<p><strong>ಕೊಪ್ಪಳ:</strong> ರಾಜ್ಯದಲ್ಲಿ ಈ ವರ್ಷ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ಉತ್ಸವ ಸೇರಿದಂತೆ ವಿವಿಧ ಉತ್ಸವಗಳನ್ನು ಆಚರಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.<br /> <br /> ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬರದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಈ ವರ್ಷ ಉತ್ಸವ, ವೈಭವ ಹಾಗೂ ಸಂಭ್ರಮದಂತಹ ಕಾರ್ಯಕ್ರಮಗಳ ಆಚರಣೆ ಹಮ್ಮಿಕೊಳ್ಳಬಾರದು ಎಂದು ಸೂಚಿಸಿದೆ.<br /> <br /> 2011ನೇ ಸಾಲಿನಲ್ಲಿ ಮಳೆ ಅಭಾವದಿಂದಾಗಿ ರಾಜ್ಯದ 99 ತಾಲ್ಲೂಕುಗಳಲ್ಲಿ ಬರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸದರಿ ತಾಲ್ಲೂಕುಗಳನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಉತ್ಸವಗಳನ್ನು ಆಯೋಜಿಸುವಂತಿಲ್ಲ. ಹೀಗಾಗಿ ಈ ಬಾರಿ ಹಂಪಿ ಉತ್ಸವ, ಕನಕಗಿರಿ, ಆನೆಗೊಂದಿ, ಲಕ್ಕುಂಡಿ, ಚಾಲುಕ್ಯ ಹಾಗೂ ಹೊಯ್ಸಳ ಉತ್ಸವಗಳನ್ನು ಹಮ್ಮಿಕೊಳ್ಳಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.<br /> <br /> ಆದರೆ, ಬರ ಪರಿಸ್ಥಿತಿ ಇದ್ದರೂ ಈಗಾಗಲೇ ಹಲವಾರು ಉತ್ಸವಗಳನ್ನು ಆಚರಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಇಟಗಿ ಉತ್ಸವ ನೆರವೇರಿತು. ಅದೇ ರೀತಿ ಧಾರವಾಡ ಉತ್ಸವ, ಕದಂಬ ಉತ್ಸವ ಹಾಗೂ ಕಿತ್ತೂರು ಉತ್ಸವಗಳನ್ನೂ ಆಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ರಾಜ್ಯದಲ್ಲಿ ಈ ವರ್ಷ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ಉತ್ಸವ ಸೇರಿದಂತೆ ವಿವಿಧ ಉತ್ಸವಗಳನ್ನು ಆಚರಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.<br /> <br /> ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬರದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಈ ವರ್ಷ ಉತ್ಸವ, ವೈಭವ ಹಾಗೂ ಸಂಭ್ರಮದಂತಹ ಕಾರ್ಯಕ್ರಮಗಳ ಆಚರಣೆ ಹಮ್ಮಿಕೊಳ್ಳಬಾರದು ಎಂದು ಸೂಚಿಸಿದೆ.<br /> <br /> 2011ನೇ ಸಾಲಿನಲ್ಲಿ ಮಳೆ ಅಭಾವದಿಂದಾಗಿ ರಾಜ್ಯದ 99 ತಾಲ್ಲೂಕುಗಳಲ್ಲಿ ಬರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸದರಿ ತಾಲ್ಲೂಕುಗಳನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಉತ್ಸವಗಳನ್ನು ಆಯೋಜಿಸುವಂತಿಲ್ಲ. ಹೀಗಾಗಿ ಈ ಬಾರಿ ಹಂಪಿ ಉತ್ಸವ, ಕನಕಗಿರಿ, ಆನೆಗೊಂದಿ, ಲಕ್ಕುಂಡಿ, ಚಾಲುಕ್ಯ ಹಾಗೂ ಹೊಯ್ಸಳ ಉತ್ಸವಗಳನ್ನು ಹಮ್ಮಿಕೊಳ್ಳಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.<br /> <br /> ಆದರೆ, ಬರ ಪರಿಸ್ಥಿತಿ ಇದ್ದರೂ ಈಗಾಗಲೇ ಹಲವಾರು ಉತ್ಸವಗಳನ್ನು ಆಚರಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಇಟಗಿ ಉತ್ಸವ ನೆರವೇರಿತು. ಅದೇ ರೀತಿ ಧಾರವಾಡ ಉತ್ಸವ, ಕದಂಬ ಉತ್ಸವ ಹಾಗೂ ಕಿತ್ತೂರು ಉತ್ಸವಗಳನ್ನೂ ಆಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>