<p><strong>ನವದೆಹಲಿ (ಪಿಟಿಐ):</strong> 2012-13ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಮತ್ತು ಸೇವಾ ತೆರಿಗೆ ಹೆಚ್ಚಿಸಬಾರದು ಎಂದು ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. <br /> <br /> ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಬಡ್ಡಿ ದರ ಹೆಚ್ಚಿಸುವುದು ಉದ್ಯಮದ ಪ್ರಗತಿಗೆ ಹಿನ್ನಡೆ ತರಲಿದೆ. ಕೈಗಾರಿಕಾ ಪ್ರಗತಿಗೆ ಉತ್ತೇಜನ ನೀಡಲು ಸೀಮಾ ಸುಂಕ ಕಡಿತಗೊಳಿಸುವ ಕುರಿತೂ ಸರ್ಕಾರ ಚಿಂತಿಸಬೇಕು ಎಂದು `ಸಿಐಐ~ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಿರುವ ಬಜೆಟ್ ಪೂರ್ವ ಮನವಿಯಲ್ಲಿ ಆಗ್ರಹಿಸಿದೆ. ಕೈಗಾರಿಕೆ ಮತ್ತು ತಯಾರಿಕೆ ಕ್ಷೇತ್ರದ ವೃದ್ಧಿ ದರ ಕುಸಿತದಿಂದ ದೇಶದ ವಿತ್ತೀಯ ಕೊರತೆಯು `ಜಿಡಿಪಿ~ಯ ಶೇ 4.6ಅನ್ನು ದಾಟುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ತೆರಿಗೆ ಹೆಚ್ಚಳಕ್ಕೆ ಮುಂದಾಗಬಾರದು ಎಂದಿದೆ. <br /> <br /> ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಷೇರು ವಿಕ್ರಯ ಮತ್ತು ಸಬ್ಸಿಡಿಗೆ ಸಂಬಂಧಿಸಿದಂತೆ ಸಚಿವಾಲಯವು 5 ವರ್ಷಗಳ ನೀಲಿನಕ್ಷೆಯೊಂದನ್ನು ಸಿದ್ಧಪಡಿಸಬೇಕು ಎಂದೂ `ಸಿಐಐ~ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2012-13ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಮತ್ತು ಸೇವಾ ತೆರಿಗೆ ಹೆಚ್ಚಿಸಬಾರದು ಎಂದು ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. <br /> <br /> ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಬಡ್ಡಿ ದರ ಹೆಚ್ಚಿಸುವುದು ಉದ್ಯಮದ ಪ್ರಗತಿಗೆ ಹಿನ್ನಡೆ ತರಲಿದೆ. ಕೈಗಾರಿಕಾ ಪ್ರಗತಿಗೆ ಉತ್ತೇಜನ ನೀಡಲು ಸೀಮಾ ಸುಂಕ ಕಡಿತಗೊಳಿಸುವ ಕುರಿತೂ ಸರ್ಕಾರ ಚಿಂತಿಸಬೇಕು ಎಂದು `ಸಿಐಐ~ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಿರುವ ಬಜೆಟ್ ಪೂರ್ವ ಮನವಿಯಲ್ಲಿ ಆಗ್ರಹಿಸಿದೆ. ಕೈಗಾರಿಕೆ ಮತ್ತು ತಯಾರಿಕೆ ಕ್ಷೇತ್ರದ ವೃದ್ಧಿ ದರ ಕುಸಿತದಿಂದ ದೇಶದ ವಿತ್ತೀಯ ಕೊರತೆಯು `ಜಿಡಿಪಿ~ಯ ಶೇ 4.6ಅನ್ನು ದಾಟುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ತೆರಿಗೆ ಹೆಚ್ಚಳಕ್ಕೆ ಮುಂದಾಗಬಾರದು ಎಂದಿದೆ. <br /> <br /> ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಷೇರು ವಿಕ್ರಯ ಮತ್ತು ಸಬ್ಸಿಡಿಗೆ ಸಂಬಂಧಿಸಿದಂತೆ ಸಚಿವಾಲಯವು 5 ವರ್ಷಗಳ ನೀಲಿನಕ್ಷೆಯೊಂದನ್ನು ಸಿದ್ಧಪಡಿಸಬೇಕು ಎಂದೂ `ಸಿಐಐ~ ಸಲಹೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>