<p>ಬೆಂಗಳೂರು: ಕೆ.ಎ.ಎಸ್. ಯೇತರ ಅಧಿಕಾರಿಗಳಿಗೆ ಐ.ಎ.ಎಸ್.ಗೆ ಬಡ್ತಿ ನೀಡುವ ಸಂಬಂಧದ ಆಯ್ಕೆ ಪ್ರಕ್ರಿಯೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ ನೀಡಿದ್ದ ತಡೆಯಾಜ್ಞೆಯನ್ನು ಮಂಗವಾರ ತೆರವುಗೊಳಿಸಲಾಗಿದೆ.<br /> <br /> ಆದರೆ ಪ್ರಕ್ರಿಯೆ ಅನ್ವಯ ನಡೆಯಲಿರುವ ಆಯ್ಕೆಯು ನ್ಯಾಯಮಂಡಳಿಯು ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.<br /> <br /> ಖಾಲಿ ಇರುವ ಮೂರು ಸ್ಥಾನಗಳಿಗೆ 1:5ರ ಅನುಪಾತದಲ್ಲಿ 15 ಮಂದಿ ಅಧಿಕಾರಿಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿತ್ತು. ಇದು ಮೆರಿಟ್ ಮತ್ತು ಅರ್ಹತೆ ಮೇಲೆ ಸಿದ್ಧಗೊಂಡಿಲ್ಲ ಎಂದು ಆಕಾಂಕ್ಷಿಗಳಾದ ಸಾರಿಗೆ ಇಲಾಖೆಯ ರಿಚರ್ಡ್ ಡಿಸೋಜಾ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಡಾ.ಕೆ.ಎನ್. ವಿಜಯ ಪ್ರಕಾಶ್ ಅವರು ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದ್ದರು.<br /> <br /> ಗ್ರೂಪ್-ಎ ಕಿರಿಯ ವೃಂದದಲ್ಲಿ ಕನಿಷ್ಠ ಎಂಟು ವರ್ಷ ಸೇವೆ ಸಲ್ಲಿಸಿದ ಹಾಗೂ 54 ವರ್ಷದೊಳಗಿನ ಅಧಿಕಾರಿಗಳು ಐಎಎಸ್ಗೆ ಬಡ್ತಿ ಪಡೆಯಲು ಅರ್ಹರು. ಇಂತಹ ವಿವಿಧ ಇಲಾಖೆಗಳ 15 ಮಂದಿ ಅಧಿಕಾರಿಗಳನ್ನು ಸರ್ಕಾರ ಪಟ್ಟಿ ಮಾಡಿದ್ದು, ಅದು ಸರಿ ಇಲ್ಲ ಎಂದು ಅವರು ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರುವರಿ ತಿಂಗಳಿನಲ್ಲಿ ನ್ಯಾಯಮಂಡಳಿಯು ಆಯ್ಕೆ ಪ್ರಕ್ರಿಯೆಗೆ ತಡೆ ನೀಡಿತ್ತು. ಅದನ್ನು ಈಗ ತೆರವುಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೆ.ಎ.ಎಸ್. ಯೇತರ ಅಧಿಕಾರಿಗಳಿಗೆ ಐ.ಎ.ಎಸ್.ಗೆ ಬಡ್ತಿ ನೀಡುವ ಸಂಬಂಧದ ಆಯ್ಕೆ ಪ್ರಕ್ರಿಯೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ ನೀಡಿದ್ದ ತಡೆಯಾಜ್ಞೆಯನ್ನು ಮಂಗವಾರ ತೆರವುಗೊಳಿಸಲಾಗಿದೆ.<br /> <br /> ಆದರೆ ಪ್ರಕ್ರಿಯೆ ಅನ್ವಯ ನಡೆಯಲಿರುವ ಆಯ್ಕೆಯು ನ್ಯಾಯಮಂಡಳಿಯು ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.<br /> <br /> ಖಾಲಿ ಇರುವ ಮೂರು ಸ್ಥಾನಗಳಿಗೆ 1:5ರ ಅನುಪಾತದಲ್ಲಿ 15 ಮಂದಿ ಅಧಿಕಾರಿಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿತ್ತು. ಇದು ಮೆರಿಟ್ ಮತ್ತು ಅರ್ಹತೆ ಮೇಲೆ ಸಿದ್ಧಗೊಂಡಿಲ್ಲ ಎಂದು ಆಕಾಂಕ್ಷಿಗಳಾದ ಸಾರಿಗೆ ಇಲಾಖೆಯ ರಿಚರ್ಡ್ ಡಿಸೋಜಾ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಡಾ.ಕೆ.ಎನ್. ವಿಜಯ ಪ್ರಕಾಶ್ ಅವರು ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದ್ದರು.<br /> <br /> ಗ್ರೂಪ್-ಎ ಕಿರಿಯ ವೃಂದದಲ್ಲಿ ಕನಿಷ್ಠ ಎಂಟು ವರ್ಷ ಸೇವೆ ಸಲ್ಲಿಸಿದ ಹಾಗೂ 54 ವರ್ಷದೊಳಗಿನ ಅಧಿಕಾರಿಗಳು ಐಎಎಸ್ಗೆ ಬಡ್ತಿ ಪಡೆಯಲು ಅರ್ಹರು. ಇಂತಹ ವಿವಿಧ ಇಲಾಖೆಗಳ 15 ಮಂದಿ ಅಧಿಕಾರಿಗಳನ್ನು ಸರ್ಕಾರ ಪಟ್ಟಿ ಮಾಡಿದ್ದು, ಅದು ಸರಿ ಇಲ್ಲ ಎಂದು ಅವರು ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರುವರಿ ತಿಂಗಳಿನಲ್ಲಿ ನ್ಯಾಯಮಂಡಳಿಯು ಆಯ್ಕೆ ಪ್ರಕ್ರಿಯೆಗೆ ತಡೆ ನೀಡಿತ್ತು. ಅದನ್ನು ಈಗ ತೆರವುಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>