<p><strong>ನವದೆಹಲಿ (ಪಿಟಿಐ):</strong> ವಾಹನಗಳ ಗಾಜುಗಳ ಮೇಲಿನ ಸನ್ ಫಿಲ್ಮ್ ತೆಗೆಸಲು ವಿಫಲರಾದಲ್ಲಿ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.<br /> <br /> ವಾಹನಗಳ ಗಾಜುಗಳ ಮೇಲೆ ಅಂಟಿಸಿರುವ ಸನ್ ಫಿಲ್ಮ್ ತೆಗೆಯಲು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಮೂರ್ತಿಗಳಾದ ಬಿ.ಎಸ್.ಚವ್ಹಾಣ್ ಹಾಗೂ ಸ್ವತಂತ್ರ ಕುಮಾರ್ ಅವರನ್ನು ಒಳಗೊಂಡ ಪೀಠವು ಸೂಚಿಸಿದೆ.<br /> <br /> `ಈ ಸಂಬಂಧ ರೂಪಿಸಿರುವ ಕಾನೂನನ್ನು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆಯುಕ್ತರು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕಾಗುತ್ತದೆ. ಈ ಹಂತದಲ್ಲಿ ನಾವು ಕ್ರಮ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಇದರಲ್ಲಿ ವಿಫಲರಾದಲ್ಲಿ ನ್ಯಾಯಾಂಗ ನಿಂದನೆ ಕಾಯ್ದೆ ಅಡಿಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ~ ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದ್ದಾರೆ.<br /> <br /> ತಾನು ನೀಡಿದ್ದ ಸೂಚನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತಂದಿಲ್ಲ ಎಂದು ಕಳೆದ ತಿಂಗಳು 22 ರಂದು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ವಾಹನಗಳ ಗಾಜುಗಳ ಮೇಲಿನ ಸನ್ ಫಿಲ್ಮ್ ತೆಗೆಸಲು ವಿಫಲರಾದಲ್ಲಿ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.<br /> <br /> ವಾಹನಗಳ ಗಾಜುಗಳ ಮೇಲೆ ಅಂಟಿಸಿರುವ ಸನ್ ಫಿಲ್ಮ್ ತೆಗೆಯಲು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಮೂರ್ತಿಗಳಾದ ಬಿ.ಎಸ್.ಚವ್ಹಾಣ್ ಹಾಗೂ ಸ್ವತಂತ್ರ ಕುಮಾರ್ ಅವರನ್ನು ಒಳಗೊಂಡ ಪೀಠವು ಸೂಚಿಸಿದೆ.<br /> <br /> `ಈ ಸಂಬಂಧ ರೂಪಿಸಿರುವ ಕಾನೂನನ್ನು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆಯುಕ್ತರು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕಾಗುತ್ತದೆ. ಈ ಹಂತದಲ್ಲಿ ನಾವು ಕ್ರಮ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಇದರಲ್ಲಿ ವಿಫಲರಾದಲ್ಲಿ ನ್ಯಾಯಾಂಗ ನಿಂದನೆ ಕಾಯ್ದೆ ಅಡಿಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ~ ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದ್ದಾರೆ.<br /> <br /> ತಾನು ನೀಡಿದ್ದ ಸೂಚನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತಂದಿಲ್ಲ ಎಂದು ಕಳೆದ ತಿಂಗಳು 22 ರಂದು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>