<p><strong>ಬೆಂಗಳೂರು:</strong> `ಉತ್ಪಾದನಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಕೃಷಿಗೆ ಬಜೆಟ್ನಲ್ಲಿ ಸಮಪಾಲು ಮೀಸಲಿಡಬೇಕು' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ `ಬಜೆಟ್ ಮತ್ತು ರೈತರು' ಕುರಿತ ವಿಚಾರ ಸಂಕಿರಣದಲ್ಲಿ ಒತ್ತಾಯಿಸಲಾಯಿತು.<br /> <br /> ಸಂಕಿರಣದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ತಿಳಿಸಿದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, `ಶಿಕ್ಷಣ, ಆರೋಗ್ಯ ಇತ್ಯಾದಿ ಸೇವಾ ಕ್ಷೇತ್ರಗಳಂತೆ ಕೃಷಿಗೂ ಆದ್ಯತೆ ದೊರೆಯಬೇಕು. ರೈತರು ಬೆಳೆಯುವ ಬೆಳೆಗಳಿಗೆ ಸಮರ್ಪಕವಾದ ದರ ನಿಗದಿಪಡಿಸಲು ಸಮಿತಿ ರಚಿಸಬೇಕು. ಈ ಸಮಿತಿಗೆ ರೈತರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಬೇಕು' ಎಂದು ಆಗ್ರಹಿಸಿದರು.<br /> <br /> `ರಾಜ್ಯದಲ್ಲಿ ನದಿಗಳು ತುಂಬಿ ಹರಿದರೂ ನೀರಾವರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಆಂಧ್ರಪ್ರದೇಶದಲ್ಲಿ ಶೇಕಡಾ 59ರಷ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ರಾಜ್ಯದಲ್ಲಿ ಈ ಪ್ರಮಾಣ ಶೇಕಡಾ 26 ಮಾತ್ರ. ಪರಿಣಾಮವಾಗಿ ಪ್ರತಿವರ್ಷ ಬರ ಎದುರಿಸುವಂತಾಗಿದೆ.<br /> <br /> ಬರ ನಿರ್ವಹಣೆಗೆ ಸರ್ಕಾರ ಒಟ್ಟು ಐದು ವರ್ಷಗಳಿಗೆ 50 ಸಾವಿರ ಕೋಟಿ ರೂಪಾಯಿ ಮಾತ್ರ ಮೀಸಲಿಡುತ್ತದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಸಮಸ್ಯೆಗಳು ನಿವಾರಣೆಯಾಗಿಲ್ಲ. ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಮೀಸಲಿಟ್ಟು ಬರ ನಿರ್ವಹಣೆ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು' ಎಂದು ಅವರು ಒತ್ತಾಯಿಸಿದರು.<br /> <br /> `60 ವರ್ಷ ದಾಟಿದ ರೈತರಿಗೆ ಮಾಸಾಶನ ಘೋಷಿಸಬೇಕು. ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದವರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು. ರೇಷ್ಮೆ, ತೆಂಗು, ಅಡಿಕೆ ಬೆಳೆಗಳ ರಕ್ಷಣೆಗೆ ಪ್ರತ್ಯೇಕ ಸಮಿತಿ ಹಾಗೂ ನಿಧಿ ಸ್ಥಾಪಿಸಬೇಕು. 1ಟನ್ ಕಬ್ಬಿಗೆ ನಾಲ್ಕು ಸಾವಿರ ರೂಪಾಯಿ ನೀಡಬೇಕು.<br /> <br /> `ಭಾಗ್ಯಜ್ಯೋತಿ' ಯೋಜನೆ ಅಡಿ ವಿದ್ಯುತ್ ಸಂಪರ್ಕ ಪಡೆದಿರುವವರು 40 ಯೂನಿಟ್ವರೆಗೆ ವಿದ್ಯುತ್ ಬಳಸಲು ಅವಕಾಶ ನೀಡಬೇಕು. ಬಗರ್ಹುಕುಂ ರೈತರ ಜಮೀನುಗಳಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು' ಎಂದು ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಉತ್ಪಾದನಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಕೃಷಿಗೆ ಬಜೆಟ್ನಲ್ಲಿ ಸಮಪಾಲು ಮೀಸಲಿಡಬೇಕು' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ `ಬಜೆಟ್ ಮತ್ತು ರೈತರು' ಕುರಿತ ವಿಚಾರ ಸಂಕಿರಣದಲ್ಲಿ ಒತ್ತಾಯಿಸಲಾಯಿತು.<br /> <br /> ಸಂಕಿರಣದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ತಿಳಿಸಿದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, `ಶಿಕ್ಷಣ, ಆರೋಗ್ಯ ಇತ್ಯಾದಿ ಸೇವಾ ಕ್ಷೇತ್ರಗಳಂತೆ ಕೃಷಿಗೂ ಆದ್ಯತೆ ದೊರೆಯಬೇಕು. ರೈತರು ಬೆಳೆಯುವ ಬೆಳೆಗಳಿಗೆ ಸಮರ್ಪಕವಾದ ದರ ನಿಗದಿಪಡಿಸಲು ಸಮಿತಿ ರಚಿಸಬೇಕು. ಈ ಸಮಿತಿಗೆ ರೈತರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಬೇಕು' ಎಂದು ಆಗ್ರಹಿಸಿದರು.<br /> <br /> `ರಾಜ್ಯದಲ್ಲಿ ನದಿಗಳು ತುಂಬಿ ಹರಿದರೂ ನೀರಾವರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಆಂಧ್ರಪ್ರದೇಶದಲ್ಲಿ ಶೇಕಡಾ 59ರಷ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ರಾಜ್ಯದಲ್ಲಿ ಈ ಪ್ರಮಾಣ ಶೇಕಡಾ 26 ಮಾತ್ರ. ಪರಿಣಾಮವಾಗಿ ಪ್ರತಿವರ್ಷ ಬರ ಎದುರಿಸುವಂತಾಗಿದೆ.<br /> <br /> ಬರ ನಿರ್ವಹಣೆಗೆ ಸರ್ಕಾರ ಒಟ್ಟು ಐದು ವರ್ಷಗಳಿಗೆ 50 ಸಾವಿರ ಕೋಟಿ ರೂಪಾಯಿ ಮಾತ್ರ ಮೀಸಲಿಡುತ್ತದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಸಮಸ್ಯೆಗಳು ನಿವಾರಣೆಯಾಗಿಲ್ಲ. ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಮೀಸಲಿಟ್ಟು ಬರ ನಿರ್ವಹಣೆ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು' ಎಂದು ಅವರು ಒತ್ತಾಯಿಸಿದರು.<br /> <br /> `60 ವರ್ಷ ದಾಟಿದ ರೈತರಿಗೆ ಮಾಸಾಶನ ಘೋಷಿಸಬೇಕು. ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದವರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು. ರೇಷ್ಮೆ, ತೆಂಗು, ಅಡಿಕೆ ಬೆಳೆಗಳ ರಕ್ಷಣೆಗೆ ಪ್ರತ್ಯೇಕ ಸಮಿತಿ ಹಾಗೂ ನಿಧಿ ಸ್ಥಾಪಿಸಬೇಕು. 1ಟನ್ ಕಬ್ಬಿಗೆ ನಾಲ್ಕು ಸಾವಿರ ರೂಪಾಯಿ ನೀಡಬೇಕು.<br /> <br /> `ಭಾಗ್ಯಜ್ಯೋತಿ' ಯೋಜನೆ ಅಡಿ ವಿದ್ಯುತ್ ಸಂಪರ್ಕ ಪಡೆದಿರುವವರು 40 ಯೂನಿಟ್ವರೆಗೆ ವಿದ್ಯುತ್ ಬಳಸಲು ಅವಕಾಶ ನೀಡಬೇಕು. ಬಗರ್ಹುಕುಂ ರೈತರ ಜಮೀನುಗಳಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು' ಎಂದು ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>