<p><strong>ಬೆಂಗಳೂರು: </strong>ರಾಜ್ಯದಲ್ಲಿ ಬರದ ಬವಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಬೇಡಿಕೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವುದನ್ನು ಸರ್ಕಾರ ಸದ್ಯಕ್ಕೆ ಮುಂದೂಡಿದೆ. <br /> <br /> ಸರ್ಕಾರದ ಈ ನಿರ್ಧಾರಕ್ಕೆ ಉಪನ್ಯಾಸಕರ ಸಂಘ ಕೂಡ ಸಮ್ಮತಿಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದೆ.<br /> <br /> `ಬರ ಪರಿಸ್ಥಿತಿ ಸುಧಾರಿಸಿದ ನಂತರ ಉಪನ್ಯಾಸಕರ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಲು ಸಿಎಂ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸಮ್ಮತಿಸಿದ್ದಾರೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸುಗಮವಾಗಿ ನಡೆಯಲಿದೆ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಈ ಸಭೆಯಲ್ಲಿ ಹಾಜರಿದ್ದರು. `ರಾಜ್ಯದಲ್ಲಿ ಬರ ಇದೆ. ಈ ಸಂದರ್ಭದಲ್ಲಿ ಉಪನ್ಯಾಸಕರ ವೇತನ ಹೆಚ್ಚಳ ಮಾಡುವುದು ಸರಿಯಲ್ಲ. ಬರ ಸ್ಥಿತಿ ಸುಧಾರಿಸಿದ ಬಳಿಕ ನಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. <br /> <br /> ಈ ಕಾರಣದಿಂದ ಯಾವುದೇ ಗಡುವು ನೀಡದೆ ಸರ್ಕಾರದ ಜತೆ ಸಹಕರಿಸಲು ತೀರ್ಮಾನಿಸಲಾಗಿದೆ~ ಎಂದು ಶ್ರೀಕಂಠೇಗೌಡ ಮತ್ತು ಪುರ್ಲೆ ಅವರು ನಂತರ ಸುದ್ದಿಗಾರರಿಗೆ ವಿವರಿಸಿದರು.<br /> <br /> ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ನಾಲ್ಕು ದಿನ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿದ್ದರು. ಗುರುವಾರ ಮುಖ್ಯಮಂತ್ರಿ ಜತೆ ಸಭೆ ನಡೆಸಿ ಸೂಕ್ತ ತೀರ್ಮಾನಕ್ಕೆ ಬರುವುದಾಗಿ ಹೇಳಲಾಗಿತ್ತು. ಆ ಪ್ರಕಾರ ಸಭೆ ನಡೆದಿದ್ದು, ಬೇಡಿಕೆ ಈಡೇರಿಸಲು ಸರ್ಕಾರ ಮುಕ್ತವಾಗಿದೆ ಎಂದು ಸಚಿವ ಕಾಗೇರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಬರದ ಬವಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಬೇಡಿಕೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವುದನ್ನು ಸರ್ಕಾರ ಸದ್ಯಕ್ಕೆ ಮುಂದೂಡಿದೆ. <br /> <br /> ಸರ್ಕಾರದ ಈ ನಿರ್ಧಾರಕ್ಕೆ ಉಪನ್ಯಾಸಕರ ಸಂಘ ಕೂಡ ಸಮ್ಮತಿಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದೆ.<br /> <br /> `ಬರ ಪರಿಸ್ಥಿತಿ ಸುಧಾರಿಸಿದ ನಂತರ ಉಪನ್ಯಾಸಕರ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಲು ಸಿಎಂ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸಮ್ಮತಿಸಿದ್ದಾರೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸುಗಮವಾಗಿ ನಡೆಯಲಿದೆ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಈ ಸಭೆಯಲ್ಲಿ ಹಾಜರಿದ್ದರು. `ರಾಜ್ಯದಲ್ಲಿ ಬರ ಇದೆ. ಈ ಸಂದರ್ಭದಲ್ಲಿ ಉಪನ್ಯಾಸಕರ ವೇತನ ಹೆಚ್ಚಳ ಮಾಡುವುದು ಸರಿಯಲ್ಲ. ಬರ ಸ್ಥಿತಿ ಸುಧಾರಿಸಿದ ಬಳಿಕ ನಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. <br /> <br /> ಈ ಕಾರಣದಿಂದ ಯಾವುದೇ ಗಡುವು ನೀಡದೆ ಸರ್ಕಾರದ ಜತೆ ಸಹಕರಿಸಲು ತೀರ್ಮಾನಿಸಲಾಗಿದೆ~ ಎಂದು ಶ್ರೀಕಂಠೇಗೌಡ ಮತ್ತು ಪುರ್ಲೆ ಅವರು ನಂತರ ಸುದ್ದಿಗಾರರಿಗೆ ವಿವರಿಸಿದರು.<br /> <br /> ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ನಾಲ್ಕು ದಿನ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿದ್ದರು. ಗುರುವಾರ ಮುಖ್ಯಮಂತ್ರಿ ಜತೆ ಸಭೆ ನಡೆಸಿ ಸೂಕ್ತ ತೀರ್ಮಾನಕ್ಕೆ ಬರುವುದಾಗಿ ಹೇಳಲಾಗಿತ್ತು. ಆ ಪ್ರಕಾರ ಸಭೆ ನಡೆದಿದ್ದು, ಬೇಡಿಕೆ ಈಡೇರಿಸಲು ಸರ್ಕಾರ ಮುಕ್ತವಾಗಿದೆ ಎಂದು ಸಚಿವ ಕಾಗೇರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>