<p>ಹಿರಿಯೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಕಾರಣ ತಾಲ್ಲೂಕನ್ನು `ಬರಪೀಡಿತ ಪ್ರದೇಶ~ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ವಂದೇಮಾತರಂ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಯಿತು.<br /> <br /> ಪ್ರತಿಭಟನಾಕಾರರು ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಂತರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.<br /> <br /> ತಾಲ್ಲೂಕಿನ ಬಹುತೇಕ ಭಾಗದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು, ಕೃಷಿ ಕಾರ್ಮಿಕರು ಕೈಗಳಿಗೆ ಕೆಲಸವಿಲ್ಲದೇ ಗುಳೇ ಹೋಗುತ್ತಿದ್ದಾರೆ. ಜಾನುವಾರುಗಳನ್ನು ಕೇಳಿದ ಬೆಲೆಗೆ ಮಾರಿಕೊಳ್ಳುತ್ತಿದ್ದು, ಬಹುತೇಕ ರಾಸುಗಳು ಕಸಾಯಿಖಾನೆ ಸೇರುತ್ತಿವೆ ಎಂದು ದೂರಿದರು.<br /> <br /> ಹಿಂದಿನ ವರ್ಷ ಹಿಂಗಾರು ಮಳೆ ಹೆಚ್ಚಾಗಿ ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಶೇಂಗಾ ಹಾಳಾಗಿತ್ತು. ಈ ಬಾರಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡಲು ತಂದಿದ್ದ ಶೇಂಗಾ ಬೀಜವನ್ನು ಕ್ವಿಂಟಲ್ಗೆ ್ಙ 2-3 ಸಾವಿರ ಕಡಿಮೆ ದರಕ್ಕೆ ರೈತರು ಮಾರಿಕೊಂಡಿದ್ದಾರೆ. ತಕ್ಷಣ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ, ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕು ಎಂದು ವೇದಿಕೆ ಮುಖಂಡರು ಆಗ್ರಹಿಸಿದರು.<br /> <br /> ಜಿಲ್ಲೆಯನ್ನು ಪದೇಪದೇ ಕಾಡುವ ಬರಗಾಲದಿಂದ ಮುಕ್ತಗೊಳಿಸಲು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಚುರುಕುಗೊಳಿಸಿ, ಜಿಲ್ಲೆಗೆ ನೀರು ಹರಿಯುವಂತೆ ಮಾಡಬೇಕು. ತಾಲ್ಲೂಕಿನಲ್ಲಿ ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ವೇದಿಕೆ ಅಧ್ಯಕ್ಷ ಎಂ.ಎಲ್. ಗಿರಿಧರ್, ಎನ್. ಬಾಲು, ಎಚ್.ಪಿ. ಮಹಾಂತೇಶ್, ಪಿ. ಕೃಷ್ಣಮೂರ್ತಿ, ಮಸ್ಕಲ್ ಪರಮೇಶ್, ಕೆ. ಸೆಂದಿಲ್ ಕುಮಾರ್, ವಿ. ಅರುಣ್ಕುಮಾರ್, ಟಿ.ವಿ. ಬಾಬು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಮೂಲಸೌಲಭ್ಯದ ಭರವಸೆ</strong><br /> ತಾಲ್ಲೂಕಿನ ಮಲ್ಲಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಎಚ್. ಚಂದ್ರಪ್ಪ ಭರವಸೆ ನೀಡಿದರು.<br /> <br /> ಮಲ್ಲಪ್ಪನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಮುದಾಯ ಆರೋಗ್ಯ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿಯೂ ವೈದ್ಯರ ಕೊರತೆಯಿದೆ. ಆರೋಗ್ಯ ಸಚಿವರ ಮೇಲೆ ಒತ್ತಡ ತಂದು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.<br /> <br /> ವೈದ್ಯಾಧಿಕಾರಿ ಡಾ.ಪ್ರಭುಪ್ರಸಾದ್, ಹರ್ತಿಕೋಟೆ ಗ್ರಾ.ಪಂ. ಅಧ್ಯಕ್ಷೆ ರತ್ನನಾಯಕಿ, ತಾ.ಪಂ. ಸದಸ್ಯೆ ಭಾರತಮ್ಮ, ಕಿರಿಯ ಆರೋಗ್ಯ ಸಹಾಯಕಿ ಎಂ. ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಕಾರಣ ತಾಲ್ಲೂಕನ್ನು `ಬರಪೀಡಿತ ಪ್ರದೇಶ~ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ವಂದೇಮಾತರಂ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಯಿತು.<br /> <br /> ಪ್ರತಿಭಟನಾಕಾರರು ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಂತರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.<br /> <br /> ತಾಲ್ಲೂಕಿನ ಬಹುತೇಕ ಭಾಗದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು, ಕೃಷಿ ಕಾರ್ಮಿಕರು ಕೈಗಳಿಗೆ ಕೆಲಸವಿಲ್ಲದೇ ಗುಳೇ ಹೋಗುತ್ತಿದ್ದಾರೆ. ಜಾನುವಾರುಗಳನ್ನು ಕೇಳಿದ ಬೆಲೆಗೆ ಮಾರಿಕೊಳ್ಳುತ್ತಿದ್ದು, ಬಹುತೇಕ ರಾಸುಗಳು ಕಸಾಯಿಖಾನೆ ಸೇರುತ್ತಿವೆ ಎಂದು ದೂರಿದರು.<br /> <br /> ಹಿಂದಿನ ವರ್ಷ ಹಿಂಗಾರು ಮಳೆ ಹೆಚ್ಚಾಗಿ ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಶೇಂಗಾ ಹಾಳಾಗಿತ್ತು. ಈ ಬಾರಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡಲು ತಂದಿದ್ದ ಶೇಂಗಾ ಬೀಜವನ್ನು ಕ್ವಿಂಟಲ್ಗೆ ್ಙ 2-3 ಸಾವಿರ ಕಡಿಮೆ ದರಕ್ಕೆ ರೈತರು ಮಾರಿಕೊಂಡಿದ್ದಾರೆ. ತಕ್ಷಣ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ, ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕು ಎಂದು ವೇದಿಕೆ ಮುಖಂಡರು ಆಗ್ರಹಿಸಿದರು.<br /> <br /> ಜಿಲ್ಲೆಯನ್ನು ಪದೇಪದೇ ಕಾಡುವ ಬರಗಾಲದಿಂದ ಮುಕ್ತಗೊಳಿಸಲು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಚುರುಕುಗೊಳಿಸಿ, ಜಿಲ್ಲೆಗೆ ನೀರು ಹರಿಯುವಂತೆ ಮಾಡಬೇಕು. ತಾಲ್ಲೂಕಿನಲ್ಲಿ ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ವೇದಿಕೆ ಅಧ್ಯಕ್ಷ ಎಂ.ಎಲ್. ಗಿರಿಧರ್, ಎನ್. ಬಾಲು, ಎಚ್.ಪಿ. ಮಹಾಂತೇಶ್, ಪಿ. ಕೃಷ್ಣಮೂರ್ತಿ, ಮಸ್ಕಲ್ ಪರಮೇಶ್, ಕೆ. ಸೆಂದಿಲ್ ಕುಮಾರ್, ವಿ. ಅರುಣ್ಕುಮಾರ್, ಟಿ.ವಿ. ಬಾಬು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಮೂಲಸೌಲಭ್ಯದ ಭರವಸೆ</strong><br /> ತಾಲ್ಲೂಕಿನ ಮಲ್ಲಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಎಚ್. ಚಂದ್ರಪ್ಪ ಭರವಸೆ ನೀಡಿದರು.<br /> <br /> ಮಲ್ಲಪ್ಪನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಮುದಾಯ ಆರೋಗ್ಯ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿಯೂ ವೈದ್ಯರ ಕೊರತೆಯಿದೆ. ಆರೋಗ್ಯ ಸಚಿವರ ಮೇಲೆ ಒತ್ತಡ ತಂದು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.<br /> <br /> ವೈದ್ಯಾಧಿಕಾರಿ ಡಾ.ಪ್ರಭುಪ್ರಸಾದ್, ಹರ್ತಿಕೋಟೆ ಗ್ರಾ.ಪಂ. ಅಧ್ಯಕ್ಷೆ ರತ್ನನಾಯಕಿ, ತಾ.ಪಂ. ಸದಸ್ಯೆ ಭಾರತಮ್ಮ, ಕಿರಿಯ ಆರೋಗ್ಯ ಸಹಾಯಕಿ ಎಂ. ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>