<p><strong>ಗುಂಡ್ಲುಪೇಟೆ:</strong> ಸಫಾರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಕುಮಾರ್ಪುಷ್ಕರ್ ತಿಳಿಸಿದ್ದಾರೆ.<br /> <br /> ಈ ಬಾರಿ ದಸರಾ ರಜೆ ಪ್ರಾರಂಭ ವಾಗುವ ಮೊದಲೇ ಸಫಾರಿಗೆ ಅವಕಾಶ ಕಲ್ಪಿಸಿದ ಕಾರಣ ಪ್ರತಿ ನಿತ್ಯ 400ಕ್ಕೂ ಹೆಚ್ಚು ಪ್ರವಾಸಿಗರು ನೋಡಲು ಆಗಮಿಸುತ್ತಿದ್ದರು. 2 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿ ಸಫಾರಿ ನೋಡಿದ್ದಾರೆ ಎಂದು ತಿಳಿಸಿದರು.<br /> <br /> ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಸಫಾರಿಯಿಂದ ಅರಣ್ಯ ಇಲಾಖೆಗೆ ಉತ್ತಮ ಆದಾಯ ನಿರೀಕ್ಷಿಸಲಾಗಿದೆ. ಎರಡು ದಿವಸಗಳಿಂದ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದರು.<br /> <br /> ಉತ್ತಮ ಮಳೆಯಾಗಿರುವುದರಿಂದ ಬಂಡೀಪುರ ಅಭಯಾರಣ್ಯದಲ್ಲಿ ಹಚ್ಚ ಹಸಿರು ಇದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಅರಣ್ಯ ಒಳಭಾಗದಲ್ಲಿರುವ ಕೆರೆಗಳು ತುಂಬಿರುವುದರಿಂದ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಸಫಾರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಕುಮಾರ್ಪುಷ್ಕರ್ ತಿಳಿಸಿದ್ದಾರೆ.<br /> <br /> ಈ ಬಾರಿ ದಸರಾ ರಜೆ ಪ್ರಾರಂಭ ವಾಗುವ ಮೊದಲೇ ಸಫಾರಿಗೆ ಅವಕಾಶ ಕಲ್ಪಿಸಿದ ಕಾರಣ ಪ್ರತಿ ನಿತ್ಯ 400ಕ್ಕೂ ಹೆಚ್ಚು ಪ್ರವಾಸಿಗರು ನೋಡಲು ಆಗಮಿಸುತ್ತಿದ್ದರು. 2 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿ ಸಫಾರಿ ನೋಡಿದ್ದಾರೆ ಎಂದು ತಿಳಿಸಿದರು.<br /> <br /> ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಸಫಾರಿಯಿಂದ ಅರಣ್ಯ ಇಲಾಖೆಗೆ ಉತ್ತಮ ಆದಾಯ ನಿರೀಕ್ಷಿಸಲಾಗಿದೆ. ಎರಡು ದಿವಸಗಳಿಂದ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದರು.<br /> <br /> ಉತ್ತಮ ಮಳೆಯಾಗಿರುವುದರಿಂದ ಬಂಡೀಪುರ ಅಭಯಾರಣ್ಯದಲ್ಲಿ ಹಚ್ಚ ಹಸಿರು ಇದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಅರಣ್ಯ ಒಳಭಾಗದಲ್ಲಿರುವ ಕೆರೆಗಳು ತುಂಬಿರುವುದರಿಂದ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>