<p>ಮೈಸೂರು: ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ರೈತರಿಗೆ ನೀಡಬೇಕಾಗಿರುವ ಯಾವ ಬಾಕಿಯನ್ನೂ ಉಳಿಸಿಕೊಂಡಿಲ್ಲ. ಸರ್ಕಾರದ ಆದೇಶದ ಪ್ರಕಾರ ಆಯಾ ವರ್ಷಕ್ಕೆ ಎಲ್ಲವನ್ನೂ ಪಾವತಿಸಲಾಗಿದೆ ಎಂದು ಕಾರ್ಖಾನೆಯ ಆಡಳಿತ ಮಂಡಳಿ ಉಪಾಧ್ಯಕ್ಷ ವಿ. ವೆಂಕಟರೆಡ್ಡಿ ಸ್ಪಷ್ಟಪಡಿಸಿದರು. <br /> <br /> ಮಂಗಳವಾರ ದಿ ಫೋರಂ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ರೈತರು ಮತ್ತು ಕಾರ್ಖಾನೆಯ ಆಡಳಿತ ಮಂಡಳಿಯ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸಿ, ಕಾರ್ಖಾನೆಯನ್ನು ಮುಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಇಲ್ಲಸಲ್ಲದ ಅಪಪ್ರಚಾರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಕಾರ್ಖಾನೆಗೆ ಕಬ್ಬು ನೀಡುವ ನಿಜವಾದ ರೈತರು ಈ ಬಗ್ಗೆ ಮಾತನಾಡುತ್ತಿಲ್ಲ. ಕೆಲವೇ ಕೆಲವು ಶಕ್ತಿಗಳು ಸಕ್ಕರೆ ಕಾರ್ಖಾನೆಯನ್ನು ಹಾಳು ಮಾಡುವ ಯತ್ನ ನಡೆಸಿದ್ದಾರೆ~ ಎಂದು ಹೇಳಿದರು. <br /> <br /> `ಕಬ್ಬು ಸರಬರಾಜು ಮಾಡುವ ರೈತರಿಗೆ ನ್ಯಾಯಯುತ ಪಾಲು ನೀಡಲು ಸಿದ್ಧ. ಆ ನೀತಿಯನ್ನು ಸರ್ಕಾರವು ನಿರ್ಧರಿಸಬೇಕು. ಸಕ್ಕರೆ ಮತ್ತು ಇನ್ನಿತರ ಉತ್ಪನ್ನಗಳ ಆದಾಯಗಳ ಕುರಿತು ಪಾರದರ್ಶಕವಾದ ಲೆಕ್ಕಪತ್ರಗಳಿವೆ. ಯಾರು ಯಾವಾಗ ಬೇಕಾದರೂ ಬಂದು ಪರಿಶೀಲಿಸಲು ಮುಕ್ತವಾಗಿವೆ~ ಎಂದರು. <br /> <br /> `ಕಬ್ಬು ರೈತರಿಗೆ ಆದಾಯದ ಪಾಲು ನೀಡಲು ಚಿಂತನೆ ನಡೆಸಲಾಗುತ್ತಿದೆ. ಅದರ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಬೇಕು~ ಎಂದು ಹೇಳಿದರು. <br /> <br /> `ಉತ್ತರ ಕರ್ನಾಟಕದ ಕಬ್ಬು ರೈತರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡುತ್ತಿದ್ದಾರೆ. ಉತ್ತರ ಮತ್ತು ದಕ್ಷಿಣಕರ್ನಾಟಕದಲ್ಲಿ ಮೊದಲಿನಿಂದಲೂ ದರ ನಿಗದಿ ಬೇರೆ ಬೇರೆಯಾಗಿಯೇ ಇದೆ. ಅಲ್ಲಿ 2300 ರೂಪಾಯಿ ಕೊಡುತ್ತಿದ್ದಾರೆ. ನಾವು ಸರ್ಕಾರದ ಸೂಚನೆಯ ಮೇರೆಗೆ 1900 -2000 ರೂಪಾಯಿ ನೀಡುತ್ತಿದ್ದೇವೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. <br /> <br /> ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಆದಿಶೇಷ, ಸಹಾಯಕ ಉಪಾಧ್ಯಕ್ಷ ಲಿಂಗೇಶ್ವರನ್, ಮುಖ್ಯ ಪ್ರಬಂಧಕ ವಿ. ಕೃಷ್ಣನ್, ಸರವಣನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ರೈತರಿಗೆ ನೀಡಬೇಕಾಗಿರುವ ಯಾವ ಬಾಕಿಯನ್ನೂ ಉಳಿಸಿಕೊಂಡಿಲ್ಲ. ಸರ್ಕಾರದ ಆದೇಶದ ಪ್ರಕಾರ ಆಯಾ ವರ್ಷಕ್ಕೆ ಎಲ್ಲವನ್ನೂ ಪಾವತಿಸಲಾಗಿದೆ ಎಂದು ಕಾರ್ಖಾನೆಯ ಆಡಳಿತ ಮಂಡಳಿ ಉಪಾಧ್ಯಕ್ಷ ವಿ. ವೆಂಕಟರೆಡ್ಡಿ ಸ್ಪಷ್ಟಪಡಿಸಿದರು. <br /> <br /> ಮಂಗಳವಾರ ದಿ ಫೋರಂ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ರೈತರು ಮತ್ತು ಕಾರ್ಖಾನೆಯ ಆಡಳಿತ ಮಂಡಳಿಯ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸಿ, ಕಾರ್ಖಾನೆಯನ್ನು ಮುಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಇಲ್ಲಸಲ್ಲದ ಅಪಪ್ರಚಾರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಕಾರ್ಖಾನೆಗೆ ಕಬ್ಬು ನೀಡುವ ನಿಜವಾದ ರೈತರು ಈ ಬಗ್ಗೆ ಮಾತನಾಡುತ್ತಿಲ್ಲ. ಕೆಲವೇ ಕೆಲವು ಶಕ್ತಿಗಳು ಸಕ್ಕರೆ ಕಾರ್ಖಾನೆಯನ್ನು ಹಾಳು ಮಾಡುವ ಯತ್ನ ನಡೆಸಿದ್ದಾರೆ~ ಎಂದು ಹೇಳಿದರು. <br /> <br /> `ಕಬ್ಬು ಸರಬರಾಜು ಮಾಡುವ ರೈತರಿಗೆ ನ್ಯಾಯಯುತ ಪಾಲು ನೀಡಲು ಸಿದ್ಧ. ಆ ನೀತಿಯನ್ನು ಸರ್ಕಾರವು ನಿರ್ಧರಿಸಬೇಕು. ಸಕ್ಕರೆ ಮತ್ತು ಇನ್ನಿತರ ಉತ್ಪನ್ನಗಳ ಆದಾಯಗಳ ಕುರಿತು ಪಾರದರ್ಶಕವಾದ ಲೆಕ್ಕಪತ್ರಗಳಿವೆ. ಯಾರು ಯಾವಾಗ ಬೇಕಾದರೂ ಬಂದು ಪರಿಶೀಲಿಸಲು ಮುಕ್ತವಾಗಿವೆ~ ಎಂದರು. <br /> <br /> `ಕಬ್ಬು ರೈತರಿಗೆ ಆದಾಯದ ಪಾಲು ನೀಡಲು ಚಿಂತನೆ ನಡೆಸಲಾಗುತ್ತಿದೆ. ಅದರ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಬೇಕು~ ಎಂದು ಹೇಳಿದರು. <br /> <br /> `ಉತ್ತರ ಕರ್ನಾಟಕದ ಕಬ್ಬು ರೈತರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡುತ್ತಿದ್ದಾರೆ. ಉತ್ತರ ಮತ್ತು ದಕ್ಷಿಣಕರ್ನಾಟಕದಲ್ಲಿ ಮೊದಲಿನಿಂದಲೂ ದರ ನಿಗದಿ ಬೇರೆ ಬೇರೆಯಾಗಿಯೇ ಇದೆ. ಅಲ್ಲಿ 2300 ರೂಪಾಯಿ ಕೊಡುತ್ತಿದ್ದಾರೆ. ನಾವು ಸರ್ಕಾರದ ಸೂಚನೆಯ ಮೇರೆಗೆ 1900 -2000 ರೂಪಾಯಿ ನೀಡುತ್ತಿದ್ದೇವೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. <br /> <br /> ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಆದಿಶೇಷ, ಸಹಾಯಕ ಉಪಾಧ್ಯಕ್ಷ ಲಿಂಗೇಶ್ವರನ್, ಮುಖ್ಯ ಪ್ರಬಂಧಕ ವಿ. ಕೃಷ್ಣನ್, ಸರವಣನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>