<p><strong>ಬೆಂಗಳೂರು (ಪಿಟಿಐ): </strong>ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನವಾಗುವ ಯಾವುದೇ ಲಕ್ಷಣಗಳು ಮಂಗಳವಾರವೂ ಗೋಚರಿಸಲಿಲ್ಲ. ಬದಲಿಗೆ ಯಡಿಯೂರಪ್ಪ ಬಣವು ಬಜೆಟ್ ಅಧಿವೇಶದ ಮೊದಲ ದಿನವಾದ ಮಂಗಳವಾರ ಬಹಿಷ್ಕರಿಸುವ ನಿರ್ಧಾರ ತಳೆದಿದ್ದು, ಬಿಕ್ಕಟ್ಟು ಇನ್ನಷ್ಟು ಉಲ್ಬಣಿಸಿದೆ.<br /> <br /> ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಯಡಿಯೂರಪ್ಪ ಅವರಿಗೆ ಬಜೆಟ್ ಅಧಿವೇಶವನ್ನು ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಕೇಳಿಕೊಂಡರೂ ಯಡಿಯೂರಪ್ಪ ಅವರು ಇದಕ್ಕೆ ಒಪ್ಪಿಲ್ಲ ಎನ್ನಲಾಗಿದೆ. <br /> <br /> ಯಡಿಯೂರಪ್ಪ ಬಣದ ಹಲವು ಶಾಸಕರು ಖಾಸಗಿ ರೆಸಾರ್ಟ್ನಲ್ಲಿ ಭಾನುವಾರದಿಂದ ತಂಗಿದ್ದು, ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸುವ ತನಕ ರೆಸಾರ್ಟ್ನಲ್ಲೆ ಉಳಿಯುವುದಾಗಿ ತಿಳಿಸಿದ್ದಾರೆ.<br /> <br /> ಈ ಮಧ್ಯೆ ಯಡಿಯೂರಪ್ಪ ಅವರ ಬಣದ ಪ್ರತಿನಿಧಿಗಳಾಗಿ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಶಾಸಕರಾದ ಲಕ್ಷ್ಮಿನಾರಾಯಣ ಮತ್ತು ಚಂದ್ರಕಾಂತ ಬೆಲ್ಲದ ಅವರು ಮಾತ್ರ ಭಾಗವಹಿಸಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಏನಿದ್ದರೂ ಮುಂಗಡಪತ್ರ ಮಂಡನೆಗೆ ಮುಖ್ಯಮಂತ್ರಿ ಸದಾನಂದಗೌಡರಿಗೆ ಅವಕಾಶ ನೀಡುವಂತೆ ವರಿಷ್ಟರು ಯಡಿಯೂರಪ್ಪ ಅವರ ಮನವೊಲಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ): </strong>ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನವಾಗುವ ಯಾವುದೇ ಲಕ್ಷಣಗಳು ಮಂಗಳವಾರವೂ ಗೋಚರಿಸಲಿಲ್ಲ. ಬದಲಿಗೆ ಯಡಿಯೂರಪ್ಪ ಬಣವು ಬಜೆಟ್ ಅಧಿವೇಶದ ಮೊದಲ ದಿನವಾದ ಮಂಗಳವಾರ ಬಹಿಷ್ಕರಿಸುವ ನಿರ್ಧಾರ ತಳೆದಿದ್ದು, ಬಿಕ್ಕಟ್ಟು ಇನ್ನಷ್ಟು ಉಲ್ಬಣಿಸಿದೆ.<br /> <br /> ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಯಡಿಯೂರಪ್ಪ ಅವರಿಗೆ ಬಜೆಟ್ ಅಧಿವೇಶವನ್ನು ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಕೇಳಿಕೊಂಡರೂ ಯಡಿಯೂರಪ್ಪ ಅವರು ಇದಕ್ಕೆ ಒಪ್ಪಿಲ್ಲ ಎನ್ನಲಾಗಿದೆ. <br /> <br /> ಯಡಿಯೂರಪ್ಪ ಬಣದ ಹಲವು ಶಾಸಕರು ಖಾಸಗಿ ರೆಸಾರ್ಟ್ನಲ್ಲಿ ಭಾನುವಾರದಿಂದ ತಂಗಿದ್ದು, ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸುವ ತನಕ ರೆಸಾರ್ಟ್ನಲ್ಲೆ ಉಳಿಯುವುದಾಗಿ ತಿಳಿಸಿದ್ದಾರೆ.<br /> <br /> ಈ ಮಧ್ಯೆ ಯಡಿಯೂರಪ್ಪ ಅವರ ಬಣದ ಪ್ರತಿನಿಧಿಗಳಾಗಿ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಶಾಸಕರಾದ ಲಕ್ಷ್ಮಿನಾರಾಯಣ ಮತ್ತು ಚಂದ್ರಕಾಂತ ಬೆಲ್ಲದ ಅವರು ಮಾತ್ರ ಭಾಗವಹಿಸಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಏನಿದ್ದರೂ ಮುಂಗಡಪತ್ರ ಮಂಡನೆಗೆ ಮುಖ್ಯಮಂತ್ರಿ ಸದಾನಂದಗೌಡರಿಗೆ ಅವಕಾಶ ನೀಡುವಂತೆ ವರಿಷ್ಟರು ಯಡಿಯೂರಪ್ಪ ಅವರ ಮನವೊಲಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>