<p><strong>ಕೃಷ್ಣರಾಜಪೇಟೆ:</strong> ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಹತ್ತು ಸಾವಿರಕ್ಕೂ ಹೆಚ್ಚು ಕೃಷಿ ಪಂಪ್ಸೆಟ್ಗಳು ನೀರಿಲ್ಲದೆ ಬತ್ತಿ ಹೋಗಿದ್ದು, ಇವುಗಳ ಆಶ್ರಯದಲ್ಲಿರುವ ಒಣಗಿ ಹೋಗುತ್ತಿರುವ ಬೆಳೆಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ಮುಖಂಡ ಕೆ.ಸಿ.ನಾರಾಯಣಗೌಡ ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನ ಅಕ್ಕಿಹೆಬ್ಬಾಳು ಮತ್ತು ಕಸಬಾ ಹೋಬಳಿಯ ಬರದಿಂದ ತತ್ತರಿಸುತ್ತಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಬರದ ತೀವ್ರತೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ 25 ಸಾವಿರ ಕೃಷಿ ಪಂಪ್ಸೆಟ್ಗಳಿದ್ದು, ಇವುಗಳ ಪೈಕಿ 10 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳಲ್ಲಿ ಅಂತರ್ಜಲ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆಯಲಾಗಿದ್ದ ವಿವಿಧ ಬೆಳೆಗಳು ಒಣಗಿ ಹೋಗುತ್ತಿವೆ. ಜತೆಗೆ ಕೆರೆಗಳೂ ಬತ್ತಿ ಹೋಗಿದ್ದು, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದೆ. ಈ ಭಾಗದ ರೈತರಿಗೆ ಅಪಾರ ನಷ್ಟವುಂಟಾಗಿದೆ. <br /> <br /> ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು, ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಜಾನುವಾರುಗಳಿಗೆ ಮೇವು ಪೂರೈಸಬೇಕು. ಅಂತರ್ಜಲ ವೃದ್ಧಿಗೆ ತಾಲ್ಲೂಕಿನ ಕೆರೆ ಕಟ್ಟೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.<br /> <br /> ಜೆಡಿಎಸ್ ಮುಖಂಡರಾದ ಅಕ್ಕಿಹೆಬ್ಬಾಳು ಶ್ರೀನಿವಾಸ್, ನಾಟನಹಳ್ಳಿ ಗಂಗಾಧರ್, ಅಣ್ಣಯ್ಯ, ಚೌಡಸಮುದ್ರ ಚಂದ್ರಶೇಖರ್, ದಿನೇಶ್, ಲಕ್ಷ್ಮಣ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ:</strong> ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಹತ್ತು ಸಾವಿರಕ್ಕೂ ಹೆಚ್ಚು ಕೃಷಿ ಪಂಪ್ಸೆಟ್ಗಳು ನೀರಿಲ್ಲದೆ ಬತ್ತಿ ಹೋಗಿದ್ದು, ಇವುಗಳ ಆಶ್ರಯದಲ್ಲಿರುವ ಒಣಗಿ ಹೋಗುತ್ತಿರುವ ಬೆಳೆಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ಮುಖಂಡ ಕೆ.ಸಿ.ನಾರಾಯಣಗೌಡ ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನ ಅಕ್ಕಿಹೆಬ್ಬಾಳು ಮತ್ತು ಕಸಬಾ ಹೋಬಳಿಯ ಬರದಿಂದ ತತ್ತರಿಸುತ್ತಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಬರದ ತೀವ್ರತೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ 25 ಸಾವಿರ ಕೃಷಿ ಪಂಪ್ಸೆಟ್ಗಳಿದ್ದು, ಇವುಗಳ ಪೈಕಿ 10 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳಲ್ಲಿ ಅಂತರ್ಜಲ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆಯಲಾಗಿದ್ದ ವಿವಿಧ ಬೆಳೆಗಳು ಒಣಗಿ ಹೋಗುತ್ತಿವೆ. ಜತೆಗೆ ಕೆರೆಗಳೂ ಬತ್ತಿ ಹೋಗಿದ್ದು, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದೆ. ಈ ಭಾಗದ ರೈತರಿಗೆ ಅಪಾರ ನಷ್ಟವುಂಟಾಗಿದೆ. <br /> <br /> ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು, ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಜಾನುವಾರುಗಳಿಗೆ ಮೇವು ಪೂರೈಸಬೇಕು. ಅಂತರ್ಜಲ ವೃದ್ಧಿಗೆ ತಾಲ್ಲೂಕಿನ ಕೆರೆ ಕಟ್ಟೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.<br /> <br /> ಜೆಡಿಎಸ್ ಮುಖಂಡರಾದ ಅಕ್ಕಿಹೆಬ್ಬಾಳು ಶ್ರೀನಿವಾಸ್, ನಾಟನಹಳ್ಳಿ ಗಂಗಾಧರ್, ಅಣ್ಣಯ್ಯ, ಚೌಡಸಮುದ್ರ ಚಂದ್ರಶೇಖರ್, ದಿನೇಶ್, ಲಕ್ಷ್ಮಣ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>