<p><strong>ಮುಂಬೈ (ಪಿಟಿಐ): </strong>2012-13ನೇ ಸಾಲಿನ ಕೇಂದ್ರ ಬಜೆಟ್ ಮಾರ್ಚ್ 16ರಂದು (ಶುಕ್ರವಾರ) ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ, ಮುಂಬೈ ಷೇರು ಪೇಟೆ ಸಂವೇದಿ ಸೂಚ್ಯಂಕವು ತೀವ್ರ ಏರಿಳಿತ ಕಾಣುವ ಸಾಧ್ಯತೆ ಇದೆ. <br /> <br /> ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಕಟಿಸಲಿರುವ ಮಧ್ಯಂತರ ಹಣಕಾಸು ಪರಾಮರ್ಶೆ, ಬಜೆಟ್ ಪೂರ್ವ ಆರ್ಥಿಕ ಸಮೀಕ್ಷಾ ವರದಿ ಇತ್ಯಾದಿ ಸಂಗತಿಗಳು ಕೂಡ ಈ ವಾರ ಷೇರುಪೇಟೆಯಲ್ಲಿ ಗರಿಷ್ಠ ಮಟ್ಟದ ತಲ್ಲಣ ಸೃಷ್ಟಿಸಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.<br /> <br /> ಗ್ರೀಸ್ ಪರಿಹಾರ ಕೊಡುಗೆಗೆ ಸಂಬಂಧಿಸಿದಂತೆ ಯೂರೋಪ್ ಒಕ್ಕೂಟ ಕೈಗೊಂಡಿರುವ ಕ್ರಮಗಳಿಂದ ಜಾಗತಿಕ ಷೇರುಪೇಟೆಗಳಲ್ಲಿ ಸ್ಥಿರತೆ ಮೂಡಿದೆ. ಆದರೆ, ದೇಶಿಯ ಮಟ್ಟದಲ್ಲಿ ಈ ವಾರ ಸಂಪೂರ್ಣವಾಗಿ `ಬಜೆಟ್~, ವಹಿವಾಟನ್ನು ನಿರ್ಧರಿಸಲಿದೆ ಎಂದು ಏಂಜೆಲ್ ಬ್ರೋಕಿಂಗ್ ಸಂಸ್ಥೆ ಅಭಿಪ್ರಾಯಪಟ್ಟಿದೆ. <br /> <br /> `ಆರ್ಬಿಐ~ ಈಗಾಗಲೇ ಬ್ಯಾಂಕುಗಳ ನಗದು ಮೀಸಲು ಅನುಪಾತವನ್ನು (ಸಿಆರ್ಆರ್) ಶೇ 0.75ರಷ್ಟು ತಗ್ಗಿಸಿದೆ. ಇದರಿಂದ ಮಾರುಕಟ್ಟೆಗೆ ಹೆಚ್ಚುವರಿಯಾಗಿ ್ಙ48 ಸಾವಿರ ಕೋಟಿಗಳಷ್ಟು ಬಂಡವಾಳ ಹರಿದು ಬರಲಿದೆ. `ಆರ್ಬಿಐ~ ಕ್ರಮದಿಂದ ವಾರಾಂತ್ಯದ ವಹಿವಾಟಿನಲ್ಲಿ ಸೂಚ್ಯಂಕ 350 ಅಂಶಗಳಷ್ಟು ಏರಿಕೆ ಕಂಡಿದೆ. <br /> <br /> `ಆರ್ಬಿಐ~ ಅನಿರೀಕ್ಷಿತ ನಿರ್ಧಾರವು ಷೇರುಪೇಟೆಯಲ್ಲಿ ಚೇತರಿಕೆ ತಂದಿರುವುದೇನೋ ನಿಜ, ಆದರೆ, ಬಜೆಟ್ ಹಿನ್ನೆಲೆಯಲ್ಲಿ, ಸೋಮವಾರದಿಂದ ವಹಿವಾಟಿನ ಚಿತ್ರಣ ಸಂಪೂರ್ಣವಾಗಿ ಬದಲಾಗಲಿದೆ ಎಂದು `ವೇ-ಟು-ವೆಲ್ತ್~ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಷ್ ಬಳಿಗಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>2012-13ನೇ ಸಾಲಿನ ಕೇಂದ್ರ ಬಜೆಟ್ ಮಾರ್ಚ್ 16ರಂದು (ಶುಕ್ರವಾರ) ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ, ಮುಂಬೈ ಷೇರು ಪೇಟೆ ಸಂವೇದಿ ಸೂಚ್ಯಂಕವು ತೀವ್ರ ಏರಿಳಿತ ಕಾಣುವ ಸಾಧ್ಯತೆ ಇದೆ. <br /> <br /> ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಕಟಿಸಲಿರುವ ಮಧ್ಯಂತರ ಹಣಕಾಸು ಪರಾಮರ್ಶೆ, ಬಜೆಟ್ ಪೂರ್ವ ಆರ್ಥಿಕ ಸಮೀಕ್ಷಾ ವರದಿ ಇತ್ಯಾದಿ ಸಂಗತಿಗಳು ಕೂಡ ಈ ವಾರ ಷೇರುಪೇಟೆಯಲ್ಲಿ ಗರಿಷ್ಠ ಮಟ್ಟದ ತಲ್ಲಣ ಸೃಷ್ಟಿಸಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.<br /> <br /> ಗ್ರೀಸ್ ಪರಿಹಾರ ಕೊಡುಗೆಗೆ ಸಂಬಂಧಿಸಿದಂತೆ ಯೂರೋಪ್ ಒಕ್ಕೂಟ ಕೈಗೊಂಡಿರುವ ಕ್ರಮಗಳಿಂದ ಜಾಗತಿಕ ಷೇರುಪೇಟೆಗಳಲ್ಲಿ ಸ್ಥಿರತೆ ಮೂಡಿದೆ. ಆದರೆ, ದೇಶಿಯ ಮಟ್ಟದಲ್ಲಿ ಈ ವಾರ ಸಂಪೂರ್ಣವಾಗಿ `ಬಜೆಟ್~, ವಹಿವಾಟನ್ನು ನಿರ್ಧರಿಸಲಿದೆ ಎಂದು ಏಂಜೆಲ್ ಬ್ರೋಕಿಂಗ್ ಸಂಸ್ಥೆ ಅಭಿಪ್ರಾಯಪಟ್ಟಿದೆ. <br /> <br /> `ಆರ್ಬಿಐ~ ಈಗಾಗಲೇ ಬ್ಯಾಂಕುಗಳ ನಗದು ಮೀಸಲು ಅನುಪಾತವನ್ನು (ಸಿಆರ್ಆರ್) ಶೇ 0.75ರಷ್ಟು ತಗ್ಗಿಸಿದೆ. ಇದರಿಂದ ಮಾರುಕಟ್ಟೆಗೆ ಹೆಚ್ಚುವರಿಯಾಗಿ ್ಙ48 ಸಾವಿರ ಕೋಟಿಗಳಷ್ಟು ಬಂಡವಾಳ ಹರಿದು ಬರಲಿದೆ. `ಆರ್ಬಿಐ~ ಕ್ರಮದಿಂದ ವಾರಾಂತ್ಯದ ವಹಿವಾಟಿನಲ್ಲಿ ಸೂಚ್ಯಂಕ 350 ಅಂಶಗಳಷ್ಟು ಏರಿಕೆ ಕಂಡಿದೆ. <br /> <br /> `ಆರ್ಬಿಐ~ ಅನಿರೀಕ್ಷಿತ ನಿರ್ಧಾರವು ಷೇರುಪೇಟೆಯಲ್ಲಿ ಚೇತರಿಕೆ ತಂದಿರುವುದೇನೋ ನಿಜ, ಆದರೆ, ಬಜೆಟ್ ಹಿನ್ನೆಲೆಯಲ್ಲಿ, ಸೋಮವಾರದಿಂದ ವಹಿವಾಟಿನ ಚಿತ್ರಣ ಸಂಪೂರ್ಣವಾಗಿ ಬದಲಾಗಲಿದೆ ಎಂದು `ವೇ-ಟು-ವೆಲ್ತ್~ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಷ್ ಬಳಿಗಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>