<p>ಮಂಡ್ಯ: ಬರ ಪರಿಸ್ಥಿತಿ ಬಗೆಗೆ ಅಧ್ಯಯನ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದ ತಂಡ ಮಂಗಳವಾರ (ಏ. 17) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ. <br /> <br /> ಸರ್ಕಾರ, ಜಿಲ್ಲೆಯ ಏಳೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮದ್ದೂರು, ನಾಗಮಂಗಲ, ಕೃಷ್ಣರಾಜ ಪೇಟೆ, ಪಾಂಡವಪುರ ತಾಲ್ಲೂಕುಗಳಿಗೆ ಪರಮೇಶ್ವರ್ ನೇತೃತ್ವದ ತಂಡ ಭೇಟಿ ನೀಡಲಿದ್ದು, ಮಾಹಿತಿ ಸಂಗ್ರಹಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಟಿ.ಎಸ್.ಸತ್ಯಾನಂದ ತಿಳಿಸಿದ್ದಾರೆ.<br /> <br /> ಕುಡಿಯುವ ನೀರು, ಜಾನುವಾರು ಗಳಿಗೆ ಮೇವು ಸೇರಿದಂತೆ ಇತರೆ ಸಮಸ್ಯೆಗಳ ಬಗೆಗೆ ಸಾರ್ವಜನಿಕ ರೊಡನೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇದೇ 28ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಬರ ಪರಿಸ್ಥಿತಿಯ ಸಂಪೂರ್ಣ ವರದಿಯನ್ನು ನೀಡಲಿದ್ದು, ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೋರಲಾಗುವುದು ಎಂದು ವಿವರಿಸಿದ್ದಾರೆ.<br /> <br /> ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು, ಜಿಲ್ಲೆಯಲ್ಲಿನ ಬರ ಸ್ಥಿತಿ ಬಗೆಗೆ ಈಗಾ ಗಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಮಾಹಿತಿಯನ್ನು ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷರ ನೇತೃತ್ವದ ತಂಡಕ್ಕೆ ಮಾಹಿತಿ ಒದಗಿಸಲಿದ್ದಾರೆ ಎಂದು ಅವರು ತಿಳಿಸಿದಿದ್ದಾರೆ. <br /> <br /> <strong>ಅಭಿನಂದನೆ:</strong> ಕೃಷ್ಣರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಡಿ. ಕೃಷ್ಣಮೂರ್ತಿ ಅವರು ಭಾರತ ಆಹಾರ ನಿಗಮದ ನಿರ್ದೇಶಕರಾಗಿ ನೇಮಕ ಗೊಂಡಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಭಿನಂದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಬರ ಪರಿಸ್ಥಿತಿ ಬಗೆಗೆ ಅಧ್ಯಯನ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದ ತಂಡ ಮಂಗಳವಾರ (ಏ. 17) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ. <br /> <br /> ಸರ್ಕಾರ, ಜಿಲ್ಲೆಯ ಏಳೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮದ್ದೂರು, ನಾಗಮಂಗಲ, ಕೃಷ್ಣರಾಜ ಪೇಟೆ, ಪಾಂಡವಪುರ ತಾಲ್ಲೂಕುಗಳಿಗೆ ಪರಮೇಶ್ವರ್ ನೇತೃತ್ವದ ತಂಡ ಭೇಟಿ ನೀಡಲಿದ್ದು, ಮಾಹಿತಿ ಸಂಗ್ರಹಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಟಿ.ಎಸ್.ಸತ್ಯಾನಂದ ತಿಳಿಸಿದ್ದಾರೆ.<br /> <br /> ಕುಡಿಯುವ ನೀರು, ಜಾನುವಾರು ಗಳಿಗೆ ಮೇವು ಸೇರಿದಂತೆ ಇತರೆ ಸಮಸ್ಯೆಗಳ ಬಗೆಗೆ ಸಾರ್ವಜನಿಕ ರೊಡನೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇದೇ 28ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಬರ ಪರಿಸ್ಥಿತಿಯ ಸಂಪೂರ್ಣ ವರದಿಯನ್ನು ನೀಡಲಿದ್ದು, ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೋರಲಾಗುವುದು ಎಂದು ವಿವರಿಸಿದ್ದಾರೆ.<br /> <br /> ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು, ಜಿಲ್ಲೆಯಲ್ಲಿನ ಬರ ಸ್ಥಿತಿ ಬಗೆಗೆ ಈಗಾ ಗಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಮಾಹಿತಿಯನ್ನು ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷರ ನೇತೃತ್ವದ ತಂಡಕ್ಕೆ ಮಾಹಿತಿ ಒದಗಿಸಲಿದ್ದಾರೆ ಎಂದು ಅವರು ತಿಳಿಸಿದಿದ್ದಾರೆ. <br /> <br /> <strong>ಅಭಿನಂದನೆ:</strong> ಕೃಷ್ಣರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಡಿ. ಕೃಷ್ಣಮೂರ್ತಿ ಅವರು ಭಾರತ ಆಹಾರ ನಿಗಮದ ನಿರ್ದೇಶಕರಾಗಿ ನೇಮಕ ಗೊಂಡಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಭಿನಂದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>