<p><strong>ಬೆಂಗಳೂರು:</strong> `ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ, ಬಜೆಟ್ ಮಂಡನೆ ಸದ್ಯ ನನ್ನ ಮುಂದಿರುವ ಸವಾಲು. ಇದಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ಬೇರೆ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಮುಂದೆ ಕೆಡಿಸಿಕೊಳ್ಳುವುದೂ ಇಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.<br /> <br /> ಗೋವಾಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಈಗ ಚುನಾವಣಾ ಪ್ರಚಾರ ಮತ್ತು ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದೇನೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ದೆಹಲಿಗೆ ತೆರಳುವುದಿಲ್ಲ~ ಎಂದರು.<br /> <br /> `ಬಜೆಟ್ ಮಂಡನೆ ಮತ್ತು ಉಪ ಚುನಾವಣೆಯ ಗೆಲುವು ಸವಾಲಿನ ಕೆಲಸವಾಗಿದೆ. ಹೀಗಾಗಿ ಈ ಎರಡೂ ವಿಷಯಗಳಿಗೆ ಹೆಚ್ಚಿನ ಒತ್ತು ಕೊಟ್ಟಿದ್ದೇನೆ. ರಾಜಕೀಯ ಚಟುವಟಿಕೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅದರ ಅಗತ್ಯವೂ ನನಗಿಲ್ಲ. ಪಕ್ಷದ ಅಧ್ಯಕ್ಷರು ಹಾಗೂ ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ~ ಎಂದು ತಿಳಿಸಿದರು.<br /> <br /> `ಹುಬ್ಬಳ್ಳಿಯಲ್ಲಿ ಇದೇ 11ರಂದು ನಡೆಯುವ ಯಡಿಯೂರಪ್ಪ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಆಹ್ವಾನಿಸಿದ್ದಾರೆ. <br /> <br /> ಪೂರ್ವ ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಪಾಳ್ಗೊಳ್ಳುವುದು ಕಷ್ಟ. ಸಾಧ್ಯವಾದರೆ ಬರುವುದಾಗಿ ತಿಳಿಸಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ, ಬಜೆಟ್ ಮಂಡನೆ ಸದ್ಯ ನನ್ನ ಮುಂದಿರುವ ಸವಾಲು. ಇದಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ಬೇರೆ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಮುಂದೆ ಕೆಡಿಸಿಕೊಳ್ಳುವುದೂ ಇಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.<br /> <br /> ಗೋವಾಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಈಗ ಚುನಾವಣಾ ಪ್ರಚಾರ ಮತ್ತು ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದೇನೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ದೆಹಲಿಗೆ ತೆರಳುವುದಿಲ್ಲ~ ಎಂದರು.<br /> <br /> `ಬಜೆಟ್ ಮಂಡನೆ ಮತ್ತು ಉಪ ಚುನಾವಣೆಯ ಗೆಲುವು ಸವಾಲಿನ ಕೆಲಸವಾಗಿದೆ. ಹೀಗಾಗಿ ಈ ಎರಡೂ ವಿಷಯಗಳಿಗೆ ಹೆಚ್ಚಿನ ಒತ್ತು ಕೊಟ್ಟಿದ್ದೇನೆ. ರಾಜಕೀಯ ಚಟುವಟಿಕೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅದರ ಅಗತ್ಯವೂ ನನಗಿಲ್ಲ. ಪಕ್ಷದ ಅಧ್ಯಕ್ಷರು ಹಾಗೂ ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ~ ಎಂದು ತಿಳಿಸಿದರು.<br /> <br /> `ಹುಬ್ಬಳ್ಳಿಯಲ್ಲಿ ಇದೇ 11ರಂದು ನಡೆಯುವ ಯಡಿಯೂರಪ್ಪ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಆಹ್ವಾನಿಸಿದ್ದಾರೆ. <br /> <br /> ಪೂರ್ವ ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಪಾಳ್ಗೊಳ್ಳುವುದು ಕಷ್ಟ. ಸಾಧ್ಯವಾದರೆ ಬರುವುದಾಗಿ ತಿಳಿಸಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>