಕದಕಟ್ಟೆಯ ಸಿದ್ದರಾಜು (29), ಅವರ ಸ್ನೇಹಿತರಾದ ಲಗ್ಗೆರೆಯ ರವಿಕುಮಾರ್ (25) ಮತ್ತು ಶೇಖರ್ (28) ಎಂಬುವರನ್ನು ಬಂಧಿಸಿದ್ದಾರೆ. ಬಂಕ್ನಲ್ಲಿ ಪೆಟ್ರೋಲ್ ಖರೀದಿಸಿದ್ದ ಸಿದ್ದರಾಜು, `ಬಂಕ್ನ ಕೆಲಸಗಾರರು ಅಳತೆಯಲ್ಲಿ ವಂಚನೆ ಮಾಡಿದ್ದಾರೆ~ ಎಂದು ಆರೋಪಿಸಿ ಸ್ನೇಹಿತರ ಜತೆ ಸೇರಿ ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಘಟನೆಯಲ್ಲಿ ಬಂಕ್ನ ಕಚೇರಿಗೆ ಹಾನಿಯಾಗಿದ್ದು, ಸುಮಾರು 80 ಸಾವಿರ ರೂಪಾಯಿ ನಷ್ಟ ಸಂಭವಿಸಿದೆ~ ಎಂದು ಬಂಕ್ನ ವ್ಯವಸ್ಥಾಪಕರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ಅಪಘಾತ: ಸಾವು</strong><br /> ಸರ್ಜಾಪುರ ರಸ್ತೆಯ ದೊಡ್ಡಕನ್ನಲ್ಲಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಲಾರಿ ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ದೊಡ್ಡಕನ್ನಲ್ಲಿ ಗ್ರಾಮದ ನಿವಾಸಿ ವೀಣಾ (24) ಮೃತಪಟ್ಟವರು. ಮನೆಗೆಲಸ ಮಾಡುತ್ತಿದ್ದ ಅವರು ಸೈಕಲ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಲಾರಿ ಚಾಲಕ ಹಿಂದಿನಿಂದ ಅವರ ಸೈಕಲ್ಗೆ ವಾಹನ ಗುದ್ದಿಸಿದ್ದಾನೆ. ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಳತೆಯಲ್ಲಿ ಮೋಸ ಮಾಡಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಪೆಟ್ರೋಲ್ ಬಂಕ್ ಒಂದರ ಮೇಲೆ ಕಲ್ಲು ತೂರಾಟ ಮಾಡಿ ದಾಂಧಲೆ ನಡೆಸಿರುವ ಘಟನೆ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.<br /> <br /> ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಸುಂಕದಕಟ್ಟೆಯ ಸಿದ್ದರಾಜು (29), ಅವರ ಸ್ನೇಹಿತರಾದ ಲಗ್ಗೆರೆಯ ರವಿಕುಮಾರ್ (25) ಮತ್ತು ಶೇಖರ್ (28) ಎಂಬುವರನ್ನು ಬಂಧಿಸಿದ್ದಾರೆ. ಬಂಕ್ನಲ್ಲಿ ಪೆಟ್ರೋಲ್ ಖರೀದಿಸಿದ್ದ ಸಿದ್ದರಾಜು, `ಬಂಕ್ನ ಕೆಲಸಗಾರರು ಅಳತೆಯಲ್ಲಿ ವಂಚನೆ ಮಾಡಿದ್ದಾರೆ~ ಎಂದು ಆರೋಪಿಸಿ ಸ್ನೇಹಿತರ ಜತೆ ಸೇರಿ ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಘಟನೆಯಲ್ಲಿ ಬಂಕ್ನ ಕಚೇರಿಗೆ ಹಾನಿಯಾಗಿದ್ದು, ಸುಮಾರು 80 ಸಾವಿರ ರೂಪಾಯಿ ನಷ್ಟ ಸಂಭವಿಸಿದೆ~ ಎಂದು ಬಂಕ್ನ ವ್ಯವಸ್ಥಾಪಕರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> <strong>ಅಪಘಾತ: ಸಾವು</strong><br /> ಸರ್ಜಾಪುರ ರಸ್ತೆಯ ದೊಡ್ಡಕನ್ನಲ್ಲಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಲಾರಿ ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ದೊಡ್ಡಕನ್ನಲ್ಲಿ ಗ್ರಾಮದ ನಿವಾಸಿ ವೀಣಾ (24) ಮೃತಪಟ್ಟವರು. ಮನೆಗೆಲಸ ಮಾಡುತ್ತಿದ್ದ ಅವರು ಸೈಕಲ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಲಾರಿ ಚಾಲಕ ಹಿಂದಿನಿಂದ ಅವರ ಸೈಕಲ್ಗೆ ವಾಹನ ಗುದ್ದಿಸಿದ್ದಾನೆ. ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>