<p><strong>ಚಾಮರಾಜನಗರ:</strong> ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.<br /> <br /> ಕೇವಲ 15 ನಿಮಿಷದ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆಯುವ ಕಸರತ್ತು ನಡೆಸಿದರು. ಕಾಟಾಚಾರಕ್ಕೆ ನಡೆದ ಸಭೆಯಲ್ಲಿ ಸಚಿವರಿಗೆ ಅಧಿಕಾರಿಗಳಿಂದಲೂ ಸಮರ್ಪಕ ಮಾಹಿತಿ ದೊರೆಯಲಿಲ್ಲ.<br /> <br /> ಜಿಲ್ಲೆಯಲ್ಲಿ ಮೇವು ಪೂರೈಕೆಯ ಕೊರತೆಯಿಂದ ಜಾನುವಾರು ಸಾಯುತ್ತಿವೆ ಎಂದು ನಾಗರಿಕರು ಅಳಲು ತೋಡಿಕೊಳ್ಳುತ್ತಾರೆ. ಈ ಕುರಿತು ಯಾವ ಕ್ರಮಕೈಗೊಂಡಿದ್ದೀರಿ? ಎಂದು ಜಿಲ್ಲಾ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು.<br /> <br /> ಕೇವಲ 5 ಜಾನುವಾರು ಮಾತ್ರ ಅಸುನೀಗಿವೆ ಎಂಬ ಉತ್ತರ ಅಧಿಕಾರಿಗಳಿಂದ ಬಂತು. ಈ ನಡುವೆ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, `ಚಾಮರಾಜನಗರ ತಾಲ್ಲೂಕಿನಲ್ಲಿ ನೂರಾರು ಜಾನುವಾರು ಮೃತಪಟ್ಟಿವೆ~ ಎಂದರು.<br /> <br /> ಶಾಸಕರ ಮಾತಿನಿಂದ ಸಿಟ್ಟಾದ ರೇಣುಕಾಚಾರ್ಯ, `ಸಭೆಗೆ ಬರುವಾಗ ಅಧಿಕಾರಿಗಳು ಸಮರ್ಪಕ ಮಾಹಿತಿ ತರಬೇಕು. ತಪ್ಪು ಮಾಹಿತಿ ನೀಡಬಾರದು~ ಎಂದ ಅವರು, ಕುಡಿಯುವ ನೀರು ಹಾಗೂ ಮೇವು ಪೂರೈಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಬಾರದು~ ಎಂದು ಸೂಚಿಸಿದರು.<br /> <br /> ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ, ಉಪ ಕಾರ್ಯದರ್ಶಿ ಎ.ಪಿ. ಶಂಕರರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.<br /> <br /> ಕೇವಲ 15 ನಿಮಿಷದ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆಯುವ ಕಸರತ್ತು ನಡೆಸಿದರು. ಕಾಟಾಚಾರಕ್ಕೆ ನಡೆದ ಸಭೆಯಲ್ಲಿ ಸಚಿವರಿಗೆ ಅಧಿಕಾರಿಗಳಿಂದಲೂ ಸಮರ್ಪಕ ಮಾಹಿತಿ ದೊರೆಯಲಿಲ್ಲ.<br /> <br /> ಜಿಲ್ಲೆಯಲ್ಲಿ ಮೇವು ಪೂರೈಕೆಯ ಕೊರತೆಯಿಂದ ಜಾನುವಾರು ಸಾಯುತ್ತಿವೆ ಎಂದು ನಾಗರಿಕರು ಅಳಲು ತೋಡಿಕೊಳ್ಳುತ್ತಾರೆ. ಈ ಕುರಿತು ಯಾವ ಕ್ರಮಕೈಗೊಂಡಿದ್ದೀರಿ? ಎಂದು ಜಿಲ್ಲಾ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು.<br /> <br /> ಕೇವಲ 5 ಜಾನುವಾರು ಮಾತ್ರ ಅಸುನೀಗಿವೆ ಎಂಬ ಉತ್ತರ ಅಧಿಕಾರಿಗಳಿಂದ ಬಂತು. ಈ ನಡುವೆ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, `ಚಾಮರಾಜನಗರ ತಾಲ್ಲೂಕಿನಲ್ಲಿ ನೂರಾರು ಜಾನುವಾರು ಮೃತಪಟ್ಟಿವೆ~ ಎಂದರು.<br /> <br /> ಶಾಸಕರ ಮಾತಿನಿಂದ ಸಿಟ್ಟಾದ ರೇಣುಕಾಚಾರ್ಯ, `ಸಭೆಗೆ ಬರುವಾಗ ಅಧಿಕಾರಿಗಳು ಸಮರ್ಪಕ ಮಾಹಿತಿ ತರಬೇಕು. ತಪ್ಪು ಮಾಹಿತಿ ನೀಡಬಾರದು~ ಎಂದ ಅವರು, ಕುಡಿಯುವ ನೀರು ಹಾಗೂ ಮೇವು ಪೂರೈಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಬಾರದು~ ಎಂದು ಸೂಚಿಸಿದರು.<br /> <br /> ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ, ಉಪ ಕಾರ್ಯದರ್ಶಿ ಎ.ಪಿ. ಶಂಕರರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>