<p>ಸಿದ್ದಾಪುರ: ಕೇವಲ ಸಾಂಪ್ರದಾಯಿಕ ಶಿಕ್ಷಣ ಪಡೆಯುವುದರಿಂದ ಬದುಕಿನ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬರಲಾರದು ಎಂದು ಪ.ಪಂ. ಅಧ್ಯಕ್ಷ ಕೆ.ಜಿ.ನಾಯ್ಕ ನುಡಿದರು.<br /> <br /> ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ ಮತ್ತು ವಿದ್ಯಾರ್ಥಿ ಸಂಸತ್ ಅನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಮಾಜದಲ್ಲಿರುವ ವಿವಿಧ ರೀತಿಯ ಜನರ ನೇರ ಸಂಪರ್ಕ ಪಡೆದಾಗ ಮಾತ್ರ ಅವರುಗಳ ನೋವು-ನಲಿವುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದರು. ಪ.ಪಂ.ಸದಸ್ಯ ಗುರುರಾಜ ಶಾನಭಾಗ,ಸಾಮಾಜಿಕ ಕಾರ್ಯಕರ್ತ ರೋಹಿದಾಸ ಮಡಿವಾಳ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಕೆ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಇಕೋ ಕ್ಲಬ್ ಉದ್ಘಾಟನೆ: ಇದೇ ಸಂದರ್ಭದಲ್ಲಿ ಕಾಲೇಜಿನ ಇಕೋ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕ್ಲಬ್ನ ವಾರ್ಷಿಕ ಸೇವಾ ಯೋಜನೆಯ ಕುರಿತು ಸಂಚಾಲಕ ಎಲ್.ವಿ.ಭಟ್ಟ ಮಾತನಾಡಿದರು.<br /> <br /> ಉಪನ್ಯಾಸಕ ಬಂಗಾರಪ್ಪ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಜಿ.ಎಸ್.ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಕೆ.ಎಂ.ಲಕ್ಷ್ಮಣ ವಂದಿಸಿದರು.ಬಿ.ಎಸ್.ಫರ್ನಾಂಡೀಸ್ ನಿರೂಪಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಕೇವಲ ಸಾಂಪ್ರದಾಯಿಕ ಶಿಕ್ಷಣ ಪಡೆಯುವುದರಿಂದ ಬದುಕಿನ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬರಲಾರದು ಎಂದು ಪ.ಪಂ. ಅಧ್ಯಕ್ಷ ಕೆ.ಜಿ.ನಾಯ್ಕ ನುಡಿದರು.<br /> <br /> ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ ಮತ್ತು ವಿದ್ಯಾರ್ಥಿ ಸಂಸತ್ ಅನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಮಾಜದಲ್ಲಿರುವ ವಿವಿಧ ರೀತಿಯ ಜನರ ನೇರ ಸಂಪರ್ಕ ಪಡೆದಾಗ ಮಾತ್ರ ಅವರುಗಳ ನೋವು-ನಲಿವುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದರು. ಪ.ಪಂ.ಸದಸ್ಯ ಗುರುರಾಜ ಶಾನಭಾಗ,ಸಾಮಾಜಿಕ ಕಾರ್ಯಕರ್ತ ರೋಹಿದಾಸ ಮಡಿವಾಳ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಕೆ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಇಕೋ ಕ್ಲಬ್ ಉದ್ಘಾಟನೆ: ಇದೇ ಸಂದರ್ಭದಲ್ಲಿ ಕಾಲೇಜಿನ ಇಕೋ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕ್ಲಬ್ನ ವಾರ್ಷಿಕ ಸೇವಾ ಯೋಜನೆಯ ಕುರಿತು ಸಂಚಾಲಕ ಎಲ್.ವಿ.ಭಟ್ಟ ಮಾತನಾಡಿದರು.<br /> <br /> ಉಪನ್ಯಾಸಕ ಬಂಗಾರಪ್ಪ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಜಿ.ಎಸ್.ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಕೆ.ಎಂ.ಲಕ್ಷ್ಮಣ ವಂದಿಸಿದರು.ಬಿ.ಎಸ್.ಫರ್ನಾಂಡೀಸ್ ನಿರೂಪಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>