<p><strong>ಪೀಣ್ಯ ದಾಸರಹಳ್ಳಿ</strong>: ‘ರಾಜಕೀಯದಲ್ಲಿ ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದರ ನಡುವೆಯೂ ಜನಪ್ರತಿನಿಧಿಗಳು ಸಹಾಯ ಮಾಡುವ ಗುಣ ಬೆಳೆಸಿಕೊಂಡು ಬಡವರ ಏಳಿಗೆಗೆ ಶ್ರಮಿಸಬೇಕು’ ಎಂದು ಕೆಪಿಸಿಸಿ ಸದಸ್ಯರಾದ ಸೌಂದರ್ಯ ಮಂಜಪ್ಪ ಸಲಹೆ ಮಾಡಿದರು.<br /> <br /> ದಾಸರಹಳ್ಳಿ ಕ್ಷೇತ್ರದ ಪೀಣ್ಯ ಕೈಗಾರಿಕಾ ನಗರದ ಶ್ರೀಗಂಧ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೊಕ್ಕಸಂದ್ರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಗವಿಕಲ ಕಾರ್ಮಿಕ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ‘ಅಂಗವಿಕಲರು ಆತ್ಮಸ್ಥೈರ್ಯದಿಂದ ಹಾಗೂ ಸ್ವಾವಲಂಬಿಗಳಾಗಿ ಬದುಕಲು ಅವರಲ್ಲಿ ಸ್ಫೂರ್ತಿ ತುಂಬುವುದರ ಜೊತೆಗೆ ನಾವೆಲ್ಲ ಅಗತ್ಯ ಸಹಕಾರ ನೀಡಿ ಮಾನವೀಯತೆ ಮೆರೆಯಬೇಕಾಗಿದೆ’ ಎಂದರು.<br /> ಚೊಕ್ಕಸಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಲೋಕೇಶ್ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಲು ಮುಂದಾಗಬೇಕು’ ಎಂದರು.<br /> <br /> ಮುಖಂಡರಾದ ಭಾಸ್ಕರಾಚಾರ್, ಸುಕೀರ್ತಿ, ನಟರಾಜ್ ಕುಮಾರ್, ರೀಟಾ ವಿಜಯ್, ಶಿವಣ್ಣ, ಅಶ್ವತ್ಥಪ್ಪ, ಕೃಷ್ಣಮೂರ್ತಿ, ಕ್ರೇಸಿ ಥಾಮಸ್, ಭಾಗ್ಯಮ್ಮ, ಸಬೀರ್ ಅಹಮದ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: ‘ರಾಜಕೀಯದಲ್ಲಿ ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದರ ನಡುವೆಯೂ ಜನಪ್ರತಿನಿಧಿಗಳು ಸಹಾಯ ಮಾಡುವ ಗುಣ ಬೆಳೆಸಿಕೊಂಡು ಬಡವರ ಏಳಿಗೆಗೆ ಶ್ರಮಿಸಬೇಕು’ ಎಂದು ಕೆಪಿಸಿಸಿ ಸದಸ್ಯರಾದ ಸೌಂದರ್ಯ ಮಂಜಪ್ಪ ಸಲಹೆ ಮಾಡಿದರು.<br /> <br /> ದಾಸರಹಳ್ಳಿ ಕ್ಷೇತ್ರದ ಪೀಣ್ಯ ಕೈಗಾರಿಕಾ ನಗರದ ಶ್ರೀಗಂಧ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೊಕ್ಕಸಂದ್ರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಗವಿಕಲ ಕಾರ್ಮಿಕ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ‘ಅಂಗವಿಕಲರು ಆತ್ಮಸ್ಥೈರ್ಯದಿಂದ ಹಾಗೂ ಸ್ವಾವಲಂಬಿಗಳಾಗಿ ಬದುಕಲು ಅವರಲ್ಲಿ ಸ್ಫೂರ್ತಿ ತುಂಬುವುದರ ಜೊತೆಗೆ ನಾವೆಲ್ಲ ಅಗತ್ಯ ಸಹಕಾರ ನೀಡಿ ಮಾನವೀಯತೆ ಮೆರೆಯಬೇಕಾಗಿದೆ’ ಎಂದರು.<br /> ಚೊಕ್ಕಸಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಲೋಕೇಶ್ ಮಾತನಾಡಿ, ‘ಕೇಂದ್ರ ಸರ್ಕಾರ ಕಾರ್ಮಿಕರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಲು ಮುಂದಾಗಬೇಕು’ ಎಂದರು.<br /> <br /> ಮುಖಂಡರಾದ ಭಾಸ್ಕರಾಚಾರ್, ಸುಕೀರ್ತಿ, ನಟರಾಜ್ ಕುಮಾರ್, ರೀಟಾ ವಿಜಯ್, ಶಿವಣ್ಣ, ಅಶ್ವತ್ಥಪ್ಪ, ಕೃಷ್ಣಮೂರ್ತಿ, ಕ್ರೇಸಿ ಥಾಮಸ್, ಭಾಗ್ಯಮ್ಮ, ಸಬೀರ್ ಅಹಮದ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>