<p><strong>ಕಾರವಾರ: </strong>ಐತಿಹಾಸಿಕ ನೆಲೆಗಟ್ಟು ಬಿಟ್ಟು ಆಧು ನಿಕ ಯುಗದಲ್ಲಿ ಬದುಕುತ್ತಿದ್ದರೂ ಮನುಷ್ಯನ ಜೀವನಮಟ್ಟದಲ್ಲಿ ನಿರೀಕ್ಷಿತ ಬದಲಾವಣೆಗಳಾಗಿಲ್ಲ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ ವಿಷಾದಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಾರ್ವಜನಿಕ ಅಹವಾಲು ಮತ್ತು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳಿಂದ ವಂಚಿತವಾಗಿರುವ ಸಮುದಾಯ ರಾಷ್ಟ್ರದಾದ್ಯಂತ ಇನ್ನೂ ಇದೆ ಎಂದರು.<br /> <br /> ಲಕ್ಷಾಂತರ ಜನರು ಇವತ್ತೂ ಸೂರಿಲ್ಲದೆ ಬದುಕುತ್ತಿದ್ದಾರೆ. ಪೌಷ್ಠಿಕಾಂಶದ ಕೊರತೆಯಿಂದ ಕೋಟ್ಯಂತರ ಜನರು ಬಳಲುತ್ತಿದ್ದಾರೆ. ಶುದ್ಧ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಹೀಗೆ ಸಮಾಜದ ಅನೇಕ ಸ್ತರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ತಿಳಿಸಿದರು.<br /> <br /> ಕೆಳಮಟ್ಟದ ಅಧಿಕಾರಿಗಳು ಯಾವ್ಯಾವುದೋ ಆಮಿಷಕ್ಕೊಳಗಾಗುವುದರಿಂದ ಅರ್ಹರಿಗೆ ಸೌಲ ಭ್ಯಗಳು ಅನರ್ಹರಿಗೆ ಸಿಗುತ್ತಿವೆ. ಹಿರಿಯ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕೆಳಮಟ್ಟದ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು ಸೌಲಭ್ಯಗಳು ಸರಿಯಾಗಿ ತಲುಪುವಂತೆ ಮಾಡಬೇಕು ಎಂದರು.<br /> <br /> ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಮೂರು ಲಕ್ಷ ಕಾರ್ಡ್ಗಳನ್ನು ವಿತರಿಸಲಾಗಿದೆ. ಅನರ್ಹರು ಈ ಕಾರ್ಡ್ಗಳನ್ನು ಪಡೆದಿರುವುದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂದು ನಾಯಕ ಅವರ ನುಡಿದರು.<br /> <br /> ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳು ಒದಗಿಸಬೇಕು ಎಂದು ಅವರು ನುಡಿದರು.<br /> <br /> ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಬಂದರು ಇಲಾಖೆ ನಿರ್ದೇಶಕ ಕ್ಯಾಪ್ಟನ್ ಮೋಹನ್ ರಾಜಘಾಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಗುಡಿಮನಿ, ಡಿವೈಎಸ್ಪಿ ನಾಗರಾಜ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಐತಿಹಾಸಿಕ ನೆಲೆಗಟ್ಟು ಬಿಟ್ಟು ಆಧು ನಿಕ ಯುಗದಲ್ಲಿ ಬದುಕುತ್ತಿದ್ದರೂ ಮನುಷ್ಯನ ಜೀವನಮಟ್ಟದಲ್ಲಿ ನಿರೀಕ್ಷಿತ ಬದಲಾವಣೆಗಳಾಗಿಲ್ಲ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ ವಿಷಾದಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಾರ್ವಜನಿಕ ಅಹವಾಲು ಮತ್ತು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳಿಂದ ವಂಚಿತವಾಗಿರುವ ಸಮುದಾಯ ರಾಷ್ಟ್ರದಾದ್ಯಂತ ಇನ್ನೂ ಇದೆ ಎಂದರು.<br /> <br /> ಲಕ್ಷಾಂತರ ಜನರು ಇವತ್ತೂ ಸೂರಿಲ್ಲದೆ ಬದುಕುತ್ತಿದ್ದಾರೆ. ಪೌಷ್ಠಿಕಾಂಶದ ಕೊರತೆಯಿಂದ ಕೋಟ್ಯಂತರ ಜನರು ಬಳಲುತ್ತಿದ್ದಾರೆ. ಶುದ್ಧ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಹೀಗೆ ಸಮಾಜದ ಅನೇಕ ಸ್ತರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ತಿಳಿಸಿದರು.<br /> <br /> ಕೆಳಮಟ್ಟದ ಅಧಿಕಾರಿಗಳು ಯಾವ್ಯಾವುದೋ ಆಮಿಷಕ್ಕೊಳಗಾಗುವುದರಿಂದ ಅರ್ಹರಿಗೆ ಸೌಲ ಭ್ಯಗಳು ಅನರ್ಹರಿಗೆ ಸಿಗುತ್ತಿವೆ. ಹಿರಿಯ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕೆಳಮಟ್ಟದ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು ಸೌಲಭ್ಯಗಳು ಸರಿಯಾಗಿ ತಲುಪುವಂತೆ ಮಾಡಬೇಕು ಎಂದರು.<br /> <br /> ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಮೂರು ಲಕ್ಷ ಕಾರ್ಡ್ಗಳನ್ನು ವಿತರಿಸಲಾಗಿದೆ. ಅನರ್ಹರು ಈ ಕಾರ್ಡ್ಗಳನ್ನು ಪಡೆದಿರುವುದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂದು ನಾಯಕ ಅವರ ನುಡಿದರು.<br /> <br /> ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳು ಒದಗಿಸಬೇಕು ಎಂದು ಅವರು ನುಡಿದರು.<br /> <br /> ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಬಂದರು ಇಲಾಖೆ ನಿರ್ದೇಶಕ ಕ್ಯಾಪ್ಟನ್ ಮೋಹನ್ ರಾಜಘಾಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಗುಡಿಮನಿ, ಡಿವೈಎಸ್ಪಿ ನಾಗರಾಜ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>