<p>ಮುಖ್ಯಮಂತ್ರಿ ಸದಾನಂದ ಗೌಡರು ಹಟಕ್ಕೆ ಬಿದ್ದು ಈ ವರ್ಷದ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಎಲ್ಲ ವರ್ಗದ ಜನರಿಗೂ ಹೆಚ್ಚು ಕಡಿಮೆ ಇಷ್ಟವಾಗಿದೆ. ಈ ಬಜೆಟ್ ಅನುಷ್ಠಾನಕ್ಕೆ ಬರಬೇಕು ಎಂಬುದು ಎಲ್ಲರ ಬಯಕೆ. ಹಿಂದಿನ ವರ್ಷ ಬಿ.ಎಸ್.ಯಡಿಯೂರಪ್ಪ ಮೊದಲ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ ಅದು ಸರಿಯಾಗಿ ಜಾರಿಗೆ ಬರಲಿಲ್ಲ. ಆದ್ದರಿಂದ ಬಜೆಟ್ ಮಂಡನೆ ಮುಖ್ಯವಲ್ಲ ಅದು ಜಾರಿಯಾಗುವುದು ಮುಖ್ಯ.<br /> <br /> ಬಜೆಟ್ ಜಾರಿಯಾಗಬೇಕೆಂದರೆ ಸಂಪನ್ಮೂಲ ಕ್ರೋಢೀಕರಣ ಮುಖ್ಯ. ರಾಜ್ಯಕ್ಕೆ ಹೆಚ್ಚು ಆದಾಯ ತಂದು ಕೊಡುವ ಇಲಾಖೆಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು ಕಾಲಕಾಲಕ್ಕೆ ಸಂಪನ್ಮೂಲ ಸಂಗ್ರಹಿಸಿ ಅದನ್ನು ಸಕಾಲಕ್ಕೆ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. <br /> <br /> ದುರದೃಷ್ಟದ ವಿಚಾರ ಎಂದರೆ ಗೌಡರ ಸಂಪುಟದಲ್ಲಿರುವ ಕೆಲ ಮಂತ್ರಿಗಳಿಗೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಇಂತಹ ಸಚಿವರನ್ನು ಇಟ್ಟುಕೊಂಡು ಬಜೆಟ್ ಜಾರಿಗೆ ತರಲು ಸಾಧ್ಯವೇ? <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಖ್ಯಮಂತ್ರಿ ಸದಾನಂದ ಗೌಡರು ಹಟಕ್ಕೆ ಬಿದ್ದು ಈ ವರ್ಷದ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಎಲ್ಲ ವರ್ಗದ ಜನರಿಗೂ ಹೆಚ್ಚು ಕಡಿಮೆ ಇಷ್ಟವಾಗಿದೆ. ಈ ಬಜೆಟ್ ಅನುಷ್ಠಾನಕ್ಕೆ ಬರಬೇಕು ಎಂಬುದು ಎಲ್ಲರ ಬಯಕೆ. ಹಿಂದಿನ ವರ್ಷ ಬಿ.ಎಸ್.ಯಡಿಯೂರಪ್ಪ ಮೊದಲ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ ಅದು ಸರಿಯಾಗಿ ಜಾರಿಗೆ ಬರಲಿಲ್ಲ. ಆದ್ದರಿಂದ ಬಜೆಟ್ ಮಂಡನೆ ಮುಖ್ಯವಲ್ಲ ಅದು ಜಾರಿಯಾಗುವುದು ಮುಖ್ಯ.<br /> <br /> ಬಜೆಟ್ ಜಾರಿಯಾಗಬೇಕೆಂದರೆ ಸಂಪನ್ಮೂಲ ಕ್ರೋಢೀಕರಣ ಮುಖ್ಯ. ರಾಜ್ಯಕ್ಕೆ ಹೆಚ್ಚು ಆದಾಯ ತಂದು ಕೊಡುವ ಇಲಾಖೆಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು ಕಾಲಕಾಲಕ್ಕೆ ಸಂಪನ್ಮೂಲ ಸಂಗ್ರಹಿಸಿ ಅದನ್ನು ಸಕಾಲಕ್ಕೆ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. <br /> <br /> ದುರದೃಷ್ಟದ ವಿಚಾರ ಎಂದರೆ ಗೌಡರ ಸಂಪುಟದಲ್ಲಿರುವ ಕೆಲ ಮಂತ್ರಿಗಳಿಗೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಇಂತಹ ಸಚಿವರನ್ನು ಇಟ್ಟುಕೊಂಡು ಬಜೆಟ್ ಜಾರಿಗೆ ತರಲು ಸಾಧ್ಯವೇ? <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>