<p>ಶಿಡ್ಲಘಟ್ಟ: ಬಿರು ಬೇಸಿಗೆಯಲ್ಲಿ ಆಹಾರ ಮತ್ತು ನೀರು ಹುಡುಕಿಕೊಂಡು ಪಟ್ಟಣದ ಸುತ್ತಮುತ್ತ ಕೋತಿಗಳು ಕಾಣತೊಡಗಿದ್ದು, ಅದೇ ರೀತಿ ಆಮೆಯೊಂದು ಬುಧವಾರ ಕಾಣಸಿಕ್ಕಿದೆ.<br /> <br /> ಆಹಾರ ಮತ್ತು ನೀರು ಹುಡುಕುವ ಭರದಲ್ಲಿ ಆಮೆಯು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಅದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.<br /> <br /> ತಾಲ್ಲೂಕಿನ ಕೊತ್ತನೂರು ಗ್ರಾಮದ ಹಾಲಿನ ಡೇರಿ ಬಳಿಯಿರುವ ನೀರಿನ ತೊಟ್ಟಿಯನ್ನು ಶುಚಿಗೊಳಿಸುವಾಗ ಆಮೆ ಸಿಕ್ಕಿದೆ.<br /> <br /> ~ಕೆರೆಕುಂಟೆಗಳಲ್ಲಿ ಇರಬೇಕಾದ ಆಮೆಯು ತೊಟ್ಟಿಯಲ್ಲಿ ಕಂಡು ಬಂದದ್ದು ಅಚ್ಚರಿ ಉಂಟು ಮಾಡಿತು. ಕೆರೆಕುಂಟೆಗಳು ಬತ್ತಿ ಹೋಗಿದ್ದು, ಆಹಾರ ಮತ್ತು ನೀರು ಹುಡುಕಿಕೊಂಡು ಆಮೆ ಇಲ್ಲಿಗೆ ಬಂದಿರುವ ಸಾಧ್ಯತೆ ಇದೆ~ ಎಂದು ಕೊತ್ತನೂರಿನ ಸ್ನೇಕ್ ನಾಗರಾಜ್~ಪ್ರಜಾವಾಣಿ~ಗೆ ತಿಳಿಸಿದರು.<br /> <br /> ~ಕೆರೆಕುಂಟೆಗಳು ಬತ್ತುತ್ತಿರುವುದರಿಂದ ಜಲಚರಗಳು ಬದುಕುವುದು ಕಷ್ಟಕರವಾಗಿ ಪರಿಣಮಿಸಿದೆ. ಅವುಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿದೆ. ಕೆರೆಕುಂಟೆಗಳು ಶೀಘ್ರವೇ ಭರ್ತಿಯಾಗದಿದ್ದರೆ ಪರಿಸರ ಅಸಮತೋಲನ ಉಂಟಾಗುತ್ತದೆ~ ಎಂದು ವಲಯ ಅರಣ್ಯಾಧಿಕಾರಿ ಶ್ರೀನಿವಾಸಮೂರ್ತಿ ಅವರು ಆತಂಕ ವ್ಯಕ್ತಪಡಿಸಿದರು.<br /> <br /> ~ಕೆರೆಕುಂಟೆಗಳನ್ನು ರಕ್ಷಿಸುವುದಲ್ಲದೆ ಗಿಡಮರಗಳನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಕಾಡಿನಲ್ಲಿರಬೇಕಾದ ಪ್ರಾಣಿ ಪಕ್ಷಿಗಳು ಆಹಾರ ಮತ್ತು ನೀರು ಹುಡುಕಿಕೊಂಡು ಪಟ್ಟಣ ಅಥವಾ ಗ್ರಾಮಕ್ಕೆ ಬಂದರೆ ತಕ್ಷಣವೇ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರಾಣಿ ಪಕ್ಷಿಗಳನ್ನು ಉಳಿಸುವಲ್ಲಿ ಸಹಕರಿಸಬೇಕು~ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಬಿರು ಬೇಸಿಗೆಯಲ್ಲಿ ಆಹಾರ ಮತ್ತು ನೀರು ಹುಡುಕಿಕೊಂಡು ಪಟ್ಟಣದ ಸುತ್ತಮುತ್ತ ಕೋತಿಗಳು ಕಾಣತೊಡಗಿದ್ದು, ಅದೇ ರೀತಿ ಆಮೆಯೊಂದು ಬುಧವಾರ ಕಾಣಸಿಕ್ಕಿದೆ.<br /> <br /> ಆಹಾರ ಮತ್ತು ನೀರು ಹುಡುಕುವ ಭರದಲ್ಲಿ ಆಮೆಯು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಅದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.<br /> <br /> ತಾಲ್ಲೂಕಿನ ಕೊತ್ತನೂರು ಗ್ರಾಮದ ಹಾಲಿನ ಡೇರಿ ಬಳಿಯಿರುವ ನೀರಿನ ತೊಟ್ಟಿಯನ್ನು ಶುಚಿಗೊಳಿಸುವಾಗ ಆಮೆ ಸಿಕ್ಕಿದೆ.<br /> <br /> ~ಕೆರೆಕುಂಟೆಗಳಲ್ಲಿ ಇರಬೇಕಾದ ಆಮೆಯು ತೊಟ್ಟಿಯಲ್ಲಿ ಕಂಡು ಬಂದದ್ದು ಅಚ್ಚರಿ ಉಂಟು ಮಾಡಿತು. ಕೆರೆಕುಂಟೆಗಳು ಬತ್ತಿ ಹೋಗಿದ್ದು, ಆಹಾರ ಮತ್ತು ನೀರು ಹುಡುಕಿಕೊಂಡು ಆಮೆ ಇಲ್ಲಿಗೆ ಬಂದಿರುವ ಸಾಧ್ಯತೆ ಇದೆ~ ಎಂದು ಕೊತ್ತನೂರಿನ ಸ್ನೇಕ್ ನಾಗರಾಜ್~ಪ್ರಜಾವಾಣಿ~ಗೆ ತಿಳಿಸಿದರು.<br /> <br /> ~ಕೆರೆಕುಂಟೆಗಳು ಬತ್ತುತ್ತಿರುವುದರಿಂದ ಜಲಚರಗಳು ಬದುಕುವುದು ಕಷ್ಟಕರವಾಗಿ ಪರಿಣಮಿಸಿದೆ. ಅವುಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿದೆ. ಕೆರೆಕುಂಟೆಗಳು ಶೀಘ್ರವೇ ಭರ್ತಿಯಾಗದಿದ್ದರೆ ಪರಿಸರ ಅಸಮತೋಲನ ಉಂಟಾಗುತ್ತದೆ~ ಎಂದು ವಲಯ ಅರಣ್ಯಾಧಿಕಾರಿ ಶ್ರೀನಿವಾಸಮೂರ್ತಿ ಅವರು ಆತಂಕ ವ್ಯಕ್ತಪಡಿಸಿದರು.<br /> <br /> ~ಕೆರೆಕುಂಟೆಗಳನ್ನು ರಕ್ಷಿಸುವುದಲ್ಲದೆ ಗಿಡಮರಗಳನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಕಾಡಿನಲ್ಲಿರಬೇಕಾದ ಪ್ರಾಣಿ ಪಕ್ಷಿಗಳು ಆಹಾರ ಮತ್ತು ನೀರು ಹುಡುಕಿಕೊಂಡು ಪಟ್ಟಣ ಅಥವಾ ಗ್ರಾಮಕ್ಕೆ ಬಂದರೆ ತಕ್ಷಣವೇ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರಾಣಿ ಪಕ್ಷಿಗಳನ್ನು ಉಳಿಸುವಲ್ಲಿ ಸಹಕರಿಸಬೇಕು~ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>