<p>ರಾಜ್ಯದ 123 ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿದೆ. ಈ ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಸಲು ಹಾಗೂ ಬಡ ಜನರಿಗೆ ಉದ್ಯೋಗ ಒದಗಿಸಲು ಕೆಲವು ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.<br /> <br /> ಬಹುತೇಕ ಬರಪೀಡಿತ ತಾಲ್ಲೂಕುಗಳಲ್ಲಿ ಹೇಳಿಕೊಳ್ಳುವಂತಹ ಪರಿಹಾರ ಕಾರ್ಯಗಳು ಆರಂಭವಾಗಿಲ್ಲ. ಕೆಲವು ಕಡೆ ಕಾಟಾಚಾರಕ್ಕೆ ಎಂಬಂತೆ ಗೋಶಾಲೆಗಳನ್ನು ತೆರೆಯಲಾಗಿದೆ. ಮೇವು ಬ್ಯಾಂಕ್ ಸ್ಥಾಪಿಸಿ ಒಂದು ವಾರ ನಡೆಸಿದ ಉದಾಹರಣೆಗಳಿವೆ. <br /> <br /> ಉದ್ಯೋಗ ಭರವಸೆ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲ. ಹಿಂದೆ ಕೊರೆದ ವಿಫಲ ಬೋರ್ ವೆಲ್ಗಳನ್ನೇ ಹೊಸದಾಗಿ ಕೊರೆಯಲಾಗಿದೆ ಎಂದು ದಾಖಲೆ ತೋರಿಸಿ ಸುಳ್ಳು ಬಿಲ್ ತಯಾರಿಸಿ ಹಣ ದುರುಪಯೋಗ ಮಾಡಿಕೊಂಡ ಆರೋಪಗಳು ಕೇಳಿ ಬರುತ್ತಿವೆ. <br /> ಈ ಅವ್ಯವಹಾರಗಳಿಗೆ ಸರ್ಕಾರ ತಡೆ ಹಾಕಬೇಕು. <br /> <br /> ತಕ್ಷಣವೇ ತಾಲ್ಲೂಕುವಾರು ಬರ ಪರಿಹಾರ ಕಾಮಗಾರಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಅದರ ಒಪ್ಪಿಗೆ ಇಲ್ಲದೆ ಹಣ ಖರ್ಚು ಮಾಡದಂತೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಈ ಸಮಿತಿಗಳಿಗೆ ತಾಲ್ಲೂಕಿನ ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸಬೇಕು. ಸರ್ಕಾರ ತಕ್ಷಣವೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ 123 ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿದೆ. ಈ ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಸಲು ಹಾಗೂ ಬಡ ಜನರಿಗೆ ಉದ್ಯೋಗ ಒದಗಿಸಲು ಕೆಲವು ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.<br /> <br /> ಬಹುತೇಕ ಬರಪೀಡಿತ ತಾಲ್ಲೂಕುಗಳಲ್ಲಿ ಹೇಳಿಕೊಳ್ಳುವಂತಹ ಪರಿಹಾರ ಕಾರ್ಯಗಳು ಆರಂಭವಾಗಿಲ್ಲ. ಕೆಲವು ಕಡೆ ಕಾಟಾಚಾರಕ್ಕೆ ಎಂಬಂತೆ ಗೋಶಾಲೆಗಳನ್ನು ತೆರೆಯಲಾಗಿದೆ. ಮೇವು ಬ್ಯಾಂಕ್ ಸ್ಥಾಪಿಸಿ ಒಂದು ವಾರ ನಡೆಸಿದ ಉದಾಹರಣೆಗಳಿವೆ. <br /> <br /> ಉದ್ಯೋಗ ಭರವಸೆ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲ. ಹಿಂದೆ ಕೊರೆದ ವಿಫಲ ಬೋರ್ ವೆಲ್ಗಳನ್ನೇ ಹೊಸದಾಗಿ ಕೊರೆಯಲಾಗಿದೆ ಎಂದು ದಾಖಲೆ ತೋರಿಸಿ ಸುಳ್ಳು ಬಿಲ್ ತಯಾರಿಸಿ ಹಣ ದುರುಪಯೋಗ ಮಾಡಿಕೊಂಡ ಆರೋಪಗಳು ಕೇಳಿ ಬರುತ್ತಿವೆ. <br /> ಈ ಅವ್ಯವಹಾರಗಳಿಗೆ ಸರ್ಕಾರ ತಡೆ ಹಾಕಬೇಕು. <br /> <br /> ತಕ್ಷಣವೇ ತಾಲ್ಲೂಕುವಾರು ಬರ ಪರಿಹಾರ ಕಾಮಗಾರಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಅದರ ಒಪ್ಪಿಗೆ ಇಲ್ಲದೆ ಹಣ ಖರ್ಚು ಮಾಡದಂತೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಈ ಸಮಿತಿಗಳಿಗೆ ತಾಲ್ಲೂಕಿನ ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸಬೇಕು. ಸರ್ಕಾರ ತಕ್ಷಣವೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>