<p><strong>ಚಿಕ್ಕಬಳ್ಳಾಪುರ</strong>: ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಆರಂಭಗೊಂಡರೂ ಪರೀಕ್ಷೆ ಅವ್ಯವಸ್ಥೆ ಇನ್ನೂ ಕೊನೆಗೊಂಡಿಲ್ಲ. ಕೆಲ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ, ಇನ್ನೂ ಕೆಲವರಿಗೆ ಮೇಜಿನ ವ್ಯವಸ್ಥೆ ಕೂಡ ಆಗಿಲ್ಲ. ಅವ್ಯವಸ್ಥೆ ಮತ್ತು ಸೌಕರ್ಯಗಳ ಕೊರತೆ ನಡುವೆಯೇ ಪರೀಕ್ಷೆ ಆರಂಭಗೊಂಡಿವೆ. <br /> <br /> ಈ ಅವ್ಯವಸ್ಥೆಗೆ ನೇರ ಹೊಣೆ ಯಾರು ಹೋರುತ್ತಿಲ್ಲವಾದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಮತ್ತು `ಸಂಗಮ~ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು.<br /> <br /> ಆದರೆ ಯಾವುದೇ ರೀತಿಯ ಸ್ಪಷ್ಟವಾದ ಪ್ರತಿಕ್ರಿಯೆ ದೊರೆಯದಿರುವುದರಿಂದ ಪ್ರಾಧ್ಯಾಪಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಬೇಸರ ಮೂಡಿದೆ.<br /> <br /> ಪರೀಕ್ಷೆ ಪ್ರವೇಶ ಪತ್ರ ಸಿಗದಿರುವುದಕ್ಕೆ, ಪರೀಕ್ಷಾ ಕೇಂದ್ರ ಬದಲಾಗಿರುವುದಕ್ಕೆ ಮತ್ತು ಕೆಲವಾರು ಅವ್ಯವಸ್ಥೆಗೆ ಬೆಂಗಳೂರು ವಿಶ್ವವಿದ್ಯಾಲಯವೇ ಕಾರಣ ಎಂದು ಕಾಲೇಜಿನ ಪ್ರಾಧ್ಯಾಪಕರು ಮುಕ್ತವಾಗಿ ಹೇಳುತ್ತಿದ್ದರೂ ಪ್ರಾಂಶುಪಾಲರು ಮಾತ್ರ ಮೌನವಹಿಸಿದ್ದಾರೆ ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿದೆ.<br /> <br /> `ಕೃಷ್ಣಪ್ಪ ಅವರು ಸಹಕಾರ ನೀಡದಿರುವುದಕ್ಕೆ ನಾವು ಇಷ್ಟೆಲ್ಲ ಕಷ್ಟಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೂರ್ಣ ಮಾಹಿತಿಯುಳ್ಳ ಸಿ.ಡಿ ನೀಡಿಲ್ಲ, ಪ್ರವೇಶಪತ್ರಗಳ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಸಹಕಾರ ಕೋರಿ ದೂರವಾಣಿ ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ~ ಎಂದು ಎಂ.ನಾರಾಯಣಸ್ವಾಮಿ ಆರೋಪಿಸಿದ್ದರು.<br /> <br /> ಹಳೆಯ ವಿದ್ಯಾರ್ಥಿಗಳಾದ ಯಲುವಹಳ್ಳಿ ಸೊಣ್ಣೇಗೌಡ, ಮಳ್ಳೂರು ಹರೀಶ್ ಮುಂತಾದವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಪರೀಕ್ಷೆ ಅವ್ಯವಸ್ಥೆ ಸರಿಪಡಿಸಬೇಕು ಎಂದು ಹೇಳಿದ್ದರು.<br /> <br /> ಇದೇ ರೀತಿಯ ಪ್ರತಿಕ್ರಿಯೆ ನೀಡಿದ `ಸಂಗಮ~ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಘಟನಾ ಕಾರ್ಯದರ್ಶಿ ವಿ.ವೆಂಕಟೇಶ್ ಸರ್ಕಾರಕ್ಕೆ ಪತ್ರ ಬರೆದು, `ಪರೀಕ್ಷೆ ಸುಗಮವಾಗಿ ನಡೆಸಲು ಸರ್ಕಾರ ಮಧ್ಯಪ್ರವೇಶ ಮಾಡಬೇಕು~ ಎಂದು ಕೋರಿದ್ದರು. <br /> <br /> ಇದರ ಮಧ್ಯೆ ಪ್ರೊ.ಬಿ.ವಿ.ಕೃಷ್ಣಪ್ಪ ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಮೌನವಹಿಸಿರುವುದಕ್ಕೆ ಕಾರಣವೇನು ಎಂಬುದು ಕಾಲೇಜು ಸಿಬ್ಬಂದಿಗಳಲ್ಲಿ ಆಶ್ಚರ್ಯ ಉಂಟು ಮಾಡಿದೆ.<br /> <br /> `ಪರೀಕ್ಷೆ ಅವ್ಯವಸ್ಥೆಗೆ ಸಂಬಂಧಿಸಿದಂತೆ ನೇರವಾದ ಸ್ಪಷ್ಟೀಕರಣ ನೀಡುವುದರ ಬದಲು ಇಡೀ ಪ್ರಕರಣದ ದಿಕ್ಕನೇ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆಯೇ ಎಂಬುದು ಸ್ಪಷ್ಟವಾಗುತ್ತಿಲ್ಲ. ಕಳೆದ ಬಾರಿ ಪರೀಕ್ಷೆಯಲ್ಲಿ ಡಿಬಾರ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬರನ್ನು ರಕ್ಷಿಸಲೆತ್ನಿಸಿ ಆರೋಪ ಹೊತ್ತ ಕೃಷ್ಣಪ್ಪ ಅವರು ಈಗಲೂ ಮೌನವಹಿಸಿರುವುದಕ್ಕೆ ಏನೂ ಕಾರಣ ಎಂಬುದು ಗೊತ್ತಾಗುತ್ತಿಲ್ಲ~ ಎಂದು ಸಿಬ್ಬಂದಿ ಆರೋಪ.<br /> <br /> <strong>ಪ್ರಾಂಶುಪಾಲರಿಗೆ ತರಾಟೆ</strong><br /> ಚಿಕ್ಕಬಳ್ಳಾಪುರ: ಪರೀಕ್ಷಾ ಅವ್ಯವಸ್ಥೆಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟೇಶ್ಮೂರ್ತಿ ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಬಿ.ವಿ.ಕೃಷ್ಣಪ್ಪ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಎಂ.ನಾರಾಯಣಸ್ವಾಮಿ ಅವರನ್ನು ಮಂಗಳವಾರ ಸಂಜೆ ತರಾಟೆ ತೆಗೆದುಕೊಂಡಿದ್ದಾರೆ.<br /> <br /> `ಪರೀಕ್ಷೆ ಅವ್ಯವಸ್ಥೆ ಸರಿಪಡಿಸುವುದರ ಬದಲು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದೀರಿ. ಜವಾಬ್ದಾರಿ ಹುದ್ದೆಗಳಲ್ಲಿ ಇದ್ದುಕೊಂಡು ಪರಿಸ್ಥಿತಿಯನ್ನು ನಿಭಾಯಿಸುವುದರ ಬದಲು ಶೀತಲಸಮರದಲ್ಲಿ ತೊಡಗಿದ್ದೀರಿ. ಪರೀಕ್ಷೆ ಅವ್ಯವಸ್ಥೆ ಇದೇ ರೀತಿ ಮುಂದುವರೆದಲ್ಲಿ, ಇಬ್ಬರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ~ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಆರಂಭಗೊಂಡರೂ ಪರೀಕ್ಷೆ ಅವ್ಯವಸ್ಥೆ ಇನ್ನೂ ಕೊನೆಗೊಂಡಿಲ್ಲ. ಕೆಲ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ, ಇನ್ನೂ ಕೆಲವರಿಗೆ ಮೇಜಿನ ವ್ಯವಸ್ಥೆ ಕೂಡ ಆಗಿಲ್ಲ. ಅವ್ಯವಸ್ಥೆ ಮತ್ತು ಸೌಕರ್ಯಗಳ ಕೊರತೆ ನಡುವೆಯೇ ಪರೀಕ್ಷೆ ಆರಂಭಗೊಂಡಿವೆ. <br /> <br /> ಈ ಅವ್ಯವಸ್ಥೆಗೆ ನೇರ ಹೊಣೆ ಯಾರು ಹೋರುತ್ತಿಲ್ಲವಾದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಮತ್ತು `ಸಂಗಮ~ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು.<br /> <br /> ಆದರೆ ಯಾವುದೇ ರೀತಿಯ ಸ್ಪಷ್ಟವಾದ ಪ್ರತಿಕ್ರಿಯೆ ದೊರೆಯದಿರುವುದರಿಂದ ಪ್ರಾಧ್ಯಾಪಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಬೇಸರ ಮೂಡಿದೆ.<br /> <br /> ಪರೀಕ್ಷೆ ಪ್ರವೇಶ ಪತ್ರ ಸಿಗದಿರುವುದಕ್ಕೆ, ಪರೀಕ್ಷಾ ಕೇಂದ್ರ ಬದಲಾಗಿರುವುದಕ್ಕೆ ಮತ್ತು ಕೆಲವಾರು ಅವ್ಯವಸ್ಥೆಗೆ ಬೆಂಗಳೂರು ವಿಶ್ವವಿದ್ಯಾಲಯವೇ ಕಾರಣ ಎಂದು ಕಾಲೇಜಿನ ಪ್ರಾಧ್ಯಾಪಕರು ಮುಕ್ತವಾಗಿ ಹೇಳುತ್ತಿದ್ದರೂ ಪ್ರಾಂಶುಪಾಲರು ಮಾತ್ರ ಮೌನವಹಿಸಿದ್ದಾರೆ ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿದೆ.<br /> <br /> `ಕೃಷ್ಣಪ್ಪ ಅವರು ಸಹಕಾರ ನೀಡದಿರುವುದಕ್ಕೆ ನಾವು ಇಷ್ಟೆಲ್ಲ ಕಷ್ಟಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೂರ್ಣ ಮಾಹಿತಿಯುಳ್ಳ ಸಿ.ಡಿ ನೀಡಿಲ್ಲ, ಪ್ರವೇಶಪತ್ರಗಳ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಸಹಕಾರ ಕೋರಿ ದೂರವಾಣಿ ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ~ ಎಂದು ಎಂ.ನಾರಾಯಣಸ್ವಾಮಿ ಆರೋಪಿಸಿದ್ದರು.<br /> <br /> ಹಳೆಯ ವಿದ್ಯಾರ್ಥಿಗಳಾದ ಯಲುವಹಳ್ಳಿ ಸೊಣ್ಣೇಗೌಡ, ಮಳ್ಳೂರು ಹರೀಶ್ ಮುಂತಾದವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಪರೀಕ್ಷೆ ಅವ್ಯವಸ್ಥೆ ಸರಿಪಡಿಸಬೇಕು ಎಂದು ಹೇಳಿದ್ದರು.<br /> <br /> ಇದೇ ರೀತಿಯ ಪ್ರತಿಕ್ರಿಯೆ ನೀಡಿದ `ಸಂಗಮ~ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಘಟನಾ ಕಾರ್ಯದರ್ಶಿ ವಿ.ವೆಂಕಟೇಶ್ ಸರ್ಕಾರಕ್ಕೆ ಪತ್ರ ಬರೆದು, `ಪರೀಕ್ಷೆ ಸುಗಮವಾಗಿ ನಡೆಸಲು ಸರ್ಕಾರ ಮಧ್ಯಪ್ರವೇಶ ಮಾಡಬೇಕು~ ಎಂದು ಕೋರಿದ್ದರು. <br /> <br /> ಇದರ ಮಧ್ಯೆ ಪ್ರೊ.ಬಿ.ವಿ.ಕೃಷ್ಣಪ್ಪ ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಮೌನವಹಿಸಿರುವುದಕ್ಕೆ ಕಾರಣವೇನು ಎಂಬುದು ಕಾಲೇಜು ಸಿಬ್ಬಂದಿಗಳಲ್ಲಿ ಆಶ್ಚರ್ಯ ಉಂಟು ಮಾಡಿದೆ.<br /> <br /> `ಪರೀಕ್ಷೆ ಅವ್ಯವಸ್ಥೆಗೆ ಸಂಬಂಧಿಸಿದಂತೆ ನೇರವಾದ ಸ್ಪಷ್ಟೀಕರಣ ನೀಡುವುದರ ಬದಲು ಇಡೀ ಪ್ರಕರಣದ ದಿಕ್ಕನೇ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆಯೇ ಎಂಬುದು ಸ್ಪಷ್ಟವಾಗುತ್ತಿಲ್ಲ. ಕಳೆದ ಬಾರಿ ಪರೀಕ್ಷೆಯಲ್ಲಿ ಡಿಬಾರ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬರನ್ನು ರಕ್ಷಿಸಲೆತ್ನಿಸಿ ಆರೋಪ ಹೊತ್ತ ಕೃಷ್ಣಪ್ಪ ಅವರು ಈಗಲೂ ಮೌನವಹಿಸಿರುವುದಕ್ಕೆ ಏನೂ ಕಾರಣ ಎಂಬುದು ಗೊತ್ತಾಗುತ್ತಿಲ್ಲ~ ಎಂದು ಸಿಬ್ಬಂದಿ ಆರೋಪ.<br /> <br /> <strong>ಪ್ರಾಂಶುಪಾಲರಿಗೆ ತರಾಟೆ</strong><br /> ಚಿಕ್ಕಬಳ್ಳಾಪುರ: ಪರೀಕ್ಷಾ ಅವ್ಯವಸ್ಥೆಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟೇಶ್ಮೂರ್ತಿ ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಬಿ.ವಿ.ಕೃಷ್ಣಪ್ಪ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಎಂ.ನಾರಾಯಣಸ್ವಾಮಿ ಅವರನ್ನು ಮಂಗಳವಾರ ಸಂಜೆ ತರಾಟೆ ತೆಗೆದುಕೊಂಡಿದ್ದಾರೆ.<br /> <br /> `ಪರೀಕ್ಷೆ ಅವ್ಯವಸ್ಥೆ ಸರಿಪಡಿಸುವುದರ ಬದಲು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದೀರಿ. ಜವಾಬ್ದಾರಿ ಹುದ್ದೆಗಳಲ್ಲಿ ಇದ್ದುಕೊಂಡು ಪರಿಸ್ಥಿತಿಯನ್ನು ನಿಭಾಯಿಸುವುದರ ಬದಲು ಶೀತಲಸಮರದಲ್ಲಿ ತೊಡಗಿದ್ದೀರಿ. ಪರೀಕ್ಷೆ ಅವ್ಯವಸ್ಥೆ ಇದೇ ರೀತಿ ಮುಂದುವರೆದಲ್ಲಿ, ಇಬ್ಬರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ~ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>