<p><strong>ಚಿತ್ರದುರ್ಗ:</strong> ಜಿಲ್ಲೆಯ 17 ಹೋಬಳಿಗಳಲ್ಲಿ ಸಂಪೂರ್ಣ ಬರಪರಿಸ್ಥಿತಿ ಉಂಟಾಗಿದೆ ಮತ್ತು ಒಟ್ಟಾರೆ ರೂ 432 ಕೋಟಿ ಬೆಳೆ ನಷ್ಟವಾಗಿದೆಯಾದರೂ ಕೇಂದ್ರ ಸರ್ಕಾರ ರೂಪಿಸಿದ ನಿಯಮಾವಳಿಗಳಿಂದಾಗಿ ಚಿತ್ರದುರ್ಗವನ್ನು ಬರಪೀಡಿತ ಎಂದು ಘೋಷಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಆಸ್ನೋಟಿಕರ್ ತಿಳಿಸಿದರು.<br /> <br /> ಬರಪರಿಸ್ಥಿತಿ ಕುರಿತು ಮಂಗಳವಾರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕೊಂಡೊಯ್ದು ಹೆಚ್ಚಿನ ಪರಿಹಾರ ನೀಡುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.<br /> <br /> ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ಕೈಗೊಳ್ಳಲು ರೂ 45 ಕೋಟಿ ಬೇಡಿಕೆ ಸಲ್ಲಿಸಲಾಗಿತ್ತು. ಇದರಲ್ಲಿ ಈಗಾಗಲೇ ರೂ 1 ಕೋಟಿ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ರೂ 2 ಕೋಟಿ ಬಿಡುಗಡೆಯಾಗಲಿದೆ ಎಂದರು.<br /> <br /> ಪ್ರಸ್ತುತ ಬೆಳೆಗಳು ಬೆಂಕಿ ತಗುಲಿದ ರೀತಿಯಲ್ಲಿದ್ದು ಒಣಗಿವೆ. ರೈತರು ಅಪಾರ ನಷ್ಟಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> ದಾವಣಗೆರೆ ಜಿಲ್ಲೆ ಸುತ್ತಮುತ್ತ ಮೇವು ದೊರೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ, ಆಂಧ್ರಪ್ರದೇಶದಿಂದ ಮೇವು ತರಲಾಗುವುದು. 2004ರಲ್ಲಿ ರೂ 1,500ಗೆ ಒಂದು ಟನ್ ಮೇವು ದೊರೆಯುತ್ತಿತ್ತು. ಈಗ ರೂ 4000ಕ್ಕೆ ಏರಿದೆ ಎಂದು ತಿಳಿಸಿದರು.<br /> <br /> ಈಗಾಗಲೇ ಏಳು ಮೇವು ಬ್ಯಾಂಕ್ಗಳನ್ನು ಆರಂಭಿಸಲಾಗಿದೆ. ಜತೆಗೆ, ಗೋಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಬರ ಪರಿಸ್ಥಿತಿ ಉಂಟಾದಾಗ ಆರಂಭಿಸಿದ್ದ ಗೋಶಾಲೆಗಳನ್ನು ದುರಸ್ತಿ ಮಾಡಿ ಪುನಾರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಹಶೀಲ್ದಾರ್ ನೇತೃತ್ವದ ಕಾರ್ಯಪಡೆ ರಚಿಸಲಾಗಿದೆ. ಈಗಾಗಲೇ ರೂ 10 ಲಕ್ಷ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಕೇಂದ್ರ ಸರ್ಕಾರ ಪ್ರತಿ ತಾಲ್ಲೂಕನ್ನು ಘಟಕ ಎಂದು ಪರಿಗಣಿಸುತ್ತದೆ. ಒಟ್ಟಾರೆ ಶೇ. 50ಕ್ಕಿಂತ ಕಡಿಮೆ ಮಳೆಯಾಗಿರಬೇಕು. ಜಿಲ್ಲೆಯಲ್ಲಿ ಬಿತ್ತನೆ ಜಾಸ್ತಿಯಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಜಿಲ್ಲೆಯ 17 ಹೋಬಳಿಗಳಲ್ಲಿ ಸಂಪೂರ್ಣ ಬರಪರಿಸ್ಥಿತಿ ಉಂಟಾಗಿದೆ ಮತ್ತು ಒಟ್ಟಾರೆ ರೂ 432 ಕೋಟಿ ಬೆಳೆ ನಷ್ಟವಾಗಿದೆಯಾದರೂ ಕೇಂದ್ರ ಸರ್ಕಾರ ರೂಪಿಸಿದ ನಿಯಮಾವಳಿಗಳಿಂದಾಗಿ ಚಿತ್ರದುರ್ಗವನ್ನು ಬರಪೀಡಿತ ಎಂದು ಘೋಷಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಆಸ್ನೋಟಿಕರ್ ತಿಳಿಸಿದರು.<br /> <br /> ಬರಪರಿಸ್ಥಿತಿ ಕುರಿತು ಮಂಗಳವಾರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕೊಂಡೊಯ್ದು ಹೆಚ್ಚಿನ ಪರಿಹಾರ ನೀಡುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.<br /> <br /> ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ಕೈಗೊಳ್ಳಲು ರೂ 45 ಕೋಟಿ ಬೇಡಿಕೆ ಸಲ್ಲಿಸಲಾಗಿತ್ತು. ಇದರಲ್ಲಿ ಈಗಾಗಲೇ ರೂ 1 ಕೋಟಿ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ರೂ 2 ಕೋಟಿ ಬಿಡುಗಡೆಯಾಗಲಿದೆ ಎಂದರು.<br /> <br /> ಪ್ರಸ್ತುತ ಬೆಳೆಗಳು ಬೆಂಕಿ ತಗುಲಿದ ರೀತಿಯಲ್ಲಿದ್ದು ಒಣಗಿವೆ. ರೈತರು ಅಪಾರ ನಷ್ಟಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /> <br /> ದಾವಣಗೆರೆ ಜಿಲ್ಲೆ ಸುತ್ತಮುತ್ತ ಮೇವು ದೊರೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ, ಆಂಧ್ರಪ್ರದೇಶದಿಂದ ಮೇವು ತರಲಾಗುವುದು. 2004ರಲ್ಲಿ ರೂ 1,500ಗೆ ಒಂದು ಟನ್ ಮೇವು ದೊರೆಯುತ್ತಿತ್ತು. ಈಗ ರೂ 4000ಕ್ಕೆ ಏರಿದೆ ಎಂದು ತಿಳಿಸಿದರು.<br /> <br /> ಈಗಾಗಲೇ ಏಳು ಮೇವು ಬ್ಯಾಂಕ್ಗಳನ್ನು ಆರಂಭಿಸಲಾಗಿದೆ. ಜತೆಗೆ, ಗೋಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಬರ ಪರಿಸ್ಥಿತಿ ಉಂಟಾದಾಗ ಆರಂಭಿಸಿದ್ದ ಗೋಶಾಲೆಗಳನ್ನು ದುರಸ್ತಿ ಮಾಡಿ ಪುನಾರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಹಶೀಲ್ದಾರ್ ನೇತೃತ್ವದ ಕಾರ್ಯಪಡೆ ರಚಿಸಲಾಗಿದೆ. ಈಗಾಗಲೇ ರೂ 10 ಲಕ್ಷ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಕೇಂದ್ರ ಸರ್ಕಾರ ಪ್ರತಿ ತಾಲ್ಲೂಕನ್ನು ಘಟಕ ಎಂದು ಪರಿಗಣಿಸುತ್ತದೆ. ಒಟ್ಟಾರೆ ಶೇ. 50ಕ್ಕಿಂತ ಕಡಿಮೆ ಮಳೆಯಾಗಿರಬೇಕು. ಜಿಲ್ಲೆಯಲ್ಲಿ ಬಿತ್ತನೆ ಜಾಸ್ತಿಯಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>