<p><strong>ಬೆಂಗಳೂರು: </strong>`ಕಲಾವಿದರಿಗೆ ಆರೋಗ್ಯ ಸಮಸ್ಯೆ ಬಾಧಿಸಿದಾಗ ಚಿಕಿತ್ಸೆ ಪಡೆಯಲು, ಔಷಧಿ ಪಡೆಯಲು ದುಡ್ಡಿರುವುದಿಲ್ಲ. ಅಂಥ ಕಲಾವಿದರನ್ನು ಗುರುತಿಸಿ ಅವರ ಚಿಕಿತ್ಸೆಗೆ ನೆರವಾಗಲು ಸರ್ಕಾರ ಯೋಜನೆ ಹಾಕಿಕೊಳ್ಳಲಿದೆ. ಈ ಕುರಿತಂತೆ ಮುಖ್ಯಮಂತ್ರಿ ಸದಾನಂದಗೌಡ ಅವರೊಂದಿಗೆ ಚರ್ಚೆ ನಡೆಸಲಿದ್ದೇನೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.<br /> <br /> ಕರ್ನಾಟಕ ನಾಟಕ ಅಕಾಡೆಮಿಯ ಸುವರ್ಣ ಮಹೋತ್ಸವದ ಅಂಗವಾಗಿ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಅಕಾಡೆಮಿ ಹೊರತಂದ ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> `ಈಗಾಗಲೇ ಕಲಾವಿದರಿಗೆ ನೀಡಲಾಗುತ್ತಿದ್ದ ಮಾಸಾಶನ ಪ್ರಮಾಣವನ್ನು 500 ರೂಪಾಯಿಯಿಂದ 1 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಆದರೂ ಹಲವಾರು ಕಲಾವಿದರಿಗೆ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲ. <br /> <br /> ವೃದ್ಧಾಪ್ಯದಿಂದಾಗಿ ಹಲವು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಅವರ ನೆರವಿಗೆ ಧಾವಿಸಲು ಸರ್ಕಾರ ಸಿದ್ಧವಿದೆ~ ಎಂದರು. ನಾಟಕ ಅಕಾಡೆಮಿಯು ಹಮ್ಮಿಕೊಂಡ ಹಲವು ಚಟುವಟಿಕೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, `ರಂಗಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಅಕಾಡೆಮಿ ತನ್ನನ್ನು ತೊಡಗಿಸಿಕೊಂಡಿದೆ. ಅಕಾಡೆಮಿಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ವಾರ್ಷಿಕ ಅನುದಾನವನ್ನು ರೂ 40 ಲಕ್ಷಕ್ಕೆ ಏರಿಸಿದೆ~ ಎಂದರು.<br /> <br /> ಮಕ್ಕಳ ಸಾಹಿತಿ ಡಾ.ಗಜಾನನ ಶರ್ಮ ಮಾತನಾಡಿ, `ಒಟ್ಟು ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಅವರಿಗೆ ಸಂಬಂಧಿಸಿದ ಸಾಹಿತ್ಯ, ನಾಟಕಗಳು ಬಂದದ್ದು ಕಡಿಮೆಯಾಗಿವೆ~ ಎಂದು ವಿಷಾದಿಸಿದರು.ಕಾರ್ಯಕ್ರಮದಲ್ಲಿ ಮುದೇನೂರು ಸಂಗಣ್ಣ, ಮಕ್ಕಳ ರಂಗಭೂಮಿ, ಬೆಳಗಾವಿ ಜಿಲ್ಲಾ ರಂಗ ಮಾಹಿತಿ ಮತ್ತು ಇಂಗ್ಲಿಷ್ ಕೃತಿ The Dramatic History of the World ಎಂಬ ಕೃತಿಗಳನ್ನು ಸಚಿವರು ಬಿಡುಗಡೆ ಮಾಡಿದರು.<br /> <br /> ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ರಾಜಾರಾಂ, ರಿಜಿಸ್ಟ್ರಾರ್ ಟಿ.ಜಿ.ನರಸಿಂಹಮೂರ್ತಿ, ವಕೀಲ ಕೊಲಾಚಲಂ ಸುಧಾಕರ್ ಸೇರಿದಂತೆ ಅಣೆಕರು ಉಪಸ್ಥಿತರಿದ್ದರು.<br /> <br /> ನಂತರ ಖ್ಯಾತ ರಷ್ಯನ್ ನಾಟಕಕಾರ ಆ್ಯಂಟನ್ ಚೆಕಾವ್ ಅವರ ನಾಟಕ ಆಧಾರಿತ `ಪಂಥ~ ಏಕವ್ಯಕ್ತಿ ನಾಟಕವನ್ನು ನಗರದ ಕಲಾಮೈತ್ರಿ ಸಾಂಸ್ಕೃತಿಕ ವೇದಿಕೆಯ ಕಲಾವಿದ ಚೆಸ್ವಾ ಅಭಿನಯಿಸಿದರು.<br /> <br /> <strong>`ಅಕ್ಟೋಬರ್ನಲ್ಲಿ ಉದ್ಘಾಟನೆ~<br /> <br /> </strong>ಕಳೆದ ಐದು ವರ್ಷಗಳಿಂದ ನಗರದ ಮಲ್ಲತ್ತಹಳ್ಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ `ಸುವರ್ಣ ಸಾಂಸ್ಕೃತಿಕ ಸಮುಚ್ಚಯ~ವನ್ನು ಅಕ್ಟೋಬರ್ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು. <br /> <br /> ನಾಟಕ ಅಕಾಡೆಮಿಯ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಮುಚ್ಚಯ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಕೆಲ ಸಣ್ಣ-ಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿದೆ. ಇಲಾಖೆಯಿಂದ ಎಲ್ಲ ಹಣವನ್ನೂ ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ಬಾಕಿ ಉಳಿದಿದ್ದರೂ ಪ್ರಗತಿ ಪರಿಶೀಲನೆ ಮಾಡಿ ಶೀಘ್ರವೇ ಹಣ ಬಿಡುಗಡೆ ಮಾಡಗುವುದು~ ಎಂದರು. <br /> <br /> 2006ರಿಂದ ಈ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣವಾಗದ ಬಗ್ಗೆ `ಪ್ರಜಾವಾಣಿ~ಯು ಇತ್ತೀಚೆಗೆ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಆ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ಇಲಾಖೆಯ ಆಯುಕ್ತ ಮನು ಬಳಿಗಾರ್ ಅವರು, `ಸಮುಚ್ಛಯ ಸೆಪ್ಟೆಂಬರ್ನಲ್ಲಿ ಉದ್ಘಾಟನೆಯಾಗಲಿದೆ~ ಎಂದು ಹೇಳಿದ್ದರು. ಈ ಬಗ್ಗೆ ಸಚಿವರ ಗಮನ ಸೆಳೆದಾಗ, `ಈ ತಿಂಗಳು ಉದ್ಘಾಟನೆ ಆಗುವುದು ಅನುಮಾನ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಕಲಾವಿದರಿಗೆ ಆರೋಗ್ಯ ಸಮಸ್ಯೆ ಬಾಧಿಸಿದಾಗ ಚಿಕಿತ್ಸೆ ಪಡೆಯಲು, ಔಷಧಿ ಪಡೆಯಲು ದುಡ್ಡಿರುವುದಿಲ್ಲ. ಅಂಥ ಕಲಾವಿದರನ್ನು ಗುರುತಿಸಿ ಅವರ ಚಿಕಿತ್ಸೆಗೆ ನೆರವಾಗಲು ಸರ್ಕಾರ ಯೋಜನೆ ಹಾಕಿಕೊಳ್ಳಲಿದೆ. ಈ ಕುರಿತಂತೆ ಮುಖ್ಯಮಂತ್ರಿ ಸದಾನಂದಗೌಡ ಅವರೊಂದಿಗೆ ಚರ್ಚೆ ನಡೆಸಲಿದ್ದೇನೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.<br /> <br /> ಕರ್ನಾಟಕ ನಾಟಕ ಅಕಾಡೆಮಿಯ ಸುವರ್ಣ ಮಹೋತ್ಸವದ ಅಂಗವಾಗಿ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಅಕಾಡೆಮಿ ಹೊರತಂದ ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> `ಈಗಾಗಲೇ ಕಲಾವಿದರಿಗೆ ನೀಡಲಾಗುತ್ತಿದ್ದ ಮಾಸಾಶನ ಪ್ರಮಾಣವನ್ನು 500 ರೂಪಾಯಿಯಿಂದ 1 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಆದರೂ ಹಲವಾರು ಕಲಾವಿದರಿಗೆ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲ. <br /> <br /> ವೃದ್ಧಾಪ್ಯದಿಂದಾಗಿ ಹಲವು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಅವರ ನೆರವಿಗೆ ಧಾವಿಸಲು ಸರ್ಕಾರ ಸಿದ್ಧವಿದೆ~ ಎಂದರು. ನಾಟಕ ಅಕಾಡೆಮಿಯು ಹಮ್ಮಿಕೊಂಡ ಹಲವು ಚಟುವಟಿಕೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, `ರಂಗಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಅಕಾಡೆಮಿ ತನ್ನನ್ನು ತೊಡಗಿಸಿಕೊಂಡಿದೆ. ಅಕಾಡೆಮಿಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ವಾರ್ಷಿಕ ಅನುದಾನವನ್ನು ರೂ 40 ಲಕ್ಷಕ್ಕೆ ಏರಿಸಿದೆ~ ಎಂದರು.<br /> <br /> ಮಕ್ಕಳ ಸಾಹಿತಿ ಡಾ.ಗಜಾನನ ಶರ್ಮ ಮಾತನಾಡಿ, `ಒಟ್ಟು ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಅವರಿಗೆ ಸಂಬಂಧಿಸಿದ ಸಾಹಿತ್ಯ, ನಾಟಕಗಳು ಬಂದದ್ದು ಕಡಿಮೆಯಾಗಿವೆ~ ಎಂದು ವಿಷಾದಿಸಿದರು.ಕಾರ್ಯಕ್ರಮದಲ್ಲಿ ಮುದೇನೂರು ಸಂಗಣ್ಣ, ಮಕ್ಕಳ ರಂಗಭೂಮಿ, ಬೆಳಗಾವಿ ಜಿಲ್ಲಾ ರಂಗ ಮಾಹಿತಿ ಮತ್ತು ಇಂಗ್ಲಿಷ್ ಕೃತಿ The Dramatic History of the World ಎಂಬ ಕೃತಿಗಳನ್ನು ಸಚಿವರು ಬಿಡುಗಡೆ ಮಾಡಿದರು.<br /> <br /> ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ರಾಜಾರಾಂ, ರಿಜಿಸ್ಟ್ರಾರ್ ಟಿ.ಜಿ.ನರಸಿಂಹಮೂರ್ತಿ, ವಕೀಲ ಕೊಲಾಚಲಂ ಸುಧಾಕರ್ ಸೇರಿದಂತೆ ಅಣೆಕರು ಉಪಸ್ಥಿತರಿದ್ದರು.<br /> <br /> ನಂತರ ಖ್ಯಾತ ರಷ್ಯನ್ ನಾಟಕಕಾರ ಆ್ಯಂಟನ್ ಚೆಕಾವ್ ಅವರ ನಾಟಕ ಆಧಾರಿತ `ಪಂಥ~ ಏಕವ್ಯಕ್ತಿ ನಾಟಕವನ್ನು ನಗರದ ಕಲಾಮೈತ್ರಿ ಸಾಂಸ್ಕೃತಿಕ ವೇದಿಕೆಯ ಕಲಾವಿದ ಚೆಸ್ವಾ ಅಭಿನಯಿಸಿದರು.<br /> <br /> <strong>`ಅಕ್ಟೋಬರ್ನಲ್ಲಿ ಉದ್ಘಾಟನೆ~<br /> <br /> </strong>ಕಳೆದ ಐದು ವರ್ಷಗಳಿಂದ ನಗರದ ಮಲ್ಲತ್ತಹಳ್ಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ `ಸುವರ್ಣ ಸಾಂಸ್ಕೃತಿಕ ಸಮುಚ್ಚಯ~ವನ್ನು ಅಕ್ಟೋಬರ್ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು. <br /> <br /> ನಾಟಕ ಅಕಾಡೆಮಿಯ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಮುಚ್ಚಯ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಕೆಲ ಸಣ್ಣ-ಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿದೆ. ಇಲಾಖೆಯಿಂದ ಎಲ್ಲ ಹಣವನ್ನೂ ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ಬಾಕಿ ಉಳಿದಿದ್ದರೂ ಪ್ರಗತಿ ಪರಿಶೀಲನೆ ಮಾಡಿ ಶೀಘ್ರವೇ ಹಣ ಬಿಡುಗಡೆ ಮಾಡಗುವುದು~ ಎಂದರು. <br /> <br /> 2006ರಿಂದ ಈ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣವಾಗದ ಬಗ್ಗೆ `ಪ್ರಜಾವಾಣಿ~ಯು ಇತ್ತೀಚೆಗೆ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಆ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ಇಲಾಖೆಯ ಆಯುಕ್ತ ಮನು ಬಳಿಗಾರ್ ಅವರು, `ಸಮುಚ್ಛಯ ಸೆಪ್ಟೆಂಬರ್ನಲ್ಲಿ ಉದ್ಘಾಟನೆಯಾಗಲಿದೆ~ ಎಂದು ಹೇಳಿದ್ದರು. ಈ ಬಗ್ಗೆ ಸಚಿವರ ಗಮನ ಸೆಳೆದಾಗ, `ಈ ತಿಂಗಳು ಉದ್ಘಾಟನೆ ಆಗುವುದು ಅನುಮಾನ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>