<p>ಕುರುಗೋಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಿರುವ ಬಜೆಟ್ ಬಡ, ರೈತ, ಕೃಷಿ ಕಾರ್ಮಿಕರ ಪರವಾಗಿರದೇ ಶ್ರೀಮಂತರ ಪರವಾಗಿದೆ ಎಂದು ಮಾಜಿ ಶಾಸಕ ಹಾಗೂ ಸಿಪಿಐ (ಎಂ)ನ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಆರೋಪಿಸಿದರು.<br /> <br /> ಪಟ್ಟಣದಲ್ಲಿ ಭಾನುವಾರ ಪ್ರಾರಂಭಗೊಂಡ ಸಿಪಿಐ (ಎಂ)ನ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದ ಅಂಗವಾಗಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಕೃಷಿ ಬಗ್ಗೆ ತಿಳಿಯದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿದ ಕೃಷಿ ಬಜೆಟ್ನಲ್ಲಿ ರೈತ ಪರವಾಗಿ ಒಂದೂ ವಿಷಯ ಅಡಕವಾಗಿಲ್ಲ. ಅವರು ತಿಳಿದಿರುವ ಹಾಗೆ ಬಹುರಾಷ್ಟ್ರೀಯ ಕಂಪೆನಿಗಳಿಗೆ ರೈತರ ಫಲವತ್ತಾದ ಭೂಮಿ ಹಂಚಿಕೆ ಮಾಡುವುದಾಗಿದೆ ಎಂದು ಅವರು ವ್ಯಂಗ್ಯವಾಡಿದರು. <br /> <br /> ಬಡಬ ಕುಟುಂಬಗಳಿಗೆ ಪಡಿತರ ವ್ಯವಸ್ಥೆಯಲ್ಲಿ ವಿತರಿಸುವ 14 ವಸ್ತುಗಳ ಬೆಲೆ ನೆರೆಯ ರಾಜ್ಯಗಳಿಗಿಂತ ಅಧಿಕಾಗಿವಾಗಿದ್ದರೂ ಕಡಿಮೆ ಮಾಡುವ ಬಗ್ಗೆ ಆಯ-ವ್ಯಯದಲ್ಲಿ ಯಾವುದೇ ಪ್ರಸ್ತಾಪವಿಲ್ಲ ಎಂದು ಅಭಿಪ್ರಾಯಪಟ್ಟರು. <br /> <br /> ಸಿಪಿಐ (ಎಂ.)ನ ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜ್, ದುರಾಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ನಡೆಸದ ಹೊರತು ಸೌಲಭ್ಯಗಳಿಂದ ವಂಚಿತರಾಗಿರುವ ಬಡ ಜನರು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಕಾರ್ಯದರ್ಶಿ ಯು.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. <br /> <br /> ಸ್ವಾಗತ ಸಮಿತಿ ಅಧ್ಯಕ್ಷ ಎಸ್.ತಿಪ್ಪನಗೌಡ, ವಿ.ಎಸ್. ಶಿವಶಂಕರ್,ಆರ್.ಎಸ್.ಬಸವರಾಜ, ವಿಶ್ವನಾಥಸ್ವಾಮಿ, ಕೆ.ಗಾದಿಲಿಂಗಪ್ಪ, ಕೆ.ನಾಗರತ್ನಮ್ಮ, ಸತ್ಯಬಾಬು, ತಿಪ್ಪಯ್ಯ, ರಂಗಪ್ಪ ದಾಸರ, ಟಿ.ಖ್ವಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಸಭೆಗೆ ಮುನ್ನ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಿರುವ ಬಜೆಟ್ ಬಡ, ರೈತ, ಕೃಷಿ ಕಾರ್ಮಿಕರ ಪರವಾಗಿರದೇ ಶ್ರೀಮಂತರ ಪರವಾಗಿದೆ ಎಂದು ಮಾಜಿ ಶಾಸಕ ಹಾಗೂ ಸಿಪಿಐ (ಎಂ)ನ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಆರೋಪಿಸಿದರು.<br /> <br /> ಪಟ್ಟಣದಲ್ಲಿ ಭಾನುವಾರ ಪ್ರಾರಂಭಗೊಂಡ ಸಿಪಿಐ (ಎಂ)ನ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದ ಅಂಗವಾಗಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಕೃಷಿ ಬಗ್ಗೆ ತಿಳಿಯದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿದ ಕೃಷಿ ಬಜೆಟ್ನಲ್ಲಿ ರೈತ ಪರವಾಗಿ ಒಂದೂ ವಿಷಯ ಅಡಕವಾಗಿಲ್ಲ. ಅವರು ತಿಳಿದಿರುವ ಹಾಗೆ ಬಹುರಾಷ್ಟ್ರೀಯ ಕಂಪೆನಿಗಳಿಗೆ ರೈತರ ಫಲವತ್ತಾದ ಭೂಮಿ ಹಂಚಿಕೆ ಮಾಡುವುದಾಗಿದೆ ಎಂದು ಅವರು ವ್ಯಂಗ್ಯವಾಡಿದರು. <br /> <br /> ಬಡಬ ಕುಟುಂಬಗಳಿಗೆ ಪಡಿತರ ವ್ಯವಸ್ಥೆಯಲ್ಲಿ ವಿತರಿಸುವ 14 ವಸ್ತುಗಳ ಬೆಲೆ ನೆರೆಯ ರಾಜ್ಯಗಳಿಗಿಂತ ಅಧಿಕಾಗಿವಾಗಿದ್ದರೂ ಕಡಿಮೆ ಮಾಡುವ ಬಗ್ಗೆ ಆಯ-ವ್ಯಯದಲ್ಲಿ ಯಾವುದೇ ಪ್ರಸ್ತಾಪವಿಲ್ಲ ಎಂದು ಅಭಿಪ್ರಾಯಪಟ್ಟರು. <br /> <br /> ಸಿಪಿಐ (ಎಂ.)ನ ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜ್, ದುರಾಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ನಡೆಸದ ಹೊರತು ಸೌಲಭ್ಯಗಳಿಂದ ವಂಚಿತರಾಗಿರುವ ಬಡ ಜನರು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಕಾರ್ಯದರ್ಶಿ ಯು.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. <br /> <br /> ಸ್ವಾಗತ ಸಮಿತಿ ಅಧ್ಯಕ್ಷ ಎಸ್.ತಿಪ್ಪನಗೌಡ, ವಿ.ಎಸ್. ಶಿವಶಂಕರ್,ಆರ್.ಎಸ್.ಬಸವರಾಜ, ವಿಶ್ವನಾಥಸ್ವಾಮಿ, ಕೆ.ಗಾದಿಲಿಂಗಪ್ಪ, ಕೆ.ನಾಗರತ್ನಮ್ಮ, ಸತ್ಯಬಾಬು, ತಿಪ್ಪಯ್ಯ, ರಂಗಪ್ಪ ದಾಸರ, ಟಿ.ಖ್ವಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಸಭೆಗೆ ಮುನ್ನ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>