<p>ಹೈದರಾಬಾದ್ (ಪಿಟಿಐ): ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಂಗಾರು ಲಕ್ಷ್ಮಣ (75) ಅವರು ಹೃದಯಾಘಾತದಿಂದ ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಲಕ್ಷ್ಮಣ ಅವರು ಬಿಜೆಪಿ ಸಂಸದೆ ಸುಶೀಲಾ ಬಂಗಾರು, ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.<br /> ತುರ್ತು ಪರಿಸ್ಥಿತಿ ಕಾಲದಲ್ಲಿ ಜೈಲು ವಾಸ ಅನುಭವಿಸಿದ ಬಂಗಾರು ಲಕ್ಷ್ಮಣ ಯೌವನದಲ್ಲೇ ರಾಜಕೀಯದತ್ತ ಆಕರ್ಷಿತರಾಗಿದ್ದರು. 1996ರಲ್ಲಿ ರಾಜ್ಯಸಭೆ ಸದಸ್ಯರಾಗಿ ಅವರು ಆಯ್ಕೆಯಾದರು.<br /> <br /> ಬಂಗಾರು ಲಕ್ಷ್ಮಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಅಲಂಕರಿಸಿದ ಮೊದಲ ದಲಿತ ನಾಯಕ. ಶಸ್ತ್ರಾಸ್ತ್ರ ಖರೀದಿ ದಲ್ಲಾಳಿಗಳಿಂದ ಲಂಚ ಪಡೆಯುವುದಕ್ಕೆ ಸಂಬಂಧಿಸಿದಂತೆ ತೆಹೆಲ್ಕಾ 2001ರಲ್ಲಿ ನಡೆಸಿದ ಮಾರುವೇಷದ ಕಾರ್ಯಾಚರಣೆಯಲ್ಲಿ ಬಂಗಾರು ಲಕ್ಷ್ಮಣ ಸಿಕ್ಕಿಬಿದ್ದಿದ್ದರು. ಆಗ ಇದು ಭಾರಿ ಸುದ್ದಿಯಾಗಿತ್ತು.<br /> <br /> ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲದಿಂದ ಅವರು ಜೈಲು ಶಿಕ್ಷೆಗೂ ಗುರಿಯಾಗಿದ್ದರು. ಈ ಘಟನೆ ಅವರ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆಯನ್ನಿಟ್ಟಿತ್ತು. ಲಂಚ ಪಡೆದ ಪ್ರಕರಣ ಅಂದಿನ ಎನ್ಡಿಎ ಸರ್ಕಾರಕ್ಕೂ ಮುಜುಗರ ತಂದಿತ್ತು.<br /> ಸಂತಾಪ: ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಇತರ ನಾಯಕರು ಬಂಗಾರು ಲಕ್ಷ್ಮಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್ (ಪಿಟಿಐ): ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಂಗಾರು ಲಕ್ಷ್ಮಣ (75) ಅವರು ಹೃದಯಾಘಾತದಿಂದ ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಲಕ್ಷ್ಮಣ ಅವರು ಬಿಜೆಪಿ ಸಂಸದೆ ಸುಶೀಲಾ ಬಂಗಾರು, ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.<br /> ತುರ್ತು ಪರಿಸ್ಥಿತಿ ಕಾಲದಲ್ಲಿ ಜೈಲು ವಾಸ ಅನುಭವಿಸಿದ ಬಂಗಾರು ಲಕ್ಷ್ಮಣ ಯೌವನದಲ್ಲೇ ರಾಜಕೀಯದತ್ತ ಆಕರ್ಷಿತರಾಗಿದ್ದರು. 1996ರಲ್ಲಿ ರಾಜ್ಯಸಭೆ ಸದಸ್ಯರಾಗಿ ಅವರು ಆಯ್ಕೆಯಾದರು.<br /> <br /> ಬಂಗಾರು ಲಕ್ಷ್ಮಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಅಲಂಕರಿಸಿದ ಮೊದಲ ದಲಿತ ನಾಯಕ. ಶಸ್ತ್ರಾಸ್ತ್ರ ಖರೀದಿ ದಲ್ಲಾಳಿಗಳಿಂದ ಲಂಚ ಪಡೆಯುವುದಕ್ಕೆ ಸಂಬಂಧಿಸಿದಂತೆ ತೆಹೆಲ್ಕಾ 2001ರಲ್ಲಿ ನಡೆಸಿದ ಮಾರುವೇಷದ ಕಾರ್ಯಾಚರಣೆಯಲ್ಲಿ ಬಂಗಾರು ಲಕ್ಷ್ಮಣ ಸಿಕ್ಕಿಬಿದ್ದಿದ್ದರು. ಆಗ ಇದು ಭಾರಿ ಸುದ್ದಿಯಾಗಿತ್ತು.<br /> <br /> ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲದಿಂದ ಅವರು ಜೈಲು ಶಿಕ್ಷೆಗೂ ಗುರಿಯಾಗಿದ್ದರು. ಈ ಘಟನೆ ಅವರ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆಯನ್ನಿಟ್ಟಿತ್ತು. ಲಂಚ ಪಡೆದ ಪ್ರಕರಣ ಅಂದಿನ ಎನ್ಡಿಎ ಸರ್ಕಾರಕ್ಕೂ ಮುಜುಗರ ತಂದಿತ್ತು.<br /> ಸಂತಾಪ: ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಇತರ ನಾಯಕರು ಬಂಗಾರು ಲಕ್ಷ್ಮಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>