<p><strong>ಬೆಂಗಳೂರು:</strong> ನೇಕಾರರ ಸಾಲ ಮತ್ತು ಬಡ್ಡಿ ಮನ್ನಾ ಯೋಜನೆಯ ಪ್ರಯೋಜನವನ್ನು ಅನರ್ಹರೂ ಪಡೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಸೋಮವಾರ ಇಲ್ಲಿ ತಿಳಿಸಿದರು.<br /> <br /> ನೇಕಾರರಲ್ಲದ ಹಾಗೂ ಸಾಲವನ್ನೇ ಪಡೆಯದವರು ಸರ್ಕಾರದ ಸಾಲ ಮನ್ನಾ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಅಕ್ರಮದಿಂದ 25ರಿಂದ 30 ಲಕ್ಷ ರೂಪಾಯಿ ದುರುಪಯೋಗ ಆಗಿರುವ ಶಂಕೆ ಇದೆ. ಜಿಲ್ಲಾ ಮಟ್ಟದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಲಾಗುವುದು ಎಂದು ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.<br /> <br /> ಈ ಅಕ್ರಮದಲ್ಲಿ ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಯಾವ ರೀತಿಯ ಅಕ್ರಮ ನಡೆದಿದೆ ಎಂಬುದು ಇನ್ನೂ ಖಚಿತವಾಗಿ ಗೊತ್ತಾಗಿಲ್ಲ. ವಿಚಾರಣೆಗೆ ಆದೇಶಿಸಲಾಗಿದೆ. <br /> <br /> ಕೆಎಂಎಫ್ ಮೇಲೆ ನಿಗಾ: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಅವರು ಆಂಧ್ರಪ್ರದೇಶ ಪೊಲೀಸರ ವಶದಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸಂಸ್ಥೆಯ ಕಾರ್ಯನಿರ್ವಹಣೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.<br /> <br /> ಕೆಎಂಎಫ್ ನಷ್ಟದಲ್ಲಿದೆ ಎಂಬ ವದಂತಿಯಲ್ಲಿ ಹುರುಳಿಲ್ಲ. ಜೂನ್ ತಿಂಗಳೊಂದರಲ್ಲೇ ಎಂಟು ಕೋಟಿ ರೂಪಾಯಿ ಲಾಭ ಮಾಡಿದೆ. ಈ ಕುರಿತು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಅದಕ್ಕೆ ಯಾರೂ ಕಿವಿಗೊಡಬಾರದು ಎಂದು ಅವರು ಹೇಳಿದರು.<br /> <strong><br /> `ಸದಾನಂದಗೌಡರ ವಿರುದ್ಧ ಗೂಢಚರ್ಯೆ ಮಾಡಿಲ್ಲ~<br /> ಬೆಂಗಳೂರು:</strong> `ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಆಸ್ತಿ ದಾಖಲೆಗಳನ್ನು ಸಂಗ್ರಹಿಸಲು ನಾನಾಗಲಿ ಅಥವಾ ನನ್ನ ಕಡೆಯವರಾಗಲಿ ಅವರ ಊರಿಗೆ ಹೋಗಿಲ್ಲ~ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು. <br /> <br /> `ಸದಾನಂದ ಗೌಡರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಬಗ್ಗೆ ಗೌರವ ಇದೆ. ಆದರೆ, ಅವರೇ ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ~ ಎಂದು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಗೌಡರ ಊರು ಎಲ್ಲಿದೆ ಎಂಬುದೇ ಗೊತ್ತಿಲ್ಲ. ಅವರ ಆರೋಪಕ್ಕೆ ಪೂರಕವಾಗಿ ಪುರಾವೆಗಳು ಇದ್ದರೆ ಬಹಿರಂಗಪಡಿಸಬಹುದು. ನಾನಾಗಲಿ, ನನ್ನ ಕಡೆಯವರಾಗಲಿ ಅವರ ಆಸ್ತಿ ವಿವರ ಸಂಗ್ರಹಿಸಲು ಯತ್ನಿಸಿರುವುದನ್ನು ಸಾಬೀತುಪಡಿಸಿದರೆ ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನೇಕಾರರ ಸಾಲ ಮತ್ತು ಬಡ್ಡಿ ಮನ್ನಾ ಯೋಜನೆಯ ಪ್ರಯೋಜನವನ್ನು ಅನರ್ಹರೂ ಪಡೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಸೋಮವಾರ ಇಲ್ಲಿ ತಿಳಿಸಿದರು.<br /> <br /> ನೇಕಾರರಲ್ಲದ ಹಾಗೂ ಸಾಲವನ್ನೇ ಪಡೆಯದವರು ಸರ್ಕಾರದ ಸಾಲ ಮನ್ನಾ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಅಕ್ರಮದಿಂದ 25ರಿಂದ 30 ಲಕ್ಷ ರೂಪಾಯಿ ದುರುಪಯೋಗ ಆಗಿರುವ ಶಂಕೆ ಇದೆ. ಜಿಲ್ಲಾ ಮಟ್ಟದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಲಾಗುವುದು ಎಂದು ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.<br /> <br /> ಈ ಅಕ್ರಮದಲ್ಲಿ ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಯಾವ ರೀತಿಯ ಅಕ್ರಮ ನಡೆದಿದೆ ಎಂಬುದು ಇನ್ನೂ ಖಚಿತವಾಗಿ ಗೊತ್ತಾಗಿಲ್ಲ. ವಿಚಾರಣೆಗೆ ಆದೇಶಿಸಲಾಗಿದೆ. <br /> <br /> ಕೆಎಂಎಫ್ ಮೇಲೆ ನಿಗಾ: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಅವರು ಆಂಧ್ರಪ್ರದೇಶ ಪೊಲೀಸರ ವಶದಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸಂಸ್ಥೆಯ ಕಾರ್ಯನಿರ್ವಹಣೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.<br /> <br /> ಕೆಎಂಎಫ್ ನಷ್ಟದಲ್ಲಿದೆ ಎಂಬ ವದಂತಿಯಲ್ಲಿ ಹುರುಳಿಲ್ಲ. ಜೂನ್ ತಿಂಗಳೊಂದರಲ್ಲೇ ಎಂಟು ಕೋಟಿ ರೂಪಾಯಿ ಲಾಭ ಮಾಡಿದೆ. ಈ ಕುರಿತು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಅದಕ್ಕೆ ಯಾರೂ ಕಿವಿಗೊಡಬಾರದು ಎಂದು ಅವರು ಹೇಳಿದರು.<br /> <strong><br /> `ಸದಾನಂದಗೌಡರ ವಿರುದ್ಧ ಗೂಢಚರ್ಯೆ ಮಾಡಿಲ್ಲ~<br /> ಬೆಂಗಳೂರು:</strong> `ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಆಸ್ತಿ ದಾಖಲೆಗಳನ್ನು ಸಂಗ್ರಹಿಸಲು ನಾನಾಗಲಿ ಅಥವಾ ನನ್ನ ಕಡೆಯವರಾಗಲಿ ಅವರ ಊರಿಗೆ ಹೋಗಿಲ್ಲ~ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು. <br /> <br /> `ಸದಾನಂದ ಗೌಡರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಬಗ್ಗೆ ಗೌರವ ಇದೆ. ಆದರೆ, ಅವರೇ ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ~ ಎಂದು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಗೌಡರ ಊರು ಎಲ್ಲಿದೆ ಎಂಬುದೇ ಗೊತ್ತಿಲ್ಲ. ಅವರ ಆರೋಪಕ್ಕೆ ಪೂರಕವಾಗಿ ಪುರಾವೆಗಳು ಇದ್ದರೆ ಬಹಿರಂಗಪಡಿಸಬಹುದು. ನಾನಾಗಲಿ, ನನ್ನ ಕಡೆಯವರಾಗಲಿ ಅವರ ಆಸ್ತಿ ವಿವರ ಸಂಗ್ರಹಿಸಲು ಯತ್ನಿಸಿರುವುದನ್ನು ಸಾಬೀತುಪಡಿಸಿದರೆ ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>