<p>ಬೆಂಗಳೂರು: `ಬಡವರ ಪರ ಕಾರ್ಯನಿರ್ವಹಿಸಲು ಮುಖ್ಯಮಂತ್ರಿಯೇ ಆಗಬೇಕೆಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿಯೇ ಬಡವರ ಸೇವೆ ಮಾಡುವೆ. ಈ ಸ್ಥಾನಕ್ಕಾಗಿ ಎಂದೂ ಭಿಕ್ಷೆ ಬೇಡುವುದಿಲ್ಲ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> <br /> ಕರ್ನಾಟಕ ರಾಜ್ಯ ಸವಿತಾ ಸಮಾಜವು ನಗರದ ಪುರಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸವಿತಾ ಸಮಾಜದ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.<br /> <br /> `ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸವಿತಾ ಸಮುದಾಯದವರ ಸಂಖ್ಯೆ ಕಡಿಮೆ ಇದೆ. ಕುಲಕಸುಬು ಒಂದೆಡೆ ಇರಲಿ, ಸಮುದಾಯದ ಹಿರಿಯರು ಮಕ್ಕಳನ್ನು ಸಂಪೂರ್ಣ ಶಿಕ್ಷಿತರನ್ನಾಗಿ ಮಾಡುತ್ತೇವೆಂಬ ಪಣ ತೊಡುವ ಮೂಲಕ ಸಮುದಾಯಕ್ಕೆ ಕಾಣಿಕೆ ನೀಡಬೇಕು~ ಎಂದು ಕರೆ ನೀಡಿದರು. `ಬಿಜೆಪಿ ಸರ್ಕಾರವು ಸವಿತಾ ಸಮುದಾಯದ ಅಭಿವೃದ್ಧಿಗೆ ಉತ್ತಮ ಕೊಡುಗೆಗಳನ್ನು ನೀಡಿದೆ. ಮೂರು ವರ್ಷಗಳ ಹಿಂದೆ ಈ ಸಮುದಾಯವು ಯಾವ ಸ್ಥಿತಿಯಲ್ಲಿತ್ತು ಎಂಬುದನ್ನು ಅರಿಯಬೇಕು. ನನಗೆ ಜಾತಿ ಗೊತ್ತಿಲ್ಲ. ಎಲ್ಲರೂ ಸಮಾನರೂ ಎಂಬ ಅಂಶವನ್ನೇ ಮುಂದಿಟ್ಟುಕೊಂಡು ಎಲ್ಲ ಬಜೆಟ್ಗಳನ್ನು ಮಂಡಿಸಿದ್ದೇನೆ~ ಎಂದು ಹೇಳಿದರು.<br /> <br /> `ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಪ್ರಧಾನಿ ಮನಮೋಹನ್ಸಿಂಗ್ ಅವರಿಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಯಾಗಿ ತೆಗೆದುಕೊಂಡ ಈ ದಿಟ್ಟ ಕ್ರಮಕ್ಕೆ ಪ್ರಧಾನಿ ಅವರು ನನ್ನನ್ನು ಸನ್ಮಾನಿಸಬೇಕಿತ್ತು. ಆದರೆ ವಿರೋಧ ಪಕ್ಷ ಮತ್ತು ಸ್ವಪಕ್ಷದ ಕೆಲವರ ಪಿತೂರಿಯಿಂದ ಅಪರಾಧಿ ಸ್ಥಾನದಲ್ಲಿ ನಿಂತು 24 ದಿನಗಳು ಜೈಲಿನಲ್ಲಿ ಕಳೆಯಬೇಕಾಯಿತು. ಈ ರೀತಿಯ ದೌರ್ಜನ್ಯಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬೇಕಿತ್ತಾ? ಎಂದು ಪ್ರಶ್ನಿಸಿದರು. <br /> <br /> ಸಚಿವ ವಿ.ಸೋಮಣ್ಣ, ` ಸವಿತಾ ಸಮುದಾಯದಲ್ಲಿರುವ ನಿರ್ಗತಿಕರಿಗೆ ಉಚಿತ ನಿವೇಶನ ನೀಡುವತ್ತ ಚಿಂತನೆ ನಡೆಸಲಾಗಿದೆ. ಆ ಮೂಲಕ ಗುಡಿಸಲುರಹಿತ ಸಮಾಜವನ್ನು ನಿರ್ಮಿಸುವ ಕನಸು ಸಾಕಾರಗೊಳ್ಳಲಿದೆ~ ಎಂದು ಹೇಳಿದರು.<br /> <br /> ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕರಪ್ಪ, ಉಪಮೇಯರ್ ಎಸ್.ಹರೀಶ್, ಸಮಾಜ ಅಧ್ಯಕ್ಷ ಎನ್.ಸಂಪತ್ಕುಮಾರ್ ಉಪಸ್ಥಿತರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಬಡವರ ಪರ ಕಾರ್ಯನಿರ್ವಹಿಸಲು ಮುಖ್ಯಮಂತ್ರಿಯೇ ಆಗಬೇಕೆಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿಯೇ ಬಡವರ ಸೇವೆ ಮಾಡುವೆ. ಈ ಸ್ಥಾನಕ್ಕಾಗಿ ಎಂದೂ ಭಿಕ್ಷೆ ಬೇಡುವುದಿಲ್ಲ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> <br /> ಕರ್ನಾಟಕ ರಾಜ್ಯ ಸವಿತಾ ಸಮಾಜವು ನಗರದ ಪುರಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸವಿತಾ ಸಮಾಜದ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.<br /> <br /> `ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸವಿತಾ ಸಮುದಾಯದವರ ಸಂಖ್ಯೆ ಕಡಿಮೆ ಇದೆ. ಕುಲಕಸುಬು ಒಂದೆಡೆ ಇರಲಿ, ಸಮುದಾಯದ ಹಿರಿಯರು ಮಕ್ಕಳನ್ನು ಸಂಪೂರ್ಣ ಶಿಕ್ಷಿತರನ್ನಾಗಿ ಮಾಡುತ್ತೇವೆಂಬ ಪಣ ತೊಡುವ ಮೂಲಕ ಸಮುದಾಯಕ್ಕೆ ಕಾಣಿಕೆ ನೀಡಬೇಕು~ ಎಂದು ಕರೆ ನೀಡಿದರು. `ಬಿಜೆಪಿ ಸರ್ಕಾರವು ಸವಿತಾ ಸಮುದಾಯದ ಅಭಿವೃದ್ಧಿಗೆ ಉತ್ತಮ ಕೊಡುಗೆಗಳನ್ನು ನೀಡಿದೆ. ಮೂರು ವರ್ಷಗಳ ಹಿಂದೆ ಈ ಸಮುದಾಯವು ಯಾವ ಸ್ಥಿತಿಯಲ್ಲಿತ್ತು ಎಂಬುದನ್ನು ಅರಿಯಬೇಕು. ನನಗೆ ಜಾತಿ ಗೊತ್ತಿಲ್ಲ. ಎಲ್ಲರೂ ಸಮಾನರೂ ಎಂಬ ಅಂಶವನ್ನೇ ಮುಂದಿಟ್ಟುಕೊಂಡು ಎಲ್ಲ ಬಜೆಟ್ಗಳನ್ನು ಮಂಡಿಸಿದ್ದೇನೆ~ ಎಂದು ಹೇಳಿದರು.<br /> <br /> `ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಪ್ರಧಾನಿ ಮನಮೋಹನ್ಸಿಂಗ್ ಅವರಿಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಯಾಗಿ ತೆಗೆದುಕೊಂಡ ಈ ದಿಟ್ಟ ಕ್ರಮಕ್ಕೆ ಪ್ರಧಾನಿ ಅವರು ನನ್ನನ್ನು ಸನ್ಮಾನಿಸಬೇಕಿತ್ತು. ಆದರೆ ವಿರೋಧ ಪಕ್ಷ ಮತ್ತು ಸ್ವಪಕ್ಷದ ಕೆಲವರ ಪಿತೂರಿಯಿಂದ ಅಪರಾಧಿ ಸ್ಥಾನದಲ್ಲಿ ನಿಂತು 24 ದಿನಗಳು ಜೈಲಿನಲ್ಲಿ ಕಳೆಯಬೇಕಾಯಿತು. ಈ ರೀತಿಯ ದೌರ್ಜನ್ಯಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬೇಕಿತ್ತಾ? ಎಂದು ಪ್ರಶ್ನಿಸಿದರು. <br /> <br /> ಸಚಿವ ವಿ.ಸೋಮಣ್ಣ, ` ಸವಿತಾ ಸಮುದಾಯದಲ್ಲಿರುವ ನಿರ್ಗತಿಕರಿಗೆ ಉಚಿತ ನಿವೇಶನ ನೀಡುವತ್ತ ಚಿಂತನೆ ನಡೆಸಲಾಗಿದೆ. ಆ ಮೂಲಕ ಗುಡಿಸಲುರಹಿತ ಸಮಾಜವನ್ನು ನಿರ್ಮಿಸುವ ಕನಸು ಸಾಕಾರಗೊಳ್ಳಲಿದೆ~ ಎಂದು ಹೇಳಿದರು.<br /> <br /> ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕರಪ್ಪ, ಉಪಮೇಯರ್ ಎಸ್.ಹರೀಶ್, ಸಮಾಜ ಅಧ್ಯಕ್ಷ ಎನ್.ಸಂಪತ್ಕುಮಾರ್ ಉಪಸ್ಥಿತರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>