<p><strong>ನವದೆಹಲಿ (ಪಿಟಿಐ):</strong> ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ, ಕೇಂದ್ರ ಬಜೆಟ್, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಕಟಿಸಲಿರುವ ಮಧ್ಯಂತರ ತ್ರೈಮಾಸಿಕ ಹಣಕಾಸು ನೀತಿ ಸೇರಿದಂತೆ ಹಲವು ಸಂಗತಿಗಳು ಮುಂದಿನ ದಿನಗಳಲ್ಲಿ ಷೇರು ಪೇಟೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. <br /> <br /> ಮುಂದಿನ 10ರಿಂದ 15 ದಿನಗಳ ವರೆಗೆ ಈ ಮೇಲಿನ ಸಂಗತಿಗಳ ತೀವ್ರ ಪ್ರಭಾವ ಇರುತ್ತದೆ. ಇದರ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದೂ ಕೂಡ ಪೇಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾದ ಸಂಗತಿ ಎಂದು ಅಂದಾಜಿಸಲಾಗಿದೆ.ಮಾರ್ಚ್ 6ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. 15 ರಂದು `ಆರ್ಬಿಐ~ ಹಣಕಾಸು ಪರಾಮರ್ಶೆ ಪ್ರಕಟಿಸಲಿದೆ. ಇದರ ಬೆನ್ನ ಹಿಂದೆಯೇ ಮಾರ್ಚ್ 16ರಂದು ಕೆಂದ್ರ ಬಜೆಟ್ ಮಂಡನೆಯಾಗಲಿದೆ. ಇವು ವಹಿವಾಟಿನ ತೀವ್ರ ಏರಿಳಿತಕ್ಕೆ ಕಾರಣವಾಗಬಹುದು ಎಂದು ಜಿಯೊಜಿತ್ ಬಿಎನ್ಪಿ ಹಣಕಾಸು ಸಂಸ್ಥೆಯ ಮುಖ್ಯಸ್ಥ ಅಲೆಕ್ಸ್ ಮಾಥ್ಯೂಸ್ ಅಭಿಪ್ರಾಯಪಟ್ಟಿದ್ದಾರೆ. <br /> <br /> ಕಳೆದ ವಾರಾಂತ್ಯದ ವೇಳೆಗೆ ಸೂಚ್ಯಂಕ ಶೇ 1.6ರಷ್ಟು ಇಳಿಕೆ ಕಂಡಿದ್ದು, 17,636 ಅಂಶಗಳಿಗೆ ವಹಿವಾಟು ಕೊನೆಗೊಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೆಯ ತ್ರೈಮಾಸಿಕ ಅವಧಿಯಲ್ಲಿ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) 2 ವರ್ಷಗಳ ಹಿಂದಿನ ಮಟ್ಟ ಶೇ 6.1ಕ್ಕೆ ಕುಸಿದಿರುವುದು ಹೂಡಿಕೆದಾರರಲ್ಲಿ ಆತಂಕ ಹೆಚ್ಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ, ಕೇಂದ್ರ ಬಜೆಟ್, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಕಟಿಸಲಿರುವ ಮಧ್ಯಂತರ ತ್ರೈಮಾಸಿಕ ಹಣಕಾಸು ನೀತಿ ಸೇರಿದಂತೆ ಹಲವು ಸಂಗತಿಗಳು ಮುಂದಿನ ದಿನಗಳಲ್ಲಿ ಷೇರು ಪೇಟೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. <br /> <br /> ಮುಂದಿನ 10ರಿಂದ 15 ದಿನಗಳ ವರೆಗೆ ಈ ಮೇಲಿನ ಸಂಗತಿಗಳ ತೀವ್ರ ಪ್ರಭಾವ ಇರುತ್ತದೆ. ಇದರ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದೂ ಕೂಡ ಪೇಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾದ ಸಂಗತಿ ಎಂದು ಅಂದಾಜಿಸಲಾಗಿದೆ.ಮಾರ್ಚ್ 6ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. 15 ರಂದು `ಆರ್ಬಿಐ~ ಹಣಕಾಸು ಪರಾಮರ್ಶೆ ಪ್ರಕಟಿಸಲಿದೆ. ಇದರ ಬೆನ್ನ ಹಿಂದೆಯೇ ಮಾರ್ಚ್ 16ರಂದು ಕೆಂದ್ರ ಬಜೆಟ್ ಮಂಡನೆಯಾಗಲಿದೆ. ಇವು ವಹಿವಾಟಿನ ತೀವ್ರ ಏರಿಳಿತಕ್ಕೆ ಕಾರಣವಾಗಬಹುದು ಎಂದು ಜಿಯೊಜಿತ್ ಬಿಎನ್ಪಿ ಹಣಕಾಸು ಸಂಸ್ಥೆಯ ಮುಖ್ಯಸ್ಥ ಅಲೆಕ್ಸ್ ಮಾಥ್ಯೂಸ್ ಅಭಿಪ್ರಾಯಪಟ್ಟಿದ್ದಾರೆ. <br /> <br /> ಕಳೆದ ವಾರಾಂತ್ಯದ ವೇಳೆಗೆ ಸೂಚ್ಯಂಕ ಶೇ 1.6ರಷ್ಟು ಇಳಿಕೆ ಕಂಡಿದ್ದು, 17,636 ಅಂಶಗಳಿಗೆ ವಹಿವಾಟು ಕೊನೆಗೊಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೆಯ ತ್ರೈಮಾಸಿಕ ಅವಧಿಯಲ್ಲಿ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) 2 ವರ್ಷಗಳ ಹಿಂದಿನ ಮಟ್ಟ ಶೇ 6.1ಕ್ಕೆ ಕುಸಿದಿರುವುದು ಹೂಡಿಕೆದಾರರಲ್ಲಿ ಆತಂಕ ಹೆಚ್ಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>