<p><strong>ಬೆಂಗಳೂರು:</strong> ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸ್ಥಿತಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ನಸುಕಿನಲ್ಲಿ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ನ್ಯಾಯಾಧೀಶರು ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ನಂತರ ಪೊಲೀಸರು ಅವರನ್ನು ಶುಕ್ರವಾರ ರಾತ್ರಿ 8.39ಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು. ತೀವ್ರವಾಗಿ ಬಳಲಿದ್ದ ನಟನಿಗೆ ಜೈಲಿನ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಗ್ಲೂಕೋಸ್ ಹಾಕಲಾಗಿತ್ತು.<br /> <br /> `ದರ್ಶನ್ ಅವರು ನಿಶ್ಯಕ್ತರಾಗಿ ನಡುಗುತ್ತಿದ್ದರು. ಅವರ ತುಟಿಗಳು ಅದರುತ್ತಿದ್ದವು. ಈ ಸಂದರ್ಭದಲ್ಲಿ ಅವರು ಅರೆ ಪ್ರಜ್ಞಾವಸ್ಥೆಗೆ ತಲುಪಿದ್ದರು. ಅವರ ದೇಹ ಸ್ಥಿತಿಯಲ್ಲಿ ಬಹಳ ಏರುಪೇರಾಗಿದ್ದನ್ನು ಗಮನಿಸಿದ ವೈದ್ಯರು ನಿಮ್ಹಾನ್ಸ್ಗೆ ಕರೆದೊಯ್ಯುವಂತೆ ಸಲಹೆ ನೀಡಿದರು~ ಎಂದು ಕಾರಾಗೃಹ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಬೆಳಗಿನ ಜಾವ 2.30ರ ಸುಮಾರಿಗೆ ದರ್ಶನ್ ಅವರನ್ನು ಕಾರಾಗೃಹದಿಂದ ನಿಮ್ಹಾನ್ಸ್ಗೆ ಕರೆದೊಯ್ಯಲಾಯಿತು. ಅವರ ತಪಾಸಣೆ ನಡೆಸಿದ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದರು. ಅಲ್ಲಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ ನಂತರ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಿದರು.<br /> <br /> `ದರ್ಶನ್ಗೆ ಉಸಿರಾಟದ ತೊಂದರೆಯ ಜತೆಗೆ ಆಸ್ತಮ ರೋಗವಿದೆ. ವಾತಾವರಣದಲ್ಲಿ ತೀವ್ರ ಬದಲಾವಣೆ ಆದ ಕಾರಣ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗಬಹುದು~ ಎಂದು ರಾಜೀವ್ಗಾಂಧಿ ಎದೆರೋಗ ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ್ ಬುಗ್ಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.<br /> <br /> `ಅಗತ್ಯವಿದ್ದರೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ. ರಕ್ಷ ಪರೀಕ್ಷೆ ನಂತರ ದರ್ಶನ್ಗೆ ಕಾಮಾಲೆ ಇರುವುದು ಗೊತ್ತಾಗಿದೆ. ಆದ್ದರಿಂದ ಅವರಿಗೆ ಪ್ರತಿ ಎಂಟು ಗಂಟೆಗಳಿಗೊಮ್ಮೆ ಚುಚ್ಚುಮದ್ದು ನೀಡಬೇಕಾಗುತ್ತದೆ~ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.<br /> <br /> ದರ್ಶನ್ ಅವರ ಸಹೋದರ ನಿರ್ದೇಶಕ ದಿನಕರ್ ತೂಗುದೀಪ ಅವರು ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ಮುನಿರತ್ನ, ಜೈಜಗದೀಶ್, ಎ.ಗಣೇಶ್, ನಟ ವಿಜಯ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.<br /> <br /> <strong>ಪ್ರತಿಭಟನೆ: </strong>ದರ್ಶನ್ ಅಭಿಮಾನಿಗಳು ಆಸ್ಪತ್ರೆ ಎದುರು ಶನಿವಾರವೂ ಪ್ರತಿಭಟನೆ ನಡೆಸಿದರು. ನಟನನ್ನು ಜೈಲಿನಿಂದ ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು. ನಟನನ್ನು ನೋಡಲು ಅವಕಾಶ ನೀಡಬೇಕೆಂದು ಅವರು ಗದ್ದಲ ಮಾಡಿದರು. ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p><strong>ವಿಜಯಲಕ್ಷ್ಮಿ ಮತ್ತೆ ಆಸ್ಪತ್ರೆಗೆ</strong><br /> ವಿಜಯಲಕ್ಷ್ಮಿ ಅವರು ಕೆಂಗೇರಿ ಬಳಿ ಇರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದ ಅವರು ವಿಜಯನಗರದಲ್ಲಿರುವ ಗಾಯತ್ರಿ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದರು. <br /> <br /> ಕಿವಿ ಮತ್ತು ತಲೆಗೆ ನಾಲ್ಕು ಹೊಲಿಗೆ ಹಾಕಿದ್ದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದರು. ಸಂಜೆಯೇ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿತ್ತು. ನ್ಯಾಯಾಧೀಶರ ಮನೆಗೆ ಹೋಗಿ ಹೇಳಿಕೆ ನೀಡಿದ್ದ ಅವರು ಈಗ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸ್ಥಿತಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ನಸುಕಿನಲ್ಲಿ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ನ್ಯಾಯಾಧೀಶರು ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ನಂತರ ಪೊಲೀಸರು ಅವರನ್ನು ಶುಕ್ರವಾರ ರಾತ್ರಿ 8.39ಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು. ತೀವ್ರವಾಗಿ ಬಳಲಿದ್ದ ನಟನಿಗೆ ಜೈಲಿನ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಗ್ಲೂಕೋಸ್ ಹಾಕಲಾಗಿತ್ತು.<br /> <br /> `ದರ್ಶನ್ ಅವರು ನಿಶ್ಯಕ್ತರಾಗಿ ನಡುಗುತ್ತಿದ್ದರು. ಅವರ ತುಟಿಗಳು ಅದರುತ್ತಿದ್ದವು. ಈ ಸಂದರ್ಭದಲ್ಲಿ ಅವರು ಅರೆ ಪ್ರಜ್ಞಾವಸ್ಥೆಗೆ ತಲುಪಿದ್ದರು. ಅವರ ದೇಹ ಸ್ಥಿತಿಯಲ್ಲಿ ಬಹಳ ಏರುಪೇರಾಗಿದ್ದನ್ನು ಗಮನಿಸಿದ ವೈದ್ಯರು ನಿಮ್ಹಾನ್ಸ್ಗೆ ಕರೆದೊಯ್ಯುವಂತೆ ಸಲಹೆ ನೀಡಿದರು~ ಎಂದು ಕಾರಾಗೃಹ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಬೆಳಗಿನ ಜಾವ 2.30ರ ಸುಮಾರಿಗೆ ದರ್ಶನ್ ಅವರನ್ನು ಕಾರಾಗೃಹದಿಂದ ನಿಮ್ಹಾನ್ಸ್ಗೆ ಕರೆದೊಯ್ಯಲಾಯಿತು. ಅವರ ತಪಾಸಣೆ ನಡೆಸಿದ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದರು. ಅಲ್ಲಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ ನಂತರ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಿದರು.<br /> <br /> `ದರ್ಶನ್ಗೆ ಉಸಿರಾಟದ ತೊಂದರೆಯ ಜತೆಗೆ ಆಸ್ತಮ ರೋಗವಿದೆ. ವಾತಾವರಣದಲ್ಲಿ ತೀವ್ರ ಬದಲಾವಣೆ ಆದ ಕಾರಣ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗಬಹುದು~ ಎಂದು ರಾಜೀವ್ಗಾಂಧಿ ಎದೆರೋಗ ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ್ ಬುಗ್ಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.<br /> <br /> `ಅಗತ್ಯವಿದ್ದರೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ. ರಕ್ಷ ಪರೀಕ್ಷೆ ನಂತರ ದರ್ಶನ್ಗೆ ಕಾಮಾಲೆ ಇರುವುದು ಗೊತ್ತಾಗಿದೆ. ಆದ್ದರಿಂದ ಅವರಿಗೆ ಪ್ರತಿ ಎಂಟು ಗಂಟೆಗಳಿಗೊಮ್ಮೆ ಚುಚ್ಚುಮದ್ದು ನೀಡಬೇಕಾಗುತ್ತದೆ~ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.<br /> <br /> ದರ್ಶನ್ ಅವರ ಸಹೋದರ ನಿರ್ದೇಶಕ ದಿನಕರ್ ತೂಗುದೀಪ ಅವರು ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ಮುನಿರತ್ನ, ಜೈಜಗದೀಶ್, ಎ.ಗಣೇಶ್, ನಟ ವಿಜಯ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.<br /> <br /> <strong>ಪ್ರತಿಭಟನೆ: </strong>ದರ್ಶನ್ ಅಭಿಮಾನಿಗಳು ಆಸ್ಪತ್ರೆ ಎದುರು ಶನಿವಾರವೂ ಪ್ರತಿಭಟನೆ ನಡೆಸಿದರು. ನಟನನ್ನು ಜೈಲಿನಿಂದ ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು. ನಟನನ್ನು ನೋಡಲು ಅವಕಾಶ ನೀಡಬೇಕೆಂದು ಅವರು ಗದ್ದಲ ಮಾಡಿದರು. ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p><strong>ವಿಜಯಲಕ್ಷ್ಮಿ ಮತ್ತೆ ಆಸ್ಪತ್ರೆಗೆ</strong><br /> ವಿಜಯಲಕ್ಷ್ಮಿ ಅವರು ಕೆಂಗೇರಿ ಬಳಿ ಇರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದ ಅವರು ವಿಜಯನಗರದಲ್ಲಿರುವ ಗಾಯತ್ರಿ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದರು. <br /> <br /> ಕಿವಿ ಮತ್ತು ತಲೆಗೆ ನಾಲ್ಕು ಹೊಲಿಗೆ ಹಾಕಿದ್ದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದರು. ಸಂಜೆಯೇ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿತ್ತು. ನ್ಯಾಯಾಧೀಶರ ಮನೆಗೆ ಹೋಗಿ ಹೇಳಿಕೆ ನೀಡಿದ್ದ ಅವರು ಈಗ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>