<p>ನಾಯಕನಹಟ್ಟಿ: ರಾಜ್ಯದ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕಿ ಮೋಟಮ್ಮ ಬುಧವಾರ ಇಲ್ಲಿ ಆರೋಪಿಸಿದರು.<br /> <br /> ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ, ಚಿತ್ರದುರ್ಗ ತಾಲ್ಲೂಕಿನ ತುರುವನೂರು ಗ್ರಾಮಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ದರ್ಶನ ಪಡೆಯಲು ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ರಾಜ್ಯ ಸರ್ಕಾರ 123 ತಾಲ್ಲೂಕುಗಳನ್ನು ಬರಪೀಡಿತ ಎದು ಘೋಷಣೆ ಮಾಡಿ ಆರು ತಿಂಗಳು ಕಳೆದಿವೆಯಾದರೂ, ಜನರ ಗೋಳು ಕೇಳದೇ ಕೇವಲ ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ ಎಂದು ಟೀಕಿಸಿದರು.<br /> <br /> ರಾಜ್ಯದಲ್ಲಿ ಕುಡಿಯುವ ನೀರಿಲ್ಲದೇ ಜನರು ಪರದಾಡುತ್ತಿದ್ದಾರೆ. ಜನ ಜಾನುವಾರುಗಳಿಗೆ ಮೇವಿಲ್ಲ. ಗೋಶಾಲೆಗಳು ನಾಮಕಾವಸ್ಥೆಗೆ ಇವೆ. ಬರಗಾಲ ನಿರ್ವಹಣೆಗೆಂದು ಕೊಳವೆಬಾವಿ ಕೊರೆಸಿದ್ದಾರೆ. ಆದರೆ ಅಲ್ಲಿ ನೀರು ದೊರೆತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಚಿವರು ಗಮನ ಇತ್ತ ಗಮನಹರಿಸುತ್ತಿಲ್ಲ ಎಂದು ದೂರಿದರು.<br /> <br /> ಖಾಲಿ ಕೊಡ ಪ್ರದರ್ಶನ: ಬರಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಮೋಟಮ್ಮ ಅವರ ನೇತೃತ್ವದ ತಂಡ ಹಿರೇಹಳ್ಳಿಗೆ ಆಗಮಿಸಿದಾಗ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಕುರಿತು ಗಮನ ಸಳೆದರು. <br /> <br /> ಶಾಸಕ ಗೋಪಾಲಕೃಷ್ಣ ಮಾತನಾಡಿ, ಸುಮಾರು 6 ಕಿ.ಮೀ. ದೂರದಿಂದ ನೀರು ಸರಬರಾಜಿಗೆ ಪೈಪ್ಲೈನ್ ಅಳವಡಿಸಲು ನಿರ್ಧರಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ, ಕಾಮಗಾರಿ ತ್ವರಿತವಾಗಿ ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದರು. <br /> <br /> ಶಾಸಕರಾದ ನೆ.ಲ. ನರೇಂದ್ರಬಾಬು, ವೆಂಕಟೇಶ್, ಜಿ.ಪಂ. ಉಪಾಧ್ಯಕ್ಷರಾದ ಭಾರತಿ ಕಲ್ಲೇಶ್, ಜಿ.ಪಂ. ಮಾಜಿ ಅಧ್ಯಕ್ಷ ಬಾಲರಾಜ್, ಗೀತಾನಂದಿನಿಗೌಡ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಯಕನಹಟ್ಟಿ: ರಾಜ್ಯದ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕಿ ಮೋಟಮ್ಮ ಬುಧವಾರ ಇಲ್ಲಿ ಆರೋಪಿಸಿದರು.<br /> <br /> ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ, ಚಿತ್ರದುರ್ಗ ತಾಲ್ಲೂಕಿನ ತುರುವನೂರು ಗ್ರಾಮಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ದರ್ಶನ ಪಡೆಯಲು ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ರಾಜ್ಯ ಸರ್ಕಾರ 123 ತಾಲ್ಲೂಕುಗಳನ್ನು ಬರಪೀಡಿತ ಎದು ಘೋಷಣೆ ಮಾಡಿ ಆರು ತಿಂಗಳು ಕಳೆದಿವೆಯಾದರೂ, ಜನರ ಗೋಳು ಕೇಳದೇ ಕೇವಲ ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ ಎಂದು ಟೀಕಿಸಿದರು.<br /> <br /> ರಾಜ್ಯದಲ್ಲಿ ಕುಡಿಯುವ ನೀರಿಲ್ಲದೇ ಜನರು ಪರದಾಡುತ್ತಿದ್ದಾರೆ. ಜನ ಜಾನುವಾರುಗಳಿಗೆ ಮೇವಿಲ್ಲ. ಗೋಶಾಲೆಗಳು ನಾಮಕಾವಸ್ಥೆಗೆ ಇವೆ. ಬರಗಾಲ ನಿರ್ವಹಣೆಗೆಂದು ಕೊಳವೆಬಾವಿ ಕೊರೆಸಿದ್ದಾರೆ. ಆದರೆ ಅಲ್ಲಿ ನೀರು ದೊರೆತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಚಿವರು ಗಮನ ಇತ್ತ ಗಮನಹರಿಸುತ್ತಿಲ್ಲ ಎಂದು ದೂರಿದರು.<br /> <br /> ಖಾಲಿ ಕೊಡ ಪ್ರದರ್ಶನ: ಬರಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಮೋಟಮ್ಮ ಅವರ ನೇತೃತ್ವದ ತಂಡ ಹಿರೇಹಳ್ಳಿಗೆ ಆಗಮಿಸಿದಾಗ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಕುರಿತು ಗಮನ ಸಳೆದರು. <br /> <br /> ಶಾಸಕ ಗೋಪಾಲಕೃಷ್ಣ ಮಾತನಾಡಿ, ಸುಮಾರು 6 ಕಿ.ಮೀ. ದೂರದಿಂದ ನೀರು ಸರಬರಾಜಿಗೆ ಪೈಪ್ಲೈನ್ ಅಳವಡಿಸಲು ನಿರ್ಧರಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ, ಕಾಮಗಾರಿ ತ್ವರಿತವಾಗಿ ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದರು. <br /> <br /> ಶಾಸಕರಾದ ನೆ.ಲ. ನರೇಂದ್ರಬಾಬು, ವೆಂಕಟೇಶ್, ಜಿ.ಪಂ. ಉಪಾಧ್ಯಕ್ಷರಾದ ಭಾರತಿ ಕಲ್ಲೇಶ್, ಜಿ.ಪಂ. ಮಾಜಿ ಅಧ್ಯಕ್ಷ ಬಾಲರಾಜ್, ಗೀತಾನಂದಿನಿಗೌಡ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>