<p>ಜೇವರ್ಗಿ: ಸಮರ್ಪಕ ಮಳೆ ಬಾರದೇ ರೈತರು ಸಂಕಷ್ಟದಲ್ಲಿದ್ದಾರೆ. ಜೇವರ್ಗಿ ತಾಲ್ಲೂಕನ್ನು ಕೂಡಲೇ ಬರಗಾಲ ಪೀಡಿತ ಎಂದು ಘೋಷಿಸುವಂತೆ ತಾವು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿರುವುದಾಗಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.<br /> <br /> ಭಾನುವಾರ ತಾಲ್ಲೂಕಿನ ಗಂವ್ಹಾರ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸಂಪೂರ್ಣ ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು. ಅ.3ರಂದು ಸಿಂ ಸಭೆ ಕರೆದಿದ್ದು, ಆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಭಾಗವಹಿಸಿ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಳೆ ಕಡಿಮೆಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ಭರವಸೆ ನೀಡಿದರು.<br /> <br /> ಗಂವ್ಹಾರ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ. ಗ್ರಾಮಗಳು ಸ್ವಚ್ಛವಾಗಿದ್ದಾಗ ಮಾತ್ರ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯವೆಂದರು.<br /> <br /> ಮುಖ್ಯ ಅತಿಥಿಗಳಾಗಿ ಆಂದೋಲಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಗುರುಲಿಂಗಪ್ಪಗೌಡ ಮಾಲಿಪಾಟೀಲ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಾರ್ವತಿ ಸ್ಥಾವರಮಠ, ಹರಿಶ್ಚಂದ್ರ ನಾಯಕ, ಬಾಪುಗೌಡ ಪೊಲೀಸ್ ಪಾಟೀಲ ಮತ್ತಿತರರು ಪಾಲ್ಗೊಂಡು ಮಾತನಾಡಿದರು.<br /> <br /> ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕಲ್ಯಾಣಕುಮಾರ ಗಂವ್ಹಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೇವರ್ಗಿ: ಸಮರ್ಪಕ ಮಳೆ ಬಾರದೇ ರೈತರು ಸಂಕಷ್ಟದಲ್ಲಿದ್ದಾರೆ. ಜೇವರ್ಗಿ ತಾಲ್ಲೂಕನ್ನು ಕೂಡಲೇ ಬರಗಾಲ ಪೀಡಿತ ಎಂದು ಘೋಷಿಸುವಂತೆ ತಾವು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿರುವುದಾಗಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.<br /> <br /> ಭಾನುವಾರ ತಾಲ್ಲೂಕಿನ ಗಂವ್ಹಾರ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸಂಪೂರ್ಣ ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು. ಅ.3ರಂದು ಸಿಂ ಸಭೆ ಕರೆದಿದ್ದು, ಆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಭಾಗವಹಿಸಿ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಳೆ ಕಡಿಮೆಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ಭರವಸೆ ನೀಡಿದರು.<br /> <br /> ಗಂವ್ಹಾರ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ. ಗ್ರಾಮಗಳು ಸ್ವಚ್ಛವಾಗಿದ್ದಾಗ ಮಾತ್ರ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯವೆಂದರು.<br /> <br /> ಮುಖ್ಯ ಅತಿಥಿಗಳಾಗಿ ಆಂದೋಲಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಗುರುಲಿಂಗಪ್ಪಗೌಡ ಮಾಲಿಪಾಟೀಲ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಾರ್ವತಿ ಸ್ಥಾವರಮಠ, ಹರಿಶ್ಚಂದ್ರ ನಾಯಕ, ಬಾಪುಗೌಡ ಪೊಲೀಸ್ ಪಾಟೀಲ ಮತ್ತಿತರರು ಪಾಲ್ಗೊಂಡು ಮಾತನಾಡಿದರು.<br /> <br /> ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕಲ್ಯಾಣಕುಮಾರ ಗಂವ್ಹಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>