<p>ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗುತ್ತಿವೆ ಎಂದು ಮೈಸೂರು ವಿಶ್ವವಿದ್ಯಾ ನಿಲಯದ ಕುಲಪತಿ ಪ್ರೊ.ವಿ.ಜಿ. ತಳವಾರ ಅಭಿಪ್ರಾಯಪಟ್ಟರು. <br /> <br /> ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಿಜ್ಞಾನ ಮತ್ತು ಸಮಾಜ ಪ್ರತಿಷ್ಠಾನವು ಗುರುವಾರ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಪ್ರಾಯೋಜಿತ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಣ ಸುಧಾರಣೆಗೆ ಮಾಹಿತಿ ಸೌಲಭ್ಯದ ಅಂಗವಾಗಿ `8ನೇ ತರಗತಿಯ ದೃಶ್ಯ ಮತ್ತು ವಿಷಯ ಘಟಕ ಮಾಲಿಕೆಗಳ ಪರಿಣಾಮಕಾರಿ ಬಳಕೆ~ ಕುರಿತು ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. <br /> <br /> `ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಸ್ಫೋಟಕ ಬದಲಾವಣೆಯಿಂದ ಪಠ್ಯಕ್ರಮ, ಬೋಧನಾ ಕ್ರಮ ಹಾಗೂ ವಿದ್ಯಾರ್ಥಿ ಕಲಿಕೆಯಲ್ಲೂ ಬದಲಾವಣೆಗಳಾಗಿವೆ. ಈ ರೀತಿಯ ಬದಲಾವಣೆ ಎಲ್ಲ ಕಡೆ ಆಗುತ್ತಿದ್ದು, ನಗರದ ವಿದ್ಯಾರ್ಥಿಗಳಿಗೆ ಈ ಆಧುನಿಕ ಸೌಲಭ್ಯಗಳು ದೊರೆಯುತ್ತಿವೆ. ಆದರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ. ಇದರಿಂದ ಶಿಕ್ಷಕರು ಸಹ ಪರಿಣಾಮಕಾರಿಯಾಗಿ ಪಾಠ ಮಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರೊ.ಕೆ.ಸಿದ್ದಪ್ಪ ಹೊರತಂದಿರುವ ಈ ಮಾಲಿಕೆಯು ತುಂಬಾ ಉಪಯುಕ್ತವಾಗಲಿದೆ~ ಎಂದರು. <br /> <br /> ಮುಖ್ಯ ಅತಿಥಿಗಳಾಗಿದ್ದ ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಮಾತನಾಡಿ, ವಿಜ್ಞಾನದ ಬೆಳವಣಿಗೆ ಅತಿ ವೇಗದಲ್ಲಿ ನಡೆಯುತ್ತಿದೆ. ಅದರ ವೇಗಕ್ಕೆ ಹೆಜ್ಜೆ ಹಾಕಲು ಮಕ್ಕಳಿಗೆ ಬೋಧನೆ ಮಾಡುವ ಶಿಕ್ಷಕರು ಸಮರ್ಥರಾಗಿಬೇಕು. ವಿಜ್ಞಾನಿಗಳನ್ನು ತಯಾರು ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. <br /> <br /> ಮಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅಧ್ಯಕ್ಷತೆ ವಹಿಸಿದ್ದರು. ಮಾಲಿಕೆಯ ಯೋಜನಾ ನಿರ್ದೇಶಕ ಪ್ರೊ.ಕೆ.ಸಿದ್ದಪ್ಪ, ಜೆಎಸ್ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಶಿಕ್ಷಣ ವಿಭಾಗದ ನಿರ್ದೇಶಕ ಕೆ.ಶಾಂತಯ್ಯ ಹಾಜರಿದ್ದರು. ಕಾರ್ಯಾಗಾರದಲ್ಲಿ 60ಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗುತ್ತಿವೆ ಎಂದು ಮೈಸೂರು ವಿಶ್ವವಿದ್ಯಾ ನಿಲಯದ ಕುಲಪತಿ ಪ್ರೊ.ವಿ.ಜಿ. ತಳವಾರ ಅಭಿಪ್ರಾಯಪಟ್ಟರು. <br /> <br /> ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಿಜ್ಞಾನ ಮತ್ತು ಸಮಾಜ ಪ್ರತಿಷ್ಠಾನವು ಗುರುವಾರ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಪ್ರಾಯೋಜಿತ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಣ ಸುಧಾರಣೆಗೆ ಮಾಹಿತಿ ಸೌಲಭ್ಯದ ಅಂಗವಾಗಿ `8ನೇ ತರಗತಿಯ ದೃಶ್ಯ ಮತ್ತು ವಿಷಯ ಘಟಕ ಮಾಲಿಕೆಗಳ ಪರಿಣಾಮಕಾರಿ ಬಳಕೆ~ ಕುರಿತು ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. <br /> <br /> `ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಸ್ಫೋಟಕ ಬದಲಾವಣೆಯಿಂದ ಪಠ್ಯಕ್ರಮ, ಬೋಧನಾ ಕ್ರಮ ಹಾಗೂ ವಿದ್ಯಾರ್ಥಿ ಕಲಿಕೆಯಲ್ಲೂ ಬದಲಾವಣೆಗಳಾಗಿವೆ. ಈ ರೀತಿಯ ಬದಲಾವಣೆ ಎಲ್ಲ ಕಡೆ ಆಗುತ್ತಿದ್ದು, ನಗರದ ವಿದ್ಯಾರ್ಥಿಗಳಿಗೆ ಈ ಆಧುನಿಕ ಸೌಲಭ್ಯಗಳು ದೊರೆಯುತ್ತಿವೆ. ಆದರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ. ಇದರಿಂದ ಶಿಕ್ಷಕರು ಸಹ ಪರಿಣಾಮಕಾರಿಯಾಗಿ ಪಾಠ ಮಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರೊ.ಕೆ.ಸಿದ್ದಪ್ಪ ಹೊರತಂದಿರುವ ಈ ಮಾಲಿಕೆಯು ತುಂಬಾ ಉಪಯುಕ್ತವಾಗಲಿದೆ~ ಎಂದರು. <br /> <br /> ಮುಖ್ಯ ಅತಿಥಿಗಳಾಗಿದ್ದ ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಮಾತನಾಡಿ, ವಿಜ್ಞಾನದ ಬೆಳವಣಿಗೆ ಅತಿ ವೇಗದಲ್ಲಿ ನಡೆಯುತ್ತಿದೆ. ಅದರ ವೇಗಕ್ಕೆ ಹೆಜ್ಜೆ ಹಾಕಲು ಮಕ್ಕಳಿಗೆ ಬೋಧನೆ ಮಾಡುವ ಶಿಕ್ಷಕರು ಸಮರ್ಥರಾಗಿಬೇಕು. ವಿಜ್ಞಾನಿಗಳನ್ನು ತಯಾರು ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. <br /> <br /> ಮಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅಧ್ಯಕ್ಷತೆ ವಹಿಸಿದ್ದರು. ಮಾಲಿಕೆಯ ಯೋಜನಾ ನಿರ್ದೇಶಕ ಪ್ರೊ.ಕೆ.ಸಿದ್ದಪ್ಪ, ಜೆಎಸ್ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಶಿಕ್ಷಣ ವಿಭಾಗದ ನಿರ್ದೇಶಕ ಕೆ.ಶಾಂತಯ್ಯ ಹಾಜರಿದ್ದರು. ಕಾರ್ಯಾಗಾರದಲ್ಲಿ 60ಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>