<p><strong>ಮಸ್ಕಿ: </strong>ಪಟ್ಟಣಕ್ಕೆ ಸಮೀಪವಿರುವ ಮಾರಲದಿನ್ನಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಪ್ರವಾಸಿ ಮಂದಿರದ ಬಯಲಿನಲ್ಲಿ ಓದುತ್ತ, ಪಾಠ ಕೇಳುತ್ತ ಕಾಲ ಕಳೆಯುತ್ತಿದ್ದಾರೆ.<br /> <br /> ಪ್ರಸಕ್ತ ವರ್ಷ 8ರಿಂದ 10ನೇ ತರಗತಿಯವರೆಗೆ 90 ವಿದ್ಯಾರ್ಥಿಗಳು ಓದುತ್ತಿದ್ದಾರೆ. 8ಜನ ಶಿಕ್ಷಕರು ಪ್ರವಾಸಿ ಮಂದಿರದ ಕಾರಿಡಾರ್, ಬಯಲಿನಲ್ಲಿ ಪಾಠ ಮಾಡುತ್ತಿರುವ ದುಸ್ಥಿತಿ ಬಂದೊದಗಿದೆ.<br /> <br /> 2009ರ ಫೆಬ್ರವರಿಯಲ್ಲಿ ನೂತನ ಶಾಲಾ ಕಟ್ಟಡ ಕಟ್ಟಲು ಸರ್ಕಾರ 18 ಲಕ್ಷ ರೂಪಾಯಿ ಮಂಜೂರು ಮಾಡಿದ್ದು 4 ಶಾಲಾ ಕೊಠಡಿಗಳನ್ನು ಒಂದು ವರ್ಷದಲ್ಲಿ ಮುಗಿಸಲು ನಿರ್ಮಿತಿ ಕೇಂದ್ರಕ್ಕೆ ಸರ್ಕಾರ ಗಡುವ ನೀಡಿದೆ. ಆದರೆ ಮೂರು ವರ್ಷವಾದರೂ ಕೊಠಡಿ ನಿರ್ಮಾಣ ಮಾಡಿದ್ದಾರಾಗಲಿ ಇನ್ನು ರಸ್ತೆ, ಕಾಂಪೌಂಡ್ ಪೂರ್ಣಗೊಳಿಸಿಲ್ಲ.<br /> <br /> ಪ್ರಸಕ್ತ ವರ್ಷ ನೂತನವಾಗಿ ನಿರ್ಮಿಸಿದ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಬೇಕೆಂದರೆ ನಿರ್ಮಿತಿ ಕೇಂದ್ರದವರು ಕಟ್ಟಡವನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಬಯಲಿನಲ್ಲಿ ಓದುವಂತಾಗಿದೆ. ಈ ವರ್ಷ ನಾವು ಹೊಸ ಶಾಲೆಗೆ ಹೋಗುತ್ತೇವೆ ಎಂಬ ಕನಸು ಕಂಡಿದ್ದೆವು. ಆದರೆ ಹೊಸ ಶಾಲೆ ಉದ್ಘಾಟನೆಯಾಗದಿರುವುದಕ್ಕೆ ಮತ್ತೆ ಬಯಲಿನಲ್ಲಿ ಓದುವಂತಾಗಿದೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸುತ್ತಾರೆ.<br /> <br /> ನೂತನವಾಗಿ ನಿರ್ಮಿಸಿದ ಶಾಲೆಗೆ ಹೋಗಬೇಕಾದ ಮಾರ್ಗದಲ್ಲಿ ಜಾಲಿಗಿಡಗಳು ಬೆಳೆದಿವೆ. ಶಾಲೆಯ ಮುಂಬಾಗದಲ್ಲಿ ನೆಲ ಸಮತಟ್ಟು ಇಲ್ಲದೆ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಲು ತೊಂದರೆಯಾಗುವುದರಿಂದ ನೆಲ ಸಮತಟ್ಟು ಮಾಡಿ ರಸ್ತೆ ನಿರ್ಮಿಸಬೇಕೆಂದು ಗ್ರಾಮದ ಗ್ಯಾನಪ್ಪ ಅಭಿಪ್ರಾಯಪಟ್ಟರು.<br /> <br /> ಆಗಿನ ಲಿಂಗಸುಗೂರು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ 2007-08ನೇ ಸಾಲಿನಲ್ಲಿ ಮಾರಲದಿನ್ನಿ ಗ್ರಾಮಕ್ಕೆ ಪ್ರೌಢಶಾಲೆಗೆ ಸರ್ಕಾರದಿಂದ ಮಂಜೂರು ಮಾಡಿಸಿ ಕಟ್ಟಡ ನಿರ್ಮಾಣವಾಗುವರೆಗೆ ಪ್ರವಾಸಿ ಮಂದಿರದಲ್ಲಿ ಶಾಲೆ ನಡೆಯಲಿ ಎಂದು ಆರಂಭಿಸಿದರು. 2009ರಲ್ಲಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ನೂತನ ಕಟ್ಟಡಕ್ಕೆ ಭೂಮಿಪೂಜೆ ಮಾಡಿದರು. <br /> <br /> ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಶಾಲೆ ಆರಂಭಿಸುವುದಾಗಿ ಹೇಳಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎಚ್,ನಾಗೂರು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಶಾಲೆಗೆ ಭೇಟಿ ನೀಡಿದ್ದರೂ ಕಟ್ಟಡ ಮುಗಿಸುವಲ್ಲಿ ನಿರ್ಮಿತಿ ಕೇಂದ್ರದವರ ಮೇಲೆ ಒತ್ತಡ ಹಾಕುವಲ್ಲಿ ವಿಫಲರಾಗಿದ್ದಾರೆಂದು ನಾಗರಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಪಟ್ಟಣಕ್ಕೆ ಸಮೀಪವಿರುವ ಮಾರಲದಿನ್ನಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಪ್ರವಾಸಿ ಮಂದಿರದ ಬಯಲಿನಲ್ಲಿ ಓದುತ್ತ, ಪಾಠ ಕೇಳುತ್ತ ಕಾಲ ಕಳೆಯುತ್ತಿದ್ದಾರೆ.<br /> <br /> ಪ್ರಸಕ್ತ ವರ್ಷ 8ರಿಂದ 10ನೇ ತರಗತಿಯವರೆಗೆ 90 ವಿದ್ಯಾರ್ಥಿಗಳು ಓದುತ್ತಿದ್ದಾರೆ. 8ಜನ ಶಿಕ್ಷಕರು ಪ್ರವಾಸಿ ಮಂದಿರದ ಕಾರಿಡಾರ್, ಬಯಲಿನಲ್ಲಿ ಪಾಠ ಮಾಡುತ್ತಿರುವ ದುಸ್ಥಿತಿ ಬಂದೊದಗಿದೆ.<br /> <br /> 2009ರ ಫೆಬ್ರವರಿಯಲ್ಲಿ ನೂತನ ಶಾಲಾ ಕಟ್ಟಡ ಕಟ್ಟಲು ಸರ್ಕಾರ 18 ಲಕ್ಷ ರೂಪಾಯಿ ಮಂಜೂರು ಮಾಡಿದ್ದು 4 ಶಾಲಾ ಕೊಠಡಿಗಳನ್ನು ಒಂದು ವರ್ಷದಲ್ಲಿ ಮುಗಿಸಲು ನಿರ್ಮಿತಿ ಕೇಂದ್ರಕ್ಕೆ ಸರ್ಕಾರ ಗಡುವ ನೀಡಿದೆ. ಆದರೆ ಮೂರು ವರ್ಷವಾದರೂ ಕೊಠಡಿ ನಿರ್ಮಾಣ ಮಾಡಿದ್ದಾರಾಗಲಿ ಇನ್ನು ರಸ್ತೆ, ಕಾಂಪೌಂಡ್ ಪೂರ್ಣಗೊಳಿಸಿಲ್ಲ.<br /> <br /> ಪ್ರಸಕ್ತ ವರ್ಷ ನೂತನವಾಗಿ ನಿರ್ಮಿಸಿದ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಬೇಕೆಂದರೆ ನಿರ್ಮಿತಿ ಕೇಂದ್ರದವರು ಕಟ್ಟಡವನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಬಯಲಿನಲ್ಲಿ ಓದುವಂತಾಗಿದೆ. ಈ ವರ್ಷ ನಾವು ಹೊಸ ಶಾಲೆಗೆ ಹೋಗುತ್ತೇವೆ ಎಂಬ ಕನಸು ಕಂಡಿದ್ದೆವು. ಆದರೆ ಹೊಸ ಶಾಲೆ ಉದ್ಘಾಟನೆಯಾಗದಿರುವುದಕ್ಕೆ ಮತ್ತೆ ಬಯಲಿನಲ್ಲಿ ಓದುವಂತಾಗಿದೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸುತ್ತಾರೆ.<br /> <br /> ನೂತನವಾಗಿ ನಿರ್ಮಿಸಿದ ಶಾಲೆಗೆ ಹೋಗಬೇಕಾದ ಮಾರ್ಗದಲ್ಲಿ ಜಾಲಿಗಿಡಗಳು ಬೆಳೆದಿವೆ. ಶಾಲೆಯ ಮುಂಬಾಗದಲ್ಲಿ ನೆಲ ಸಮತಟ್ಟು ಇಲ್ಲದೆ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಲು ತೊಂದರೆಯಾಗುವುದರಿಂದ ನೆಲ ಸಮತಟ್ಟು ಮಾಡಿ ರಸ್ತೆ ನಿರ್ಮಿಸಬೇಕೆಂದು ಗ್ರಾಮದ ಗ್ಯಾನಪ್ಪ ಅಭಿಪ್ರಾಯಪಟ್ಟರು.<br /> <br /> ಆಗಿನ ಲಿಂಗಸುಗೂರು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ 2007-08ನೇ ಸಾಲಿನಲ್ಲಿ ಮಾರಲದಿನ್ನಿ ಗ್ರಾಮಕ್ಕೆ ಪ್ರೌಢಶಾಲೆಗೆ ಸರ್ಕಾರದಿಂದ ಮಂಜೂರು ಮಾಡಿಸಿ ಕಟ್ಟಡ ನಿರ್ಮಾಣವಾಗುವರೆಗೆ ಪ್ರವಾಸಿ ಮಂದಿರದಲ್ಲಿ ಶಾಲೆ ನಡೆಯಲಿ ಎಂದು ಆರಂಭಿಸಿದರು. 2009ರಲ್ಲಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ನೂತನ ಕಟ್ಟಡಕ್ಕೆ ಭೂಮಿಪೂಜೆ ಮಾಡಿದರು. <br /> <br /> ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಶಾಲೆ ಆರಂಭಿಸುವುದಾಗಿ ಹೇಳಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎಚ್,ನಾಗೂರು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಶಾಲೆಗೆ ಭೇಟಿ ನೀಡಿದ್ದರೂ ಕಟ್ಟಡ ಮುಗಿಸುವಲ್ಲಿ ನಿರ್ಮಿತಿ ಕೇಂದ್ರದವರ ಮೇಲೆ ಒತ್ತಡ ಹಾಕುವಲ್ಲಿ ವಿಫಲರಾಗಿದ್ದಾರೆಂದು ನಾಗರಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>